ಬಾಗೇಪಲ್ಲಿ | ಜಾತಿ ಸಮೀಕ್ಷೆ ವೇಳೆ ಸಾಲು ಸಾಲು ಸಂಕಷ್ಟ; ಹೈರಾಣದ ಶಿಕ್ಷಕರು

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಪ್ರಾರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆ ಉಂಟಾಗುತ್ತಿರುವ ತಾಂತ್ರಿಕ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಂದ ಶಿಕ್ಷಕರು ಹೈರಾಣಾಗಿದ್ದು, ಸಮಸ್ಯೆಗಳನ್ನು ಸರಿಪಡಿಸಲು ಬಾಗೇಪಲ್ಲಿ ತಹಶೀಲ್ದಾರ್ ಮನೀಷಾ ಎನ್ ಪತ್ರಿ ಅವರಿಗೆ ಗಣತಿದಾರರು ಮನವಿ ಸಲ್ಲಿಸಿದರು.

ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಪಿ ವಿ ವೆಂಕಟರಮಣ ಮಾತನಾಡಿ, “ಜಾತಿಗಣತಿ ಸಮೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಸಮೀಕ್ಷೆ ಪೂರ್ಣವಾಗದ ಕಾರಣ ಬೇಸತ್ತು ಸಮೀಕ್ಷೆ ಕೈ ಬಿಟ್ಟು ಇಲ್ಲಿನ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲು ಬಂದಿದ್ದೇವೆ. ಜಾತಿಗಣತಿ ಸಮೀಕ್ಷೆ ಕಾರ್ಯಕ್ಕೆ ಸಕಲ‌ ಸಿದ್ದತೆ ಕೈಗೊಂಡು ನಮ್ಮನ್ನು ಫೀಲ್ಡ್ ಗೆ ಇಳಿಸಬೇಕಿತ್ತು. ಈಗ ನಾವೇ ಪ್ರಯೋಗಕ್ಕೆ ಒಳಗಾಗುವಂತಾಗಿದೆ. ನಾವು ಮನೆಗಳಿಗೆ ತೆರಳಿ ಅರವತ್ತು- ಅರವತ್ತು ಪ್ರಶ್ನೆ ಕೇಳಿ ಆಪ್ ನಲ್ಲಿ ಅಪ್ಡೇಟ್‌ ಮಾಡುತ್ತೇವೆ. ಆದರೆ ಇದಕ್ಕೆ ಗಂಟೆಗಟ್ಟಲೇ ಸಮಯ ತೆಗೆದುಕೊಳ್ಳುತ್ತಿದೆ. ಎಲ್ಲವೂ ಫಿಲ್ ಮಾಡಿ ಸಬ್ಮಿಟ್ ಮಾಡಿದಾಗ ಎರರ್ ಬರುತ್ತಿದೆ” ಎಂದು ಅಸಮಾಧಾನ ಹೊರ ಹಾಕಿದರು.

ಇದನ್ನೂ ಓದಿ: ಬಾಗೇಪಲ್ಲಿ | ಡಾ. ಬಿ ಆರ್ ಅಂಬೇಡ್ಕರ್ ಸೇನೆಯ ತಾಲೂಕು ಪದಾಧಿಕಾರಿಗಳ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲವೂ ಭರ್ತಿ ಮಾಡಿದ ನಂತರ ಕೊನೆಗೆ ತಪ್ಪು ಬರುತ್ತಿರುವುದರಿಂದ ನಾವು ಮಾಡಿರುವ ಶ್ರಮ ಎಲ್ಲಾ ವ್ಯರ್ಥವಾಗುತ್ತಿದೆ.‌ ಸರಿಯಾಗಿ ಸಿದ್ದತೆ ಮಾಡಿಕೊಳ್ಳದೆ ಸಮೀಕ್ಷೆ ಕೈಗೊಳ್ಳುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಸರಕಾರ ಒದಗಿಸಿರುವ ಆಪ್ ನಲ್ಲಿ ಮನೆಗಳ ಲೊಕೇಷನ್ ತಪ್ಪಾಗಿ ತೋರಿಸುತ್ತಿದೆ. ಪ್ರಮುಖವಾಗಿ ಮೊದಲು ಎಲ್ಲಾ ಗೊಂದಲ ಪರಿಹರಿಸಿ ಟ್ರಯಲ್ ಚೆಕ್ ಮಾಡಿ ನಮ್ಮನ್ನು ಕೆಲಸಕ್ಕೆ ಕಳುಹಿಸಬೇಕಿತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗಣತಿದಾರರು, ಶಿಕ್ಷಕರು, ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...