ಉಡುಪಿ | ಪಾದಚಾರಿಗೆ ಬೈಕ್ ಡಿಕ್ಕಿ, ಎರಡು ದಿನ ಮರದಡಿಯಲ್ಲೆ ಕಳೆದ ಕಾರ್ಮಿಕ ! ರಕ್ಷಣೆ

Date:

ಎರಡು ದಿನಗಳ ಹಿಂದೆ ಪಾದಚಾರಿಯೊಬ್ಬರಿಗೆ ಬೈಕ್ ಬಡಿದು ಜಕಂಗೊಂಡ ವ್ಯಕ್ತಿ ರಸ್ತೆ ಬದಿಯಲ್ಲಿ ಏಳಲಾಗದೆ ಅಸಹಾಯಕರಾಗಿದ್ದವರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.

ಉಡುಪಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿ ನಾರಾಯಣ ಮೊಗೇರ(58) ಕೂಲಿ ಕಾರ್ಮಿಕನಾಗಿದ್ದು ರಸ್ತೆ ದಾಟುವಾಗ ಬೈಕ್ ಬಡಿದು ಎದೆ ಹಾಗೂ ಉದರದ ಬಾಗ ಜಕಂಗೊಂಡು ನೆರವಿಗೆ ಯಾರೂ ಸ್ಪಂದಿಸದ ಕಾರಣ 2 ದಿನ ರಸ್ತೆ ಬದಿಯ ಮರದಡಿಯಲ್ಲಿ ಕಾಲ ಕಳೆದಿದ್ದಾರೆ.
ಈ ಬಗ್ಗೆ ರೈಲ್ವೆ ಉದ್ಯೋಗಿ ಸದಾನಂದರಿಂದ ಮಾಹಿತಿ ಪಡೆದ ವಿಶು ಶೆಟ್ಟಿ ಉಡುಪಿಯಿಂದ ಆಂಬುಲೆನ್ಸ್ ನೊಂದಿಗೆ ತೆರಳಿ ಗಾಯಳುವನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ರಾಮದಾಸ್ ಪಾಲನ್ ಉದ್ಯಾವರ ಸಹಕರಿಸಿದ್ದಾರೆ

ಗಾಯಾಳು ಮೂಲತಃ ಮೂಡಬಿದ್ರೆಯವರಾಗಿದ್ದು ತಂದೆ ಮೋನಪ್ಪ, ಒಂತಿಕಟ್ಟ, ಮಾರ್ಪಡಿ ಗ್ರಾಮ ಎಂದು ಮಾಹಿತಿ ನೀಡಿದ್ದು, ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಗೆ ಮಾಹಿತಿ ನೀಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...