ಬಾಗಲಕೋಟೆ | ವಿದ್ಯಾರ್ಥಿನಿ ಸಾವು: ಕಾಲೇಜಿನ ಲೈಸೆನ್ಸ್ ರದ್ದು ಮಾಡುವಂತೆ ಭೀಮ್ ಆರ್ಮಿ ಆಗ್ರಹ

Date:

ವಿದ್ಯಾರ್ಥಿನಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾದ ಬಾಗಲಕೋಟೆ ನಗರದ ಶಾರದಾ ಪಿಯು ಕಾಲೇಜಿನ ಉಪನ್ಯಾಸಕ ಹಾಗೂ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕಾಲೇಜಿನ ಪರವಾನಿಗೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭೀಮ ಆರ್ಮಿ ಸಂಘಟನೆ ಹಾಗೂ ದಲಿತ ಸಮಾಜದ ಮುಖಂಡರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಪ್ರತಿಭಾವಂತ ವಿದ್ಯಾರ್ಥಿನಿಯಾದ ತೇಜಸ್ವಿನಿ ಸುಂದರ ದೊಡ್ಡಮನಿಯು ಮಂಟುರ ರಸ್ತೆ ಗಾಂಧೀ ನಗರ ಹತ್ತಿರದ ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಶಾರದಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪ್ರಥಮ ವರ್ಷದಲ್ಲಿ ಓದುತ್ತಿದ್ದಳು. ವಾರ್ಷಿಕ ಪರೀಕ್ಷೆ ಮುಗಿದ ನಂತರ ಉಪನ್ಯಾಸಕರು ವಿದ್ಯಾರ್ಥಿನಿಯನ್ನು ಕಾರ್ಯಾಲಯಕ್ಕೆ ಕರೆಸಿ ಕಾಪಿ ಮಾಡಿರುವೆ, ಎರಡು ಉತ್ತರ ಪತ್ರಿಕೆಗಳು ಎಲ್ಲಿಂದ ಬಂದವು ಎಂದು ಪ್ರಶ್ನಿಸಿ, ತಾಯಿಯನ್ನು ಸಹ ಕಾಲೇಜಿಗೆ ಕರೆಸಿ ಅವರ ಮುಂದೆ ಮನಬಂದಂತೆ ಬೈದು, ತಪ್ಪು ಮಾಡಿದ್ದನ್ನು ಒಪ್ಪಿಕೋ ಎಂದು ಬೆದರಿಸಿದ್ದಾರೆ. ಆದರೆ ನಾನೇನೂ ತಪ್ಪು ಮಾಡಿಲ್ಲ ಎಂದು ಅವಳು ಹೇಳಿದ್ದಾಳೆ.

ಮುಂದುವರೆದು ಚರ್ಚೆ ವೇಳೆ ವಿದ್ಯಾರ್ಥಿನಿ ಹೆದರಿ ಕಾಲೇಜಿನಿಂದ ಓಡಿ ಹೋಗಿದ್ದಾಳೆ. ರಾತ್ರಿಯೆಲ್ಲ ಹುಡಿಕಿದರೂ ಸಿಗದಿದ್ದಾಗ ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮರುದಿನ ನಗರದ ಮಹಾರಾಣಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ಸಾವಿಗೆ ಕಾಲೇಜಿನ ಉಪನ್ಯಾಸಕರು, ಆಡಳಿತ ಮಂಡಳಿಯೇ ಕಾರಣ ಎಂದು ಪಾಲಕರು ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ. ಆದರೆ ಇಲ್ಲಿಯವರೆಗೆ ಕ್ರಮ ಕೈಗೊಳ್ಳದಿದ್ದಕ್ಕೆ ಸಂಘಟಕರು ರಸ್ತೆ ತಡೆದು, ಸಮಾಜದ ಮುಖಂಡರು ಸೇರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಸಾರ್ವಜನಿಕ ಸೌಲಭ್ಯಕ್ಕೆ ಮೀಸಲಿಟ್ಟ ಜಾಗಗಳ ಅತಿಕ್ರಮಣ ತೆರವಿಗೆ ಕರವೇ ಮನವಿ

ಪ್ರತಿಭಟನೆಯಲ್ಲಿ ಮುಖಂಡರಾದ ಕೃಷ್ಣಾ ಮಾದರ, ಸತೀಶ ಗಾಡಿ, ಮಹೇಶ ಹುಗ್ಗಿ, ಪ್ರಕಾಶ ಮಾಂಗ, ಪರಶು ಮೇತ್ರಿ, ಆಶೋಕ ಮಾಂಗ, ಮಾನಿಂಗ ಮೇತ್ರಿ, ಮಲೆಪ್ಪ ತಳಗೇರಿ, ಯಲ್ಲಪ್ಪ ತಳಗೇರಿ, ಹಾಸೀಂ ಜಕ್ಕಲಿ, ಕಾಶಿಂ ಕೆಸರಟ್ಟಿ, ಯಾಕೂಬ ಪೂಜಾರಿ, ಸುರೇಶ ಮೇತ್ರಿ, ರೇಣುಕಾ ತಳವಾರ, ರುಕೃವ್ವ ಪೂಜಾರಿ, ಯಮನವ್ವ ಈರಗಾರ, ಮಾದೇವ ಮೀಶಿ, ಮಜ್ಜು ಅಷ್ಟೋಜಿ, ಚೇತನ ಪೂಜಾರಿ, ಸಂಜು ಮಾಂಗ, ಪುಟ್ಟು ಮೇತ್ರಿ, ಕರಣಕುಮಾರ ಮೌರ್ಯ, ಸಂಘಟಕ ಸುನೀಲ ಕಂಬೋ ಗಿ, ಲವಿತ ಮೇತ್ರಿ, ಅನೀಲ ಬರಗಿ ಸೇರಿ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...