ಬಾಗೇಪಲ್ಲಿ | ಧುಮ್ಮುಕ್ಕಿದ ಚಿತ್ರಾವತಿ ಜಲಾಶಯ; ಜನರಲ್ಲಿ ಸಂತಸ

Date:

ಕಳೆದ ಕೆಲ ದಿನಗಳಿಂದ ಸುರಿದ ಭರ್ಜರಿ ಮಳೆಗೆ ಬಾಗೇಪಲ್ಲಿ ಪಟ್ಟಣಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುವ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿದ್ದು, ಪಟ್ಟಣ ಮತ್ತು ಸುತ್ತಮುತ್ತಲಿನ ಜನರ ಮೊಗದಲ್ಲಿ ಸಂತಸ ಮೂಡಿದೆ.

ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿಯ ಪರಗೋಡು ಸಮೀಪದಲ್ಲಿ ನಿರ್ಮಾಣ ಮಾಡಿರುವ ಚಿತ್ರಾವತಿ ಜಲಾಶಯ ಕಳೆದ ವರ್ಷ ಮಳೆಯ ಕೊರತೆಯಿಂದ ತುಂಬಿರಲಿಲ್ಲ. ಇದೀಗ ತಾಲೂಕಿನ ಬಹುತೇಕ ಎಲ್ಲೆಡೆ ಮತ್ತು ಚಿತ್ರಾವತಿ ಜಲಾನಯನ ಪ್ರದೇಶದಲ್ಲಿ ಸುರಿದ ಭರ್ಜರಿ ಮಳೆಯಿಂದಾಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿ ತುಂಬಿ ಹರಿಯುತ್ತಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರಾವತಿ ಜಲಾಶಯವನ್ನು ವೀಕ್ಷಿಸಲು ತಂಡೋಪ ತಂಡವಾಗಿ ನಾಗರೀಕರು ಹೋಗುತ್ತಿದ್ದಾರೆ.

ಚಿತ್ರಾವತಿ ಜಲಾಶಯ
ಬಾಗೇಪಲ್ಲಿ ತಾಲೂಕಿನ ಪರಗೋಡು ಸಮೀಪದ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿರುವ ದೃಶ್ಯ.

ಒಮ್ಮೆ ಚಿತ್ರಾವತಿ ಜಲಾಶಯ ತುಂಬಿ ಹರಿದರೆ ಕನಿಷ್ಠ 2 ವರ್ಷದವರೆಗೆ ಬಾಗೇಪಲ್ಲಿ ಪಟ್ಟಣದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಎಂಬುದು ಸುತ್ತಮುತ್ತಲಿನ ಜನರು ಹಾಗೂ ರೈತರ ಸಂತಸಕ್ಕೆ ಪ್ರಮುಖ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಈ ಕುರಿತು ಪ್ರತಿಕ್ರಿಯಿಸಿರುವ ಬಾಗೇಪಲ್ಲಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌, ಚಿತ್ರಾವತಿ ಜಲಾಶಯ ತುಂಬಿ ಹರಿದಿದ್ದು ಎಲ್ಲರಲ್ಲೂ ಸಂತಸ ತಂದಿದೆ. ಪ್ರಮುಖವಾಗಿ ಬಾಗೇಪಲ್ಲಿ ಪಟ್ಟಣದ ಜನತೆಗೆ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಭರ್ತಿಯಾಗಿರುವುದರಿಂದಾಗಿ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಶುಕ್ರವಾರ ಪುರಸಭೆಯ ವತಿಯಿಂದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರ ನೇತೃತ್ವದಲ್ಲಿ ಬಾಗೀನವನ್ನು ಅರ್ಪಿಸಲಾಗುತ್ತದೆ ಎಂದರು.

  • ವರದಿ : ರಾ.ನ.ಗೋಪಾಲ ರೆಡ್ಡಿ, ಪತ್ರಕರ್ತ, ಬಾಗೇಪಲ್ಲಿ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...