ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

Date:

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ ಇರುವ ಚೌಧರಿ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಯಾವುದೇ ಮುಖ್ಯ ಕಾರಣವಿಲ್ಲದೆ ಸುಮಾರು 150 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದಾರೆಂದು ಆರೋಪಿಸಿ ಸಿಪಿಐಎಂ ಮತ್ತು ಸಿಐಟಿಯು ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

“ಹೆಂಗಸರ ಸಮಸ್ಯೆ, ತುರ್ತು ಸಂದರ್ಭದಲ್ಲಿ ರಜೆ ಮತ್ತಿತರ ವಿಚಾರಗಳಿಗೂ ಮಾನವೀಯತೆ ತೋರುವುದಿಲ್ಲ. ಬುಧವಾರ ಸಂಜೆ 5.30 ಗಂಟೆಗೆ ಬಂದ ಅಧಿಕಾರಿಗಳು, ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ಹೇಳಿ ಹೊರಟರು. ನಮ್ಮ ಮುಂದಿನ ಗತಿಯೇನು?” ಎಂದು ಪ್ರತಿಭಟನಾಕಾರರು ನೋವು ತೋಡಿಕೊಂಡರು.

ಈ ವೇಳೆ ಮಾತನಾಡಿದ ಸಿಐಟಿಯು ಮುಖಂಡ ಕೆ.ಮುನಿಯಪ್ಪ, “ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಏಕಾಏಕಿ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮತ್ತು ನೋಟಿಸ್ ನೀಡದೇ ಕೆಲಸದಿಂದ ತೆಗೆದು ಹಾಕಲಾಗಿದೆ. ಯಾವುದೇ ಕಾರ್ಮಿಕನನ್ನು ಕೆಲಸದಿಂದ ತೆಗೆಯಬೇಕಾದರೆ ಹಲವಾರು ನಿಯಮ ನಿಬಂಧನೆಗಳಿರುತ್ತವೆ. ಆದರೆ ಈ ಫ್ಯಾಕ್ಟರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮಹಿಳಾ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಯಿಲ್ಲ, ಮೇಲಾಧಿಕಾರಿಗಳು ನಿಂದಿಸುತ್ತಾರೆ ಎಂಬ ದೂರುಗಳಿವೆ. ಕಾರ್ಮಿಕ ವಿರೋಧಿ ನಿಲುವುಗಳನ್ನು ಅನುಸರಿಸುತ್ತಿದ್ದು, ಕೂಡಲೇ ಅವರ ಕ್ಷಮೆಯಾಚಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾರ್ಮೆಂಟ್ಸ್ ನ ಎಚ್.ಆರ್ ಮ್ಯಾನೇಜರ್ ಮಹೇಂದ್ರ ಮಾತನಾಡಿ, “ಪ್ರೊಡಕ್ಷನ್ ಕಡಿಮೆಯಾಗಿದ್ದು, ಕಾರ್ಮಿಕರನ್ನು ಕೆಲಸಕ್ಕೆ ಬರದಂತೆ ಸೂಚಿಸಲಾಗಿತ್ತು. ನಮ್ಮ ಗಾರ್ಮೆಂಟ್ಸ್ ಮಾಲೀಕರು ವಿದೇಶದಲ್ಲಿದ್ದು, ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹಾಗಾಗಿ ನಾಳೆಯಿಂದ ಕೆಲಸಕ್ಕೆ ಬರಬಹುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಹಿರಿಯ ವಕೀಲ ದಿ.ಹರಿಕುಮಾರ್‌ ಸ್ಮರಣಾರ್ಥ 8 ದಿನಗಳ ಕ್ರಿಕೆಟ್‌ ಕ್ರೀಡಾಕೂಟ

ಚೌಧರಿ ಗಾರ್ಮೆಂಟ್ಸ್ ಕಾರ್ಮಿಕರನ್ನು ಏಕಾಏಕಿ ಕೆಲಸಕ್ಕೆ ಬರಬೇಡಿ ಎಂಬ ವಿಚಾರವಾಗಿ ಸ್ಥಳಕ್ಕೆ ಭೇಟಿ ನೀಡಲಾಗಿದ್ದು, ಅಲ್ಲಿನ ಮಾಲೀಕರು, ಆಡಳಿತ ಮಂಡಳಿಯವರು ಸಭೆ ನಡೆಸಿ, ನಿರ್ಧಾರ ತೆಗೆದುಕೊಳ್ಳಬೇಕು. ಕಾರ್ಮಿಕ ಕಾನೂನುಗಳ ಅಡಿಯಲ್ಲೆ ನಿರ್ಧಾರ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ಯಾವುದೇ ಕಾರ್ಮಿಕರನ್ನು ಕೆಲಸಕ್ಕೆ ಬರದಂತೆ ಅಡ್ಡಿ ಪಡಿಸಬಾರದು ಎಂದು ಎಚ್.ಆರ್.ಮ್ಯಾನೇಜರ್ ಮತ್ತಿತರರಿಗೆ ಸೂಚಿಸಲಾಗಿದೆ- ರಾಕೇಶ್, ಕಾರ್ಮಿಕ ನಿರೀಕ್ಷಕ ,ಬಾಗೇಪಲ್ಲಿ

ಈ ಸಂದರ್ಭದಲ್ಲಿ ಸಿಪಿಐಎಂ ಮುಖಂಡರಾದ ಜಿ.ಕೃಷ್ಣಪ್ಪ, ವಾಲ್ಮೀಕಿ ಅಶ್ವತ್ಥಪ್ಪ ಸೇರಿದಂತೆ ಹಲವಾರು ಮಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...