ಬಾಗೇಪಲ್ಲಿ | ಮಸಣ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವಂತೆ ರಾಜ್ಯ ಮಸಣ ಕಾರ್ಮಿಕರ ಸಂಘ ಆಗ್ರಹ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪಂಚಾಯಿತಿ ಮುಂಭಾಗ  ಮಸಣ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಪದಾಧಿಕಾರಿಗಳು, “ಮಸಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗ ಭದ್ರತೆ, ನಿಗದಿತ ವೇತನವೂ ಇಲ್ಲದೆ ಮಸಣ ಕಾರ್ಮಿಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಮಸಣ ಕಾರ್ಮಿಕರನ್ನು ಸರಕಾರ ನಿರ್ಲಕ್ಷಿಸುತ್ತಿದೆ” ಎಂದು ದೂರಿದರು.

ಮಸಣ 2

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣಗಳನ್ನು ಹೂಳುವ ಕೆಲಸದಲ್ಲಿ ತೊಡಗಿರುವ ನಾವು ಆರ್ಥಿಕವಾಗಿ ಸಂಕಷ್ಟದಲ್ಲಿದ್ದೇವೆ. ಆದ್ದರಿಂದ ಸರಕಾರ ಮಸಣ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಪ್ರತಿ ಮಸಣಕ್ಕೆ ಒಬ್ಬ ಮಸಣ ನಿರ್ವಾಹಕರನ್ನು ನೇಮಿಸಬೇಕು. ಸ್ಥಳೀಯ ಸಂಸ್ಥೆಗಳ ಮೂಲಕ ಕಾರ್ಮಿಕರಿಗೆ ಅಗತ್ಯವಿರುವ ಗುದ್ದಲಿ, ಪಿಕ್ಕಾಶಿ, ಸಲಾಕೆ ಇತ್ಯಾದಿ ಸಲಕರಣೆಗಳನ್ನು ವಿತರಿಸುವ ಕೆಲಸಕ್ಕೆ ಮುಂದಾಗಬೇಕು. ಮಸಣ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು, ಸೇವೆಯನ್ನು ಪರಿಗಣಿಸಿ ನಿವೇಶನಗಳನ್ನು ಹಂಚಿಕೆ ಮಾಡಬೇಕು” ಎಂದು ಒತ್ತಾಯಿಸಿದರು.

ಮಸಣ ಕಾರ್ಮಿಕರ ಸಂಘ ಮತ್ತು ತಮಟೆ ಕಲಾವಿದರ ಸಂಘದ ಜಿಲ್ಲಾ ಸಂಚಾಲಕ ಮುನಿಯಪ್ಪ ಕೆ ಮಾತನಾಡಿ, “ಮಸಣ ಕಾರ್ಮಿಕರ ಕೆಲಸವನ್ನು ಉದ್ಯೋಗ ಖಾತರಿ ಯೋಜನೆಯಡಿ ಪರಿಗಣಿಸಿ, ಗುಂಡಿ ತೋಡುವ ಕೆಲಸಕ್ಕೆ ಕನಿಷ್ಠ ವೇತನ ನಿಗದಿಪಡಿಸಬೇಕು. ತಮಟೆ ಕಲಾವಿದರು ಸಹ ಸಂಕಷ್ಟದಲ್ಲಿದ್ದು, ಅವರಿಗೂ ಸ್ಥಳೀಯ ಆಡಳಿತ ವತಿಯಿಂದ ತಮಟೆ ವಿತರಣೆ ಮಾಡಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಬಾಗೇಪಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಧರಣಿಯಲ್ಲಿ ದಲಿತ ಹಕ್ಕುಗಳ ಜಿಲ್ಲಾ ಅಧ್ಯಕ್ಷ ಕೆ.ನಾಗರಾಜು, ತಾಲೂಕು ಅಧ್ಯಕ್ಷ ಜಿ.ಕೃಷ್ಣಪ್ಪ ಚಂಚರಾನಪಲ್ಲಿ, ನಗರ ಸಂಚಾಲಕ ಅಶ್ವತ್ಥನಾರಾಯಣ, ದಲಿತ ಮುಖಂಡರಾದ ಚನ್ನರಾಯಪ್ಪ ಹಾಗೂ ಸಿಐಟಿಯು ತಾಲೂಕು ಕಾರ್ಯದರ್ಶಿ ಮುಸ್ತಫಾ, ನಾರಾಯಣ ಸ್ವಾಮಿ, ರಾಮಾಂಜಿ ಮತ್ತು ಮಸಣ ಕಾರ್ಮಿಕರ ಮುಖಂಡರಾದ ಆದಿ ನಾರಾಯಣಪ್ಪ, ಕೃಷ್ಣಪ್ಪ, ಅಶ್ವತ್ಥಪ್ಪ, ಮೂರ್ತಿ, ನರಸಿಂಹಪ್ಪ, ವೆಂಕಟರಮಣ, ಸುಬ್ಬರಾಯಪ್ಪ ಸೇರಿದಂತೆ ಇತರೆ ಮಸಣ ಕಾರ್ಮಿಕರು ಹಾಗೂ ತಮಟೆ ಕಲಾವಿದರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...