ದುರ್ಗಾ ದೌಡ್: ಸಂಘಪರಿವಾರದ ಕಾರ್ಯಕರ್ತನಂತೆ ಕೇಸರಿ ಧ್ವಜ ಹಿಡಿದು ಸಾಗಿದ ಮುಧೋಳ ಪಿಎಸ್‌ಐ!

Date:

ಪೊಲೀಸ್ ಇಲಾಖೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕಾರ್ಯಕರ್ತರು ತುಂಬಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತಹ ಬೆಳವಣಿಗೆಗಳು ಆಗ್ಗಾಗ್ಗೆ ರಾಜ್ಯದಲ್ಲಿ ನಡೆಯುತ್ತಿದೆ.

ಇತ್ತೀಚೆಗಷ್ಟೇ ಗಣೇಶೋತ್ಸವದ ಮೆರವಣಿಗೆಯ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನೇಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಚಿದಾನಂದ ಸವದಿ ಎಂಬುವವರು ಡಿಜೆ ಹಾಡಿಗೆ ಸಮವಸ್ತ್ರದಲ್ಲೇ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಇದೀಗ ಮತ್ತೊಂದು ಹೊಸ ಬೆಳವಣಿಗೆ ನಡೆದಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಂಘಪರಿವಾರ ಹಮ್ಮಿಕೊಂಡಿದ್ದ ‘ದುರ್ಗಾ ಮಾತಾ ದೌಡ್’ ಎಂಬ ಮೆರವಣಿಗೆಯಲ್ಲಿ ಪಿಎಸ್‌ಐ ಒಬ್ಬರು, ಸಂಘಪರಿವಾರದ ಕಾರ್ಯಕರ್ತನಂತೆ ಕೇಸರಿ ಧ್ವಜ ಹಿಡಿದು ಸಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪಿಎಸ್‌ಐ ಮುಧೋಳ

ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕರ್ತವ್ಯದಲ್ಲಿರುವ ಅಜಿತ್ ಹೊಸಮನಿ ಎಂಬುವವರು ದುರ್ಗಾ ಮಾತಾ ದೌಡ್ ಎಂಬ ಮೆರವಣಿಗೆಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಕೇಸರಿ ಧ್ವಜ ಹಿಡಿದು ಸಾಗಿರುವ ಫೋಟೋ ಸದ್ಯ ಹರಿದಾಡಿದ್ದು, ಇವರ ವಿರುದ್ಧ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗೃಹ ಇಲಾಖೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಗಣೇಶ ವಿಸರ್ಜನೆ ಮೆರವಣಿಗೆ: ಸಮವಸ್ತ್ರದಲ್ಲೇ ಡಿಜೆ ಹಾಡಿಗೆ ಡ್ಯಾನ್ಸ್ ಮಾಡಿದ ಪಿಎಸ್‌ಐ!

ಮುಧೋಳದಲ್ಲಿ ಸಂಘಪರಿವಾರದ ಕಾರ್ಯಕರ್ತರೇ ಕಟ್ಟಿಕೊಂಡಿರುವ ಶಿವ ಪ್ರತಿಷ್ಠಾಣ ಹಿಂದುಸ್ತಾನ ಎಂಬ ಸಂಘಟನೆಯ ನೇತೃತ್ವದಲ್ಲಿ ಗೋವಿಂದಪುರ ಗಲ್ಲಿಯ ದುರ್ಗಾದೇವಿ ದೇವಸ್ಥಾನದಿಂದ ಅಕ್ಟೋಬರ್ 10ರಂದು ‘ದೇಶ, ಧರ್ಮ ರಕ್ಷಣೆಗಾಗಿ, ಅಖಂಡ ಹಿಂದೂ ರಾಷ್ಟ್ರಕ್ಕಾಗಿ ಸಂಕಲ್ಪ ಮಾಡೋಣ’ ಎಂಬ ಧ್ಯೇಯವಾಕ್ಯದಡಿ ತಲವಾರು, ತ್ರಿಶೂಲ ಸಹಿತ ಇತರೆ ಆಯುಧಗಳನ್ನೆಲ್ಲ ಪ್ರದರ್ಶಿಸಿಕೊಂಡು ‘ದುರ್ಗಾ ಮಾತಾ ದೌಡ್’ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಮುಧೋಳ 2
‘ದುರ್ಗಾಮಾತಾ ದೌಡ್’ ಮೆರವಣಿಗೆಯ ಪೋಸ್ಟರ್

ಈ ವೇಳೆ ಕರ್ತವ್ಯ ನಿರತರಾಗಿದ್ದ ಮುಧೋಳ ಪೊಲೀಸ್ ಠಾಣೆಯ ಪಿಎಸ್‌ಐ ಅಜಿತ್ ಹೊಸಮನಿ ಎಂಬುವವರು ಮೆರವಣಿಗೆಯಲ್ಲಿ ಪೊಲೀಸ್ ಶೂ, ಟೋಪಿ ಕಳಚಿ, ತಲೆಯಲ್ಲಿ ಬಿಳಿ ಟೋಪಿ ಧರಿಸಿ ಭಾಗವಹಿಸಿದ್ದಲ್ಲದೇ, ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದಾರೆ. ಆ ಮೂಲಕ ಕರ್ತವ್ಯ ಲೋಪವೆಸಗಿದ್ದಾರೆ.

ದೌಡು 1
ಪುಟ್ಟ ಬಾಲಕಿಯರ ಕೈಯ್ಯಲ್ಲಿ ‘ಲವ್ ಜಿಹಾದ್’ ಬಗ್ಗೆ ಪ್ಲೆಕಾರ್ಡ್‌

ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಮುಧೋಳ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅಜಿತ್ ಹೊಸಮನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಸೇರಿದಂತೆ ಹಲವು ಮಂದಿ ಆಗ್ರಹಿಸಿದ್ದಾರೆ. ಈ ದುರ್ಗಾ ದೌಡ್ ಮೆರವಣಿಗೆಯಲ್ಲಿ ಪುಟ್ಟ ಬಾಲಕಿಯರ ಕೈಯ್ಯಲ್ಲಿ ‘ಲವ್ ಜಿಹಾದ್’ ಬಗ್ಗೆ ಪ್ಲೆಕಾರ್ಡ್‌ ಕೂಡ ನೀಡಿ, ಪ್ರದರ್ಶಿಸಲಾಗಿತ್ತು.

ಈ ಬಗ್ಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರನ್ನು ಈ ದಿನ.ಕಾಮ್ ಕಚೇರಿಯಿಂದ ಸಂಪರ್ಕಿಸಲಾಯಿತಾದರೂ, ಕರೆ ಸ್ವೀಕರಿಸಿಲ್ಲ.

ಈ ಬಗ್ಗೆ ಟ್ವೀಟ್ ಮಾಡಿರುವ ಎಸ್‌ಡಿಪಿಐ ರಾಜ್ಯ ಮುಖಂಡ ರಿಯಾಝ್ ಕಡಂಬು,”ಕರ್ನಾಟಕದ ಡಿಜಿಪಿಯವರಿಗೆ ಇದೆಲ್ಲ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ? ಕರ್ತವ್ಯ ನಿರತನಾಗಬೇಕಾದ ವ್ಯಕ್ತಿ ಧರ್ಮದ್ವೇಷ ಹರಡುವ ದುರ್ಗಾ ದೌಡು ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ನಾಯಕರಂತೆ ಪೊಲೀಸ್ ಇಲಾಖೆಯ ಸಮವಸ್ತ್ರ ಧರಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಪಿಎಸ್ಐ ಭಾಗವಹಿಸಿ ಕರ್ತವ್ಯ ಲೋಪವೆಸಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಸೂಕ್ತ ಕ್ರಮಕ್ಕೆ ಆದೇಶಿಸಿ” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...