ತೇರದಾಳ ಪಟ್ಟಣದ ಕುಡಚಿ ರಸ್ತೆಯಲ್ಲಿರುವ ರಾಯಲ್ ಬಾರ್ ಹಾಗೂ ರೆಸ್ಟೋರೆಂಟ್ನಲ್ಲಿ ತಂಗಿದ್ದ ಇಬ್ಬರಿಗೆ ಬೆಂಕಿ ತಗುಲಿ ಗಾಯಗಳಾಗಿರುವ ಘಟನೆ ಜರುಗಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗುರುಪಾದಯ್ಯ ಕಲ್ಯಾಣಯ್ಯ ಮಠಪತಿ ಹಾಗೂ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದ ಅಕ್ಷತಾ, ಶ್ರೀಶೈಲ್ ಸತ್ತಿ ಗಾಯಗೊಂಡಿದ್ದಾರೆ. ಜಮಖಂಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣ ದಾಖಲಿಸಿಕೊಂಡ ತೇರದಾಳ ಠಾಣಾಧಿಕಾರಿ ಶಿವಾನಂದ ಸಿಂಗನ್ನವರ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕಾರ್ಯ ಕೈಗೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.





