ಬಾಗೇಪಲ್ಲಿ | ಸಮರ್ಪಕವಾದ ಆಹಾರ ಸೇವಿಸಿದರೆ ಉತ್ತಮ ಆರೋಗ್ಯ: ನ್ಯಾಯಾಧೀಶೆ ಎಂ. ಭಾರತಿ

Date:

ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಿಣಾಂಶ, ನಾರಿನ ಅಂಶವುಳ್ಳ ಹಣ್ಣು, ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ. ಇದನ್ನು ಸಮರ್ಪಕವಾಗಿ ದಿನನಿತ್ಯದ ಆಹಾರ ಸೇವನೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎಂ. ಭಾರತಿ ಹೇಳಿದರು.

ಅವರು ಬಾಗೇಪಲ್ಲಿ ಪಟ್ಟಣದ ಜೆಎಂಎಫ್ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತಿ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರಸಭೆಯ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ದೇವರಾಜ್ ಅರಸ್ ಭವನದಲ್ಲಿ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಪೌಷ್ಟಿಕ ದಿನಾಚರಣೆ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪೌಷ್ಟಿಕತೆ ಎನ್ನುವುದು ಪ್ರಾಪ್ತ ವಯಸ್ಸಿನವರಿಗೆ ಮಾತ್ರವಲ್ಲದೆ, ಪ್ರಸವಪೂರ್ವ ಮಗುವಿಗೂ ಅವಶ್ಯ. ಅದಕ್ಕಾಗಿ ಸರ್ಕಾರದ ಯೋಜನೆಗಳನ್ನು ಸಮಾಜಕ್ಕೆ ಹತ್ತಿರವಾಗಿರುವ ಅಂಗನವಾಡಿ ಕೇಂದ್ರಗಳ ಮೂಲಕ ತಲುಪಿಸಲಾಗುತ್ತದೆ. ಎಲ್ಲ ಇಲಾಖೆಗಳು ಕೈ ಜೋಡಿಸಿದಾಗ ಪೌಷ್ಟಿಕತೆ ಬೆಂಬಲಿಸುವ, ಆರೋಗ್ಯ ಪೋಷಿಸುವ ಕೆಲಸವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡಪ್ಪ ಮಾತನಾಡಿ, ಹೆಣ್ಣು ಮಕ್ಕಳಿಗೆ ಹದಿಹರೆಯದ ವಯಸ್ಸಿನಲ್ಲಿ ಮದುವೆ ಮಾಡಬಾರದು. ಇದರಿಂದ ತಾಯಿ ಹಾಗೂ ಮಗುವಿನ ಆರೋಗ್ಯ ಸ್ಥಿತಿ ದುರ್ಬಲವಾಗುವ ಸಂಭವ ಹೆಚ್ಚು. ಬಾಲ್ಯ ವಿವಾಹಗಳನ್ನು ತಡೆಗಟ್ಟಿ, ಜನರಿಗೆ ಆರೋಗ್ಯ, ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು’ ಎಂದು ಅವರು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ಮದ್ದೂರು | ಕುಲಾಂತರಿ ತಳಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ: ಎನ್ ಪಿ ಶಂಕರಯ್ಯ ಕರೆ

ಡಾ.ಸತ್ಯನಾರಾಯಣ ರೆಡ್ಡಿ ಮಾತನಾಡಿ, ಒಬ್ಬ ವ್ಯಕ್ತಿಯು ಅಗತ್ಯವಿರುವ ಪೋಷಕಾಂಶ ಪಡೆಯಲು ಪ್ರತಿದಿನ ಕಾರ್ಬೋಹೈಡ್ರೇಟ್, ಫೈಬರ್, ಆರೋಗ್ಯಕರ ಕೊಬ್ಬು, ಪ್ರೋಟಿನ್, ಖನಿಜಗಳು, ವಿಟಮಿನ್‌ಗಳಲ್ಲಿ ಸಮೃದ್ಧವಾದ ಆಹಾರ ಸೇವಿಸಬೇಕು. ಆಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಈ ಕಾರಣದಿಂದ ಆರೋಗ್ಯಕರ ಆಹಾರ ಪದ್ಧತಿ ಮತ್ತು ಸರಿಯಾದ ಪೋಷಣೆಯ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ರಾಮಾಂಜಿ,ಪ್ರಸನ್ನ ಕುಮಾರ್ ಕಾರ್ಯದರ್ಶಿ, ಮಂಜುನಾಥ್ ಖಜಾಂಚಿ, ವಕೀಲರಾದ ನರಸಿಂಹ ಮೂರ್ತಿ, ಚಂದ್ರಶೇಖರ,ಶಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ರಾಮಚಂದ್ರಪ್ಪ ಕೆ.ವಿ ಹಾಗೂ ಸಾರ್ವಜನಿಕರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...