ಯುಪಿಎ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಮನರೇಗಾ ಕಾಯ್ದೆಯನ್ನು ಜಾರಿಗೆ ತಂದು, ದೆಹಲಿಯಿಂದ ಆಡಳಿತ ಆಗಬಾದೆಂದು ಗ್ರಾಮ ಪಂಚಾಯಿತಿಗೆ ಇದರ ಅಧಿಕಾರ ನೀಡಿದ್ದರು. ಆದರೆ ಕಾರ್ಪೊರೇಟ್ಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಕೇಂದ್ರ ಸರ್ಕಾರವು ಅದಾನಿ, ಅಂಬಾನಿ ಅವರನ್ನು ಗ್ರಾಮ ಪಂಚಾಯಿತಿಗೂ ತರುವ ಹುನ್ನಾರ ಮಾಡುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ಆರೋಪಿಸಿದರು.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಉದ್ಯೋಗ ಖಾತ್ರಿ ಮೂಲಕ ತಮ್ಮ ಗ್ರಾಮಕ್ಕೆ ಬೇಕಾದ ಕೆಲಸವನ್ನು ಗ್ರಾಮದವರೇ ನಿರ್ಧಾರ ಮಾಡಿಕೊಳ್ಳುತ್ತಿದ್ದರು.ಈಗ ಅಧಿಕಾರವನ್ನು ಸಂಸತ್ತಿಗೆ ವರ್ಗಾಯಿಸಲಾಗಿದೆ” ಎಂದು ದೂರಿದರು.
“ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬದಲಾವಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿಗಿದ್ದ ಅಧಿಕಾರವನ್ನು ಕಿತ್ತುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಜನರ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.
“ಕೇಂದ್ರ ಸರ್ಕಾರವೇ ಎಲ್ಲ ಅನುದಾನ ನೀಡುತ್ತಿತ್ತು. ಈಗ ಅದನ್ನು ಕೇಂದ್ರದ್ದು ಶೇ.60, ರಾಜ್ಯದ್ದು ಶೇ.40ರಷ್ಟು ಎಂದು ಬದಲಾಯಿಸಲಾಗಿದೆ. ಆ ಮೂಲಕ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಸ್ತುವಾರಿ ನೀಡಲಾಗಿದೆಯೇ ಎಂಬ ಪ್ರಶ್ನೆಗೆ, ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ. ಉಸ್ತುವಾರಿ ಯಾರದ್ದು ಎನ್ನುವುದಕ್ಕಿಂತ ಚುನಾವಣೆ ಗೆಲ್ಲುವುದು ಮುಖ್ಯವಾಗಿದೆ. ಗ್ಯಾರಂಟಿಗಳು ಕಾಂಗ್ರೆಸ್ ಕೈ ಹಿಡಿಯಲಿವೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಮೂಲಕ ಆಸ್ತಿ ಸೃಷ್ಟಿ: ಸಚಿವ ಎಚ್ ಕೆ ಪಾಟೀಲ್
“ಅನುದಾನ ಕಡಿತ ಮಾಡಲಾಗುತ್ತಿದೆ. ರಾಜ್ಯದ ತೆರಿಗೆಯಲ್ಲಿಯೂ ಕಡಿಮೆ ಪಾಲು ನೀಡಲಾಗುತ್ತಿದೆ. ಈ ಮೂಲಕ ಬಡಜನರ ಉದ್ಯೋಗ ಕಿತ್ತುಕೊಳ್ಳಲಾಗುತ್ತಿದೆ. ಕೇಂದ್ರದ ದೋರಣೆ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
“ರಾಮನ ಹೆಸರನ್ನು ರಾಜಕೀಯಕ್ಕಾಗಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯವನ್ನೂ ಹತ್ತಿಕ್ಕಲಾಗುತ್ತಿದೆ” ಎಂದು ಟೀಕಿಸಿದರು.





