ಬಾಗೇಪಲ್ಲಿ | ಶಾಲಾ-ಕಾಲೇಜು ಮೈದಾನದಲ್ಲಿ ಗುರುಭವನ ನಿರ್ಮಾಣಕ್ಕೆ ಆಕ್ಷೇಪ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಗುರುಭವನ ನಿರ್ಮಾಣ ಯೋಜನೆಯನ್ನು ಕೈಬಿಟ್ಟು ಬೇರೆ ಸ್ಥಳದಲ್ಲಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ತಾಲೂಕು ಎಸ್‌ಎಫ್‌ಐ ಮತ್ತು ಡಿವೈಎಫ್‌ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಎಸ್‌ಎಫ್‌ಐ ಕಾರ್ಯದರ್ಶಿ ಸೋಮಶೇಖರ್, “ಬಾಗೇಪಲ್ಲಿ ಪಟ್ಟಣದಲ್ಲಿ ಸರಕಾರಿ ಬಾಲಕರ ಪ್ರೌಢಶಾಲೆ, ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿದ್ದು, ಮೂರು ಸಂಸ್ಥೆಗಳಿಗೆ ಇರುವ ಏಕೈಕ ಅಟದ ಮೈದಾನ ಸರಕಾರಿ ಜೂನಿಯರ್ ಕಾಲೇಜ್ ಮೈದಾನವಾಗಿದೆ. ಹಲವಾರು ವರ್ಷಗಳಿಂದ ಕೆಲವರು ಒತ್ತುವರಿ ಮಾಡಿಕೊಂಡಿರುವ ಸದರಿ ಮೈದಾನದ ವಿಸ್ತೀರ್ಣ ಕಡಿಮೆಯಾಗಿದೆ. ಈ ಮೈದಾನದಲ್ಲಿ ಗುರುಭವನ ನಿರ್ಮಾಣ ಮಾಡಿದರೆ ಮತ್ತಷ್ಟು ಮೈದಾನ ಕಿರುದಾಗುತ್ತದೆ. ಬಡ ಮಕ್ಕಳಿಗೆ ಇರುವ ಈ ಮೈದಾನದಲ್ಲಿ ಗುರುಭವನ ನಿರ್ಮಾಣ ಮಾಡಲು ಹೊರಟಿವುದು ಖಂಡನೀಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕೈಬಿಡಬೇಕಾಗಿದೆ” ಎಂದು ಆಗ್ರಹಿಸಿದರು.

“1970ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಹಣ ಪಾವತಿಸಿ ಮಕ್ಕಳಿಗೆ ಕ್ರೀಡೆ ಚಟುವಟಿಕೆಗಳಿಗೆ ಉಪಯೋಗವಾಗಲು ಈ ಮೈದಾನವನ್ನು ನಿರ್ಮಿಸಲಾಗಿದೆ. ಈ ಮೂರು ಸಂಸ್ಥೆಗಳಿಂದ ಕನಿಷ್ಠ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಮತ್ತು ಪಟ್ಟಣದ ಯುವ ಜನರು ಕ್ರಿಕೆಟ್, ವಾಲಿಬಾಲ್ ಇತರೆ ಕ್ರೀಡಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಮೂರು ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಮಕ್ಕಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳ ಮಕ್ಕಳಾಗಿದ್ದಾರೆ. ಅವರ ಕ್ರೀಡಾ ಅಭ್ಯಾಸಕ್ಕೆ ಸಂಚಕಾರವಾಗುವ ಯೋಜನೆ ಗುರುಭವನ ಯೋಜನೆಯಾಗಿದೆ. ಆದ್ದರಿಂದ ಮೈದಾನವನ್ನು ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕೆಂದು ಆಗ್ರಹಿಸಿದ ಅವರು ಶಿಕ್ಷಕ ವೃಂದಕ್ಕೆ ಗುರುಭವನ ಅಗತ್ಯವಿರುವುದರಿಂದ ಗುರುಭವನವನ್ನು ಶಾಲಾ-ಕಾಲೇಜು ಮೈದಾನವನ್ನು ಬಿಟ್ಟು ಸರ್ಕಾರಿ ಬೇರೆ ಭೂಮಿಯಲ್ಲಿ ನಿರ್ಮಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ವೇಳೆ ಇದೇ ಸ್ಥಳದಲ್ಲಿ ಗುರುಭವನ ನಿರ್ಮಾಣ ಮಾಡಲು ಮುಂದಾದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಒಳ ಮೀಸಲಾತಿ: ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಾರ್ಹ; ಪಟ್ರೇನಹಳ್ಳಿ ಕೃಷ್ಣ

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, “ಇದೇ ಮೈದಾನದಲ್ಲಿ ಗುರುಭವನ ನಿರ್ಮಾಣ ಮಾಡುವುದರಿಂದ ಕ್ರೀಡಾ ಚಟುವಟಿಕೆಗಳಿಗೆ ತೊಂದರೆಯಾಗುವುದಿಲ್ಲ. ವರ್ಷಕ್ಕೆ ಒಂದು ಸಲ ಶಿಕ್ಷಕರ ದಿನಾಚರಣೆ ಆಚರಣೆ ಮಾಡಲಾಗುತ್ತದೆ. ಉಳಿದ ಅವಧಿಯಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಗುರುಭವನವನ್ನು ಪಟ್ಟಣದ 1-2ಕೀ.ಮಿ ದೂರ ನಿರ್ಮಾಣ ಮಾಡುವುದರಿಂದ ಮಕ್ಕಳನ್ನು ಗುರುಭವನಕ್ಕೆ ಕಳುಹಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಕಷ್ಟವಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಇಲಾಖೆ ತಾಲೂಕು ಸಮನ್ವಯ ಅಧಿಕಾರಿ ಆರ್.ವೆಂಕಟರಾಮಪ್ಪ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಸಾಕ್ಷರತಾ ಸಮನ್ವಯ ಅಧಿಕಾರಿ ಎನ್.ಶಿವಪ್ಪ, ಎಸ್.ಲಕ್ಷ್ಮಣ ರೆಡ್ಡಿ, ರವೀಂದ್ರ ಚಂದ್ರ, ಪುಶವಂತೆ ಎಸ್, ವಿಷ್ಟು ವರ್ದನ್, ರಾಮಂದ್ರ, ರಾಮಾಂಜಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...