ಬಾಗೇಪಲ್ಲಿ | ಜಾತಿಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಸಮುದಾಯಕ್ಕೆ ಮಂಗಲನಾಥ ಸ್ವಾಮೀಜಿ ಮನವಿ

Date:

ರಾಜ್ಯ ಸರ್ಕಾರವು ಸೆ.22ರಿಂದ ಅ.7ರವರೆಗೆ 15 ದಿನಗಳ ಕಾಲ ಹೊಸ ಸಾಮಾಜಿಕ-ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಸಮುದಾಯದವರು ಕಡ್ಡಾಯವಾಗಿ ಒಕ್ಕಲಿಗ ಎಂದು ನಮೂದಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳನಾಥ ಸ್ವಾಮೀಜಿ ಮನವಿ ಮಾಡಿದ್ದಾರೆ.

ಪಟ್ಟಣದ ಹೊರವಲಯದ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನಾಂಗದ ಜಾತಿಗಣತಿ ಮತ್ತು ಸಾಮಾಜಿಕ-ಆರ್ಥಿಕ ಸಮೀಕ್ಷೆ ಕುರಿತು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, “1931ರಲ್ಲಿ ನಡೆದಿದ್ದ ಸಾಮಾಜಿಕ, ಶೈಕ್ಷಣಿಕ ಜಾತಿಗಣತಿ ಸಮೀಕ್ಷೆಯು ಈಗ ನಡೆಯುತ್ತಿರುವುದು ಸ್ವಾಗತಾರ್ಹ. ಒಕ್ಕಲಿಗರ ಜನಸಂಖ್ಯೆಯನ್ನು ನಿಖರವಾಗಿ ಲೆಕ್ಕ ಹಾಕಲು ಯಾವುದೇ ಗಣತಿದಾರರು ಬಂದಾಗ, ಉಪ ಪಂಗಡಕ್ಕೆ ಸೇರಿದ್ದರೂ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ಬರೆಸಬೇಕು. ಉಪ ಪಂಗಡಗಳನ್ನು ಉಪ ಜಾತಿ ಕಾಲಂನಲ್ಲಿ ದಾಖಲಿಸಬೇಕು. ಜಾತಿ ಕಾಲಂನಲ್ಲಿ ಯಾರೂ ಉಪ ಜಾತಿ ನಮೂದಿಸಬಾರದು. ಹಾಗೇಯೇ ಸರಿಯಾದ ವಿದ್ಯಾಭ್ಯಾಸ, ಜಮೀನು, ಆರ್ಥಿಕ ಸ್ಥಿತಿಗಳ ಮಾಹಿತಿ ನೀಡಬೇಕು” ಎಂದು ತಿಳಿಸಿದ್ದಾರೆ.

“ಒಕ್ಕಲಿಗರು ಹಿಂದೆ ಆಶ್ರಯ ಹಾಗೂ ಅನ್ನದಾತರಾಗಿದ್ದರು. ಆಗ ಎಲ್ಲರೂ ಒಗ್ಗಟ್ಟಾಗಿದ್ದು ಸಮಾಜದ ಏಳಿಗೆಗೆ ದುಡಿಯುತ್ತಿದ್ದರು. ಆದರೆ ಈಗ ಒಕ್ಕಲಿಗರಲ್ಲಿ ಒಗ್ಗಟ್ಟು ಇಲ್ಲವಾಗಿದೆ. ನಾವು ಮತ್ತು ನಮ್ಮ ಸಮಾಜ ಉಳಿಯ ಬೇಕಾದರೆ ಒಕ್ಕಲಿಗರು ಒಗ್ಗಟಾಗಿರಬೇಕು. ಸಮುದಾಯಕ್ಕೆ ದಕ್ಕಬೇಕಾದ ಮೀಸಲಾತಿ ಸಿಗಬೇಕು. ಆಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ. ಈಗ ಆ ಕಾಲ ಕೂಡಿ ಬಂದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗೇಪಲ್ಲಿ | ಮಹಾನಾಯಕ ಬಿ ಆರ್ ಅಂಬೇಡ್ಕರ್‌ ಸೇನೆ ಪದಾಧಿಕಾರಿಗಳ ಆಯ್ಕೆ

ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಹೋರಾಟಗಾರ ನಾಗರಾಜು, ತಾಲೂಕು ಒಕ್ಕಲಿಗರ ಸಂಘದ ಅದ್ಯಕ್ಷ ನರಸಿಂಹಾ ರೆಡ್ಡಿ, ವೈ ಶ್ರೀನಿವಾಸ್ ರೆಡ್ಡಿ, ಹರಿನಾಥ್ ರೆಡ್ಡಿ, ಚಂದ್ರಶೇಖರ್ ರೆಡ್ಡಿ, ಚಿನ್ನಸಂದ್ರ ಮುರಳಿ, ಬಿಎಸ್ಎನ್ಎಲ್ ವೆಂಕಟೇಶ್, ನಾಗರಾಜರೆಡ್ಡಿ, ಒಕ್ಕಲಿಗ ಜನಾಂಗದ ಮುಖಂಡರು ಹಾಗೂ ಒಕ್ಕಲಿಗ ಸಮದಾಯದ ಸಾರ್ವಜನಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...