ಬಾಗೇಪಲ್ಲಿ | ಡೆಂಘಿ, ಮಲೇರಿಯಾ ಬಗ್ಗೆ ವಿದ್ಯಾರ್ಥಿಗಳಿಗೆ ಮುಂಜಾಗ್ರತೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊತ್ತಪಲ್ಲಿ ಶಾಲೆಯಲ್ಲಿ ಮಂಗಳವಾರದಂದು ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಡೆಂಘಿ, ಮಲೇರಿಯಾ ರೋಗದ ಬಗ್ಗೆ ಮಕ್ಕಳಿಗೆ ಮುಂಜಾಗ್ರತಾ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕಿ ಗೀತಾ ಮಾತನಾಡಿ, “ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ, ಸೊಳ್ಳೆ ಕಡಿತದಿಂದ ಡೆಂಘಿ, ಮಲೇರಿಯಾ, ಚಿಕನ್ ಗುನ್ಯಾ, ಆನೆಕಾಲು ರೋಗ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತವೆ. ನಿಮ್ಮ ಮನೆಯಲ್ಲಿ ಮತ್ತು ನಿಮ್ಮ ಮನೆಯ ಸುತ್ತಮುತ್ತಲೂ ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್, ಔಷಧೀಯ ಬಾಟಲ್ ಸೇರಿದಂತೆ ಅನೇಕ ತ್ಯಾಜ್ಯವನ್ನು ಬಿಸಾಡದೆ ಕಸದ ತೊಟ್ಟಿಯಲ್ಲಿ ಹಾಕಬೇಕು. ಈ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವುದನ್ನು ಕಡಿಮೆ ಮಾಡಬೇಕು” ಎಂದು ಮಕ್ಕಳಿಗೆ ತಿಳಿಸಿದರು.

ರಕ್ಷಣಾತ್ಮಕ ಕ್ರಮಗಳು: “ಸೊಳ್ಳೆ ನಿವಾರಕ ಲೇಪನ, ಸೊಳ್ಳೆ ಪರದೆಗಳನ್ನು ಬಳಸಬೇಕು. ಈ ಸೊಳ್ಳೆಗಳು ಹಗಲು ಕಚ್ಚುವುದರಿಂದ ಮಕ್ಕಳು, ಹಿರಿಯರು ಮೈ ತುಂಬಾ ಬಟ್ಟೆ ಧರಿಸಬೇಕು. ಜಾಗೃತಿ ಜಾಥಾ ಕಾರ್ಯಕ್ರಮ ಎಲ್ಲ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕರಪತ್ರಗಳು, ಆಡಿಯೋ ಮೂಲಕವೂ ಅರಿವು ಮೂಡಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಗದಗ | ಅಲ್ಪಸಂಖ್ಯಾತರ ಹಾಸ್ಟೆಲ್‌ನಲ್ಲಿ ಮೂಲ ಸೌಕರ್ಯಗಳ ಕೊರತೆ: ಅಧಿಕಾರಿಗಳ ಸುಳಿವೇ ಇಲ್ಲ

ಶಾಲಾ ಮುಖ್ಯ ಶಿಕ್ಷಕ ವೇಣು ಮಾತನಾಡಿ, “ಸೊಳ್ಳೆಗಳ ಉತ್ಪತ್ತಿ ತಾಣಗಳಾದ ಸಿಮೆಂಟ್ ತೊಟ್ಟಿಗಳು ಟೈರ್‌ಗಳು ಬ್ಯಾರೆಲ್‌ಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೆಂಘಿ ಮತ್ತು ಚಿಕನ್ ಗುನ್ಯಾ ಹರಡುವ ಸೊಳ್ಳೆಗಳು ಯಥೇಚ್ಛವಾಗಿ ಉತ್ಪತ್ತಿಯಾಗುತ್ತಿವೆ. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಡೆಂಘಿ ಹಾಗೂ ಚಿಕನ್ ಗುನ್ಯಾ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ.‌ ಆದ್ದರಿಂದ ಇವುಗಳನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ತುಂಬಾ ಅತ್ಯಗತ್ಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಜಯಲಕ್ಷ್ಮಿ, ವರಲಕ್ಷ್ಮೀ, ಪುಷ್ಪಾವತಿ, ವಿಜಯಲಕ್ಷ್ಮಿ, ಶಿಕ್ಷಕರಾದ ಜಿ.ರಾಮಕೃಷ್ಣ ನಾಯಕ, ವೆಂಕಟೇಶ್, ಅರೋಗ್ಯ ಇಲಾಖೆ ಸಿಬ್ಬಂದಿಗಳಾದ ಲಲಿತ, ಮುನಿಯಮ್ಮ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...