ಬಾಗೇಪಲ್ಲಿ | ಡಾ. ಬಿ ಆರ್ ಅಂಬೇಡ್ಕರ್ ಸೇನೆಯ ತಾಲೂಕು ಪದಾಧಿಕಾರಿಗಳ ಆಯ್ಕೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಮಹಾನಾಯಕ ಡಾ. ಬಿ ಆರ್‌ ಅಂಬೇಡ್ಕರ್ ಸೇನೆ (ರಿ)ಯ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದಲ್ಲಿ‌ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಲೂಕು ಅಧ್ಯಕ್ಷರಾಗಿ ನಾರಾಯಣ ಸ್ವಾಮಿ, ಉಪಾಧ್ಯಕ್ಷರಾಗಿ ಶ್ರೀನಿವಾಸ, ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಹಾಗೂ ಪದಾಧಿಕಾರಿಗಳಾಗಿ ನರಸಿಂಹಪ್ಪ , ವೆಂಕಟೇಶ್, ಮಲ್ಲಿಕಾರ್ಜುನ, ಸೋಮಶೇಖರ್, ರಾಮು, ಬಾಬು, ಫೈರೋಜ್ ಭಾಷಾ, ಮಲ್ಲೇಶಪ್ಪ, ವೆಂಕಟಾದ್ರಿ, ಶ್ರೀನಾಥ್, ನರಸಿಂಹಪ್ಪ ರಾಮಕೃಷ್ಣ, ಚಿನ್ನಾ, ಆದಿ , ಶ್ರೀನಾಥ್ ತಾಲ್ಲೂಕು ಮಹಿಳಾ ಘಟಕ ಅದ್ಯಕ್ಷ ಗಂಗುಲಮ್ಮ, ನಾಗರತ್ನಮ್ಮ ಜಿಲ್ಲಾ ಮಹಿಳಾ ಉಪಾಧ್ಯಕ್ಷೆ, ಜ್ಯೋತಿ ಮಹಿಳಾ ಕಾರ್ಯಾದ್ಯಕ್ಷೆ ಹಾಗೂ ಪದಾಧಿಕಾರಿಗಳಾದ ವನಜಾ, ರೂಪಾ, ಅರುಣಮ್ಮ, ರಾಧಮ್ಮ, ರಮಾದೇವಿ, ಭೂದೇವಿ ಹಾಗೂ ಕಾರ್ಮಿಕ ಘಟಕ ಅದ್ಯಕ್ಷರಾಗಿ ಗಂಗರಾಜು ಹಾಗೂ ಪದಾಧಿಕಾರಿಗಳಾದ ಬಾಬಾ ಪಕೃದ್ದೀನ್,ನರಸಿಂಹಪ್ಪ ಶಿವಾ,ಅನಿಲ್ ಶಾತಾಜ್ ಗಂಗಾಧರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ, “ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಆಶಯದಂತೆ ಸಂಘಟನೆಯು ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಯೋಜನೆಗಳನ್ನು ಹಾಕಿಕೊಂಡಿದ್ದು, ಸಾಮಾಜಿಕ ನ್ಯಾಯ ನೀಡಲು ರಾಜ್ಯಾದ್ಯಂತ ಶಾಖೆಗಳನ್ನು ಆರಂಭಿಸುವ ಮೂಲಕ ಸಂಘಟನೆಯ ಶಕ್ತಿ ಹೆಚ್ಚಿಸಲು ಪ್ರಯತ್ನಿಸುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಕ್ಷಕ ವೃತ್ತ ನಿರೀಕ್ಷ ಪ್ರಶಾಂತ್ ವರ್ಣಿ ಮಾತನಾಡಿ, ಡಾ.ಅಂಬೇಡ್ಕರ್ ಅವರು ಭಾರತಕ್ಕೆ ಸುಭದ್ರ ಸಂವಿಧಾನ ರಚಿಸಿ ತಳ ಸಮುದಾಯದ ಜನರ ಏಳಿಗೆಗೆ ಮತ್ತು ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಅವಕಾಶ ಮಾಡಿಕೊಡುವ ಮೂಲಕ `ಮಹಾನಾಯಕ’ರಾಗಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಾಗೇಪಲ್ಲಿ | ಶಾಲಾ-ಕಾಲೇಜು ಮೈದಾನದಲ್ಲಿ ಗುರುಭವನ ನಿರ್ಮಾಣಕ್ಕೆ ಆಕ್ಷೇಪ

ಚಿನ್ನ ಕೈವಾರಮಯ್ಯ ಮಾತನಾಡಿ, “ಅಂಬೇಡ್ಕರ್ ಅವರು ಬೆಳೆದು ಬಂದ ಹಾದಿ, ಶೋಷಿತ ಸಮುದಾಯದ ಉದ್ಧಾರಕ್ಕಾಗಿ ಅವರು ನಡೆಸಿದ ಹೋರಾಟ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳು ಅಪಾರ. ಅಂಬೇಡ್ಕರ್ ಅವರು ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಅಖಂಡ ಭಾರತದಲ್ಲಿ ಮರೆಯಲಾಗದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲ. ಅವರು ಎಲ್ಲರಿಗೂ ಸ್ಫೂರ್ತಿದಾಯಕ. ಸಮ ಸಮಾಜ ನಿರ್ಮಾಣದ ಅಂಬೇಡ್ಕರ್ ಕನಸು ನನಸು ಮಾಡಲು ಎಲ್ಲರೂ ಶ್ರಮಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವೆಂಕಟಸ್ವಾಮಿ, ಮೂರ್ತಿ ಗೌರಿಬಿದನೂರು ಹಾಗೂ ಸಂಗಡಿಗರು ಕ್ರಾಂತಿ ಗೀತೆಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ತಿಮ್ಮರಾಜು, ಪೋಲಿಸ್ ಸಾದಪ್ಪ, ಕರವೇ ಸ್ವಾಭಿಮಾನ ಬಣ ಉಪಾಧ್ಯಕ್ಷ ಜಬೀವುಲ್ಲಾ, ಹಾಗೂ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...