ಬಾಗಲಕೋಟೆ | ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀರು ಪೋಲು; ಸಿಬ್ಬಂದಿ ಮೇಲೆ ಸ್ಥಳೀಯರ ಬೇಸರ

Date:

ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.

ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು, ರೈತರು ಸೇರಿದಂತೆ ಎಲ್ಲ ವರ್ಗದ ಜನರು ಒಂದಿಲ್ಲೊಂದು ಸಮಸ್ಯೆ ಎದುರಿಸುತ್ತಿದ್ದಾರೆ. ನೀರಿನ ಮೂಲಗಳು ಬತ್ತುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಹನಿ ನೀರಿಗೂ ಪರಿದಾಡುವ ಸ್ಥಿತಿ ನಿರ್ಮಾಣವಾಗುವ ಭೀತಿ ಇದೆ. ಈ ಮಧ್ಯೆ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಟ್ಯಾಂಕರ್‌ಗಳ ಮೊರೆಹೋಗಿದ್ದು, ಬೆಳೆ ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ.

ಈಗಾಗಲೇ ಆದೆಷ್ಟೊ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಜನರು ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿರುವಾಗ, ಜಿಲ್ಲಾಧಿಕಾರಿಗಳ ಕಚೇರಿಯ ಅದೊಂದು ಸ್ಥಳದಲ್ಲಿ, ನಲ್ಲಿ ನೀರು 24ತಾಸು ಬೇಕಾಬಿಟ್ಟಿಯಾಗಿ ಹರಿಯುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ಕಚೇರಿಯಲ್ಲಿರುವಂತ ಪುರುಷರ ಶೌಚಾಲಯದಲ್ಲಿ ಈ ಮಟ್ಟಿಗೆ ನೀರು ನಿರಂತರವಾಗಿ ಹರಿದು ಪೋಲಾಗುತ್ತದೆ. ಶೌಚಾಲಯದಲ್ಲಿ ಕೈ ತೊಳೆಯುವ ಸಿಂಕ್‌ ನಲ್ಲಿ ನೀರು 24 ಗಂಟೆಯೂ ಹರಿಯುತ್ತಿದೆ. ನಲ್ಲಿ ದುರಸ್ತಿಯ ಅಗತ್ಯವಿದ್ದರೂ ರಿಪೇರಿ ಮಾಡಿಸಿಲ್ಲ. ಬದಲಾಗಿ ನಲ್ಲಿ ಮೇಲೊಂದು ಕಲ್ಲಿಟ್ಟಿದ್ದಾರೆ.

ಎರಡು ತಿಂಗಳಿಂದ ಇದೇ ರೀತಿ ಸಮಸ್ಯೆ ಇದ್ದರೂ ಕಡಿಮೆ ಕರ್ಚಿನಲ್ಲಿ ರಿಪೇರಿ ಆಗುವ ಈ ಕೆಲಸವನ್ನು ಹಣ ಕೊಟ್ಟು ರಿಪೇರಿ ಮಾಡಿಸಲು ಜಿಲ್ಲಾಡಳಿತ ಭವನ ಸಿಬ್ಬಂದಿ ಮನಸ್ಸು ಮಾಡದೇ ಇರುವುದು ವಿಪರ್ಯಾಸ. ಜಿಲ್ಲಾಡಳಿತ ಸಿಬ್ಬಂದಿಗಳ ಈ ಬೇಜವಾಬ್ದಾರಿತನಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...