ಬಗರ್‌ ಹುಕುಂ : ವಾರದೊಳಗೆ ಹಕ್ಕುಪತ್ರ ವಿತರಣೆ; ಶಾಸಕ ಬೆಲ್ದಾಳೆ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರ

Date:

ಬೀದರ್ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ವಾರದೊಳಗೆ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಸೇರಿದಂತೆ ಅಗತ್ಯ  ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೋತ್ತರ ವೇಳೆ ಬೀದರ್‌ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಬೀದರ್ ದಕ್ಷಿಣ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚನೆ ಮಾಡದಿರುವ ಕುರಿತು ಪ್ರಸ್ತಾಪಿಸಿದರು. ಸಮಿತಿ ರಚನೆ ರಚಿಸಿ ಸಮಸ್ಯೆ ಇತ್ಯರ್ಥಪಡಿಸದ ಕಾರಣ ಬಗರ್ ಹುಕುಂ ಸಾಗುವಳಿದಾರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಸಮಿತಿ ರಚಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆʼ ಎಂದು ಸದನದ ಗಮನ ಸೆಳೆದರು.

ಶಾಸಕ ಬೆಲ್ದಾಳೆ ಅವರ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಿಸಿ ʼಕಾರಣಾಂತರಗಳಿಂದ ಬೀದರ್ ಜಿಲ್ಲೆಯಲ್ಲಿ ಈವರೆಗೂ ಬಗರ್ ಹುಕುಂ ಸಮಿತಿ ರಚಿಸಿಲ್ಲ. ವಿಳಂಬವಾಗಿರುವ ಬಗ್ಗೆ ಶಾಸಕರು ಹೇಳಿದ್ದನ್ನು ನಾನು ಒಪ್ಪುವೆ. ವಿಳಂಬಕ್ಕೆ ಕಾರಣ ಏನೆಂಬುದು ಸಬೂಬು ಹೇಳಲು ಹೋಗುವುದಿಲ್ಲ. ಸಮಿತಿ ರಚಿಸಿ ಮುಂದಿನ ಪ್ರಕ್ರಿಯೆಗಳು ನಡೆಸುವುದು ಸರ್ಕಾರದ ಕರ್ತವ್ಯʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮುಂದಿನ ಒಂದು ವಾರದೊಳಗೆ ಬೀದರ್ ದಕ್ಷಿಣ ಸೇರಿದಂತೆ ಜಿಲ್ಲೆಯ ಎಲ್ಲ ಆರು ಕ್ಷೇತ್ರಗಳಲ್ಲಿ ಸಮಿತಿ ರಚನೆಯಾಗಲಿವೆ. ಅರ್ಹ ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ನಿಯಮಾನುಸಾರ ಹಕ್ಕು ಪತ್ರ ನೀಡಲಿದೆ. ಯಾರಿಗೂ ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ವಿನಾಕಾರಣ ಆತಂಕ ಪಡುವ ಅಗತ್ಯವಿಲ್ಲʼ ಎಂದು ಅಭಯ ನೀಡಿದರು.

ʼ2004ರಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರು ಬೆಳೆದ ಬೆಳೆ ಕಟಾವಿನ ವೇಳೆ ಅಧಿಕಾರಿಗಳು ಬೆಳೆ ನಾಶಪಡಿಸಿ ಒಕ್ಕಲೆಬ್ಬಿಸುವುದು ಇಡೀ ರಾಜ್ಯಾದ್ಯಂತ ನಡೆಯುತ್ತಿದೆ. ಇದು ತುಂಬಾ ಗಂಭೀರ ಸಮಸ್ಯೆ. ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಲೇಬೇಕಾಗಿದೆ. ಸರ್ಕಾರ ದಲಿತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ, ಹಿಂದುಳಿದವರ ಹಿತ ಕಾಪಾಡಲು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅರ್ಹ ಉಳುಮೆದಾರರಿಗೆ ಹಕ್ಕುಪತ್ರ ನೀಡಿ, ಖಾತೆ, ಪಹಣಿ, ನೋಂದಣಿ ಮಾಡಿಕೊಡಬೇಕುʼ ಎಂದು ಶಾಸಕ ಬೆಲ್ದಾಳೆ ಗಮನ ಸೆಳೆದರು.

ʼರಾಜ್ಯದ ಬೇರೆಡೆ ಬಗರ್ ಹುಕುಂ ಸಕ್ರಮೀಕರಣ ಸಮಿತಿಗಳನ್ನು ರಚಿಸಿ ವರ್ಷವೇ ಉರುಳಿದೆ. ಆದರೆ ಬೀದರ್ ಜಿಲ್ಲೆಯಲ್ಲಿ ಸಮಿತಿಗಳನ್ನು ರಚನೆ ಏಕೆ ಮಾಡಿಲ್ಲ? ನಮ್ಮವರ ಮೇಲೇಕೆ ಹೀಗೆ  ಅನ್ಯಾಯ? ನಮ್ಮ ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದಾರೆ ಎಂಬ ಕಾರಣಕ್ಕೆ ಸರ್ಕಾರ ತಾರತಮ್ಯ ಮಾಡುತ್ತಿದೆಯೇʼ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಪ್ರಶ್ನಿಸಿದರು.

ʼಒಂದು ವಾರದೊಳಗೆ ಹಕ್ಕುಪತ್ರ ನೀಡಿ ನೋಂದಣಿ ಮಾಡಿಕೊಡುವುದಾಗಿ ಕಂದಾಯ ಸಚಿವರು ಕಳೆದ ಅಕ್ಟೋಬರ್‌ನಲ್ಲಿ ಘೋಷಣೆ ಮಾಡಿದ್ದರು. ಈ ಹೇಳಿಕೆ ನೀಡಿ ಆರು ತಿಂಗಳಾದರೂ ನಮ್ಮಲ್ಲಿ ಸಮಿತಿಯೇ ರಚನೆಯಾಗಿಲ್ಲ. ಸಾಗುವಳಿದಾರರು ಆತಂಕದಲ್ಲಿ ಅಲೆದಾಡುವಂತಾಗಿದೆ. ಬೀದರ್‌ನಲ್ಲಿ ಕಳೆದ 12 ವರ್ಷಗಳಿಂದ ಸಮಿತಿ ಸಭೆಯೇ ನಡೆದಿಲ್ಲ. ಹೀಗಾದರೆ ಇವರ ಸಮಸ್ಯೆ ನಿವಾರಣೆ ಆಗುವುದು ಯಾವಾಗ? ಇನ್ನು ಬಗರ್ ಹುಕುಂ ಸಾಗುವಳಿ ಹೆಸರಿನಲ್ಲಿ ಕೆಲವೆಡೆ ಭೂ ಮಾಫಿಯಾದವರು ಜಾಗ ಕಬಳಿಕೆ ಯತ್ನಿಸುತ್ತಿದ್ದಾರೆ ಎಂಬ ದೂರುಗಳು ಸಹ ಬರುತ್ತಿವೆ. ಸರ್ಕಾರ ಇದಕ್ಕಾಗಿ ಕಾಲಮಿತಿ ಕಾರ್ಯಯೋಜನೆ ಹಾಕಿಕೊಂಡು ಬಡ ಸಾಗುವಳಿದಾರರ ನೆರವಿಗೆ ಬರಬೇಕುʼ ಎಂದು ಕೋರಿದರು.

ʼಬೀದರ್ ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಎಲ್ಲ ಆರು ಕ್ಷೇತ್ರಗಳಲ್ಲಿ ಸಮಿತಿ ರಚನೆ ಮಾಡಿಲ್ಲ ಎಂದಾದರೆ ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರಣನಾʼ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಖಾರವಾಗಿ ಪ್ರಶ್ನಿಸಿದರು. ಮಹತ್ವದ ವಿಷಯದ ಬಗ್ಗೆ ಸರ್ಕಾರ ಗಮನಹರಿಸಬೇಕು. ಶಾಸಕ ಬೆಲ್ದಾಳೆ ಅವರ ಜನಪರ ವಿಷಯದ ಬೇಡಿಕೆಗೆ ಸರ್ಕಾರ ಸ್ಪಂದಿಸಿ ಶೀಘ್ರದಲ್ಲಿ ಬೀದರ್ ಜಿಲ್ಲೆಯಲ್ಲಿ ಸಮಿತಿ ರಚಿಸಿ ಗೊಂದಲ ನಿವಾರಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯ ಕೊಂದು ಆತ್ಮಹತ್ಯೆಗೆ ಶರಣಾದ ನವವಿವಾಹಿತ

ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶಾಸಕ ಬೆಲ್ದಾಳೆ ಅವರ ಬೇಡಿಕೆಗೆ ಧ್ವನಿಗೂಡಿಸಿ, ʼಸರ್ಕಾರ ವಿಳಂಬ ಮಾಡದೆ ಸಮಿತಿ ರಚಿಸಿ ಅರ್ಹರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ವಾರದಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸಚಿವ ಬೈರೇಗೌಡ ಅವರು ತಿಳಿಸಿ ಚರ್ಚೆಗೆ ತೆರೆ ಎಳೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...