ಬಾಗೇಪಲ್ಲಿ | ಡಿ.6 ರಂದು ಬಡವರ ಮದುವೆ ಹಬ್ಬ: ಶಾಸಕ ಸುಬ್ಬಾರೆಡ್ಡಿ

Date:

ಬಡವರು ತಮ್ಮ ಮಕ್ಕಳ ಮದುವೆಗೆ ಸಾಲ ಮಾಡುವುದನ್ನು ತಪ್ಪಿಸುವ ಏಕೈಕ ಉದ್ದೇಶದಿಂದ ಕಳೆದ 22ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಅಧಿಕಾರ ಇದ್ದರೂ ಇಲ್ಲದಿದ್ದರೂ ನನ್ನ ಜೀವ ಇರುವವರೆಗೂ ಕ್ಷೇತ್ರದಲ್ಲಿ ಸಮಾಜ ಸೇವೆ ಮತ್ತು ಉಚಿತ ಸಾಮೂಹಿಕ ವಿವಾಹಗಳನ್ನು ಮುಂದುವರೆಸಿಕೊಂಡು ಹೋಗು‌ತ್ತೇನೆ ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಶಾಸಕರ ಗೃಹ ಕಚೇರಿಯ ಆವರಣದಲ್ಲಿ ಡಿಸೆಂಬರ್‌ 6ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಜೋಡಿಗಳು ಹಾಗೂ ಅವರ ಪೋಷಕರಿಗೆ ನೂತನ ವಸ್ತ್ರ ಮತ್ತು ಸೀಮೆ ಹಸುಗಳನ್ನು ಖರೀದಿಸಲು ಮುಂಗಡ ನಗದು ಹಣ ವಿತರಿಸಿ ಮಾತನಾಡಿದರು.

“ಬಾಗೇಪಲ್ಲಿ ತಾಲೂಕು ಹಿಂದುಳಿದ ಪ್ರದೇಶವಾಗಿದ್ದು, ಸತತ ಬರಗಾಲದ ಹಿನ್ನಲೆಯಲ್ಲಿ ಈ ಭಾಗದ ಬಡಜನರು ಆರ್ಥಿಕ ಸಂಕಷ್ಟಕ್ಕೊಳಗಾಗಿ ಅನಿವಾರ್ಯವಾಗಿ ಸಾಲಮಾಡಿ ತಮ್ಮ ಮಕ್ಕಳ ಮದುವೆಗಳನ್ನು ಮಾಡುವಂತಹ ದುಃಸ್ಥಿತಿಯಲ್ಲಿದ್ದಾರೆ. ಕ್ಷೇತ್ರದ ಬಡಜನರಿಗೆ ನೆರವಾಗುವ ನಿಟ್ಟಿನಲ್ಲಿ ಕಳೆದ 22ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. 23ನೇ ವರ್ಷದಲ್ಲಿಯೂ ಕೂಡಾ ಉಚಿತ ಸಾಮೂಹಿಕ ವಿವಾಹಗಳಲ್ಲಿ ನೂತನ ದಂಪತಿಗಳ ಜೀವನ ನಿರ್ವಹಣೆಗಾಗಿ ಉಚಿತವಾಗಿ ಸೀಮೆ ಹಸುವನ್ನು ಕೊಡುಗೆಯಾಗಿ ನೀಡಲಾಗುವುದು. ಈ ಸೌಲಭ್ಯವನ್ನು ನೂತನ ದಂಪತಿಗಳು ಸದುಪಯೋಗಪಡಿಸಿಕೊಳ್ಳಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಗಳ ಗುತ್ತಿಗೆ ಪದ್ಧತಿಯಿಂದ ಕಾರ್ಮಿಕರನ್ನು ಒಕ್ಕಲೆಬ್ಬಿಸುತ್ತಿದ್ದಾರೆ: ಸೈಯದ್ ಮುಜೀಬ್

“ಕಳೆದ 22 ವರ್ಷಗಳ ಉಚಿತ ಸಾಮೂಹಿಕ ವಿವಾಹಗಳಲ್ಲಿ ಸುಮಾರು 8 ಸಾವಿರ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಾರು 4 ಸಾವಿರ ಸೀಮೆ ಹಸುಗಳನ್ನು ದಂಪತಿಗಳಿಗೆ ಉಚಿತ ಕೊಡುಗೆಯಾಗಿ ನೀಡಲಾಗಿದೆ. ಉಚಿತ ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹ ಅಥವಾ ಕಾನೂನುಬಾಹಿರ ಮದುವೆಗಳಿಗೆ ಅವಕಾಶವಿಲ್ಲ. ಸರ್ಕಾರದ ನಿಯಮಗಳಂತೆಯೇ ನಡೆಸಲಾಗುತ್ತದೆ. ತಪ್ಪು ಮಾಹಿತಿ ನೀಡಿ ಬಾಲ್ಯವಿವಾಹ ಅಥವಾ ಕಾನೂನುಬಾಹಿರ ವಿವಾಹಮಾಡಿಕೊಳ್ಳಲು ಪ್ರಯತ್ನಿಸಿದರೆ ಅಂತಹವರನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಹೊರಗೆ ಕಳುಹಿಸುತ್ತಾರೆ. ಈ ವರ್ಷದ ಉಚಿತ ಸಾಮೂಹಿಕ ವಿವಾಹಗಳಲ್ಲಿ ವಧು-ವರರ ಜೊತೆಯಲ್ಲಿ ಅವರ ಪೋಷಕರನ್ನು ವೇದಿಕೆಯ ಮೇಲೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಬೆಳಿಗ್ಗೆ 9ರಿಂದಲೇ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್ ಶೀಲ, ಎಸ್ ಎನ್ ಸುಬ್ಬಾರೆಡ್ಡಿ, ಡಾ ಎಸ್ ಅಮೃತ, ಎಸ್ ಎನ್ ಸೂರ್ಯನಾರಾಯಣರೆಡ್ಡಿ, ಭಾಗ್ಯಮ್ಮ, ರಾಮಕೃಷ್ಣಾರೆಡ್ಡಿ, ಸರಸ್ವತಮ್ಮ, ನರಸಿಂಹಪ್ಪ, ಬಿ ವಿ ವೆಂಕಟರಮಣ, ಪೂಜಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...