ಬಾಗೇಪಲ್ಲಿ : ಪಾಳು ಬಿದ್ದ ಪೂಲವಾರಪಲ್ಲಿ ಸರಕಾರಿ ಶಾಲೆ; ಹೇಳೋರಿಲ್ಲ, ಕೇಳೋರಿಲ್ಲ

Date:

ಸುತ್ತಲೂ ಗಿಡಗಂಟಿ, ಬಳ್ಳಿ, ಪೊದೆಗಳು ಬೆಳೆದು ನಿಂತಿವೆ. ಎತ್ತ ನೋಡಿದರೂ ಕಾಡಿನಂತೆ ಕಾಣುವ ವಾತಾವರಣ. ಸೋರುತ್ತಿರುವ ಮೇಲ್ಛಾವಣಿ, ಸ್ವಚ್ಛವಿಲ್ಲದ ಶೌಚಾಲಯ, ಅನೈರ್ಮಲ್ಯತೆಯಿಂದ ಕೂಡಿರುವ ಶಾಲಾವರಣ.

ಇದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಕ್ಷೇತ್ರವಾದ ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪೂಲವಾರಪಲ್ಲಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 44 ರಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ದುಸ್ಥಿತಿ.

ದಸರಾ ರಜೆ ಬಳಿಕ ಇದೀಗ ಮತ್ತೆ ಶಾಲಾ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಿರುವ ಶಾಲೆಯ ಆವರಣದಲ್ಲಿ ಸ್ವಚ್ಛ ಸುಂದರ ವಾತಾವರಣಕ್ಕಿಂತ ಅದ್ವಾನಗಳೇ ಹೆಚ್ಚು ಕಾಣುತ್ತಿವೆ. ತರಗತಿ ಕೊಠಡಿಗಳ ಸುತ್ತಲೂ ಗಿಡಗಂಟಿಗಳು, ಪೊದೆಗಳು ಬೃಹದಾಕಾರವಾಗಿ ಬೆಳೆದು ನಿಂತಿದ್ದು, ಹೇಳೋರು ಕೇಳೂರು ಇಲ್ಲದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Bagepalli school 1 1

ನಿರ್ವಹಣೆಯಿಲ್ಲದ ಶೌಚಾಲಯಗಳು :

ಇನ್ನು ಕೆಲ ಶಾಲಾ ಕೊಠಡಿಗಳು ಹಾಗೂ ಶೌಚಾಲಯಗಳ ಸ್ಥಿತಿಯಂತೂ ಶೋಚನೀಯವಾಗಿದ್ದು, ಬೀಳುವ ಹಂತಕ್ಕೆ ತಲುಪಿವೆ. ಮೋಲ್ಡಿಂಗ್ ಕಿತ್ತು ಬರುತ್ತಿದ್ದು, ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಆತಂಕ ಸೃಷ್ಟಿಸಿವೆ. ಶೌಚಾಲಯಗಳು ನಿರ್ವಹಣೆಯಿಲ್ಲದೆ ವಿದ್ಯಾರ್ಥಿಗಳು ಬಯಲು ಶೌಚವನ್ನು ಅವಲಂಬಿಸುವಂತಾಗಿದೆ.

ಶಾಲೆಯ ದುಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸಿಪಿಎಂ ಮುಖಂಡ ಚನ್ನರಾಯಪ್ಪ, ತಾಲೂಕಿನಲ್ಲಿ ದಲಿತ, ಕಾರ್ಮಿಕ, ಬಡವರ ಮಕ್ಕಳು ಓದುತ್ತಿರುವ ಶಾಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ನಿರ್ಲಕ್ಷಿಸಲಾಗುತ್ತಿದೆ. ಇಲ್ಲಿನ ಜನಪ್ರತಿ‌ನಿಧಿಗಳು ಮತ್ತು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಈ ಶಾಲೆಯ ದುಸ್ಥಿತಿ ಕೈಗನ್ನಡಿಯಾಗಿದೆ. ಹಾಗಾಗಿ ಕೂಡಲೇ ಸಂಬಂಧಪಟ್ಟವರು ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರಕಾರಗಳು ಕೊಟ್ಯಾಂತರ ರೂಪಾಯಿಗಳು ಖರ್ಚು ಮಾಡುತ್ತಿವೆಯಾದರೂ, ಪ್ರಗತಿ ಮಾತ್ರ ಸಾಧಿಸಲಾಗುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಒಟ್ಟಾರೆಯಾಗಿ, ಹತ್ತಲವು ಸಮಸ್ಯೆಗಳ ನಡುವೆಯೇ ಅರ್ಧವಾರ್ಷಿಕ ಪರೀಕ್ಷೆಗಳನ್ನು ಮುಗಿಸಿ, ದಸರಾ ರಜೆಯನ್ನು ಮುಗಿಸಿರುವ ವಿದ್ಯಾರ್ಥಿಗಳು ಇದೀಗ ಮತ್ತೆ ಶಾಲೆಗಳತ್ತ ಮುಖಮಾಡುತ್ತಿದ್ದು, ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

  • ವರದಿ : ರಾ.ನ.ಗೋಪಾಲ ರೆಡ್ಡಿ, ಪತ್ರಕರ್ತ, ಬಾಗೇಪಲ್ಲಿ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...