ಅರಣ್ಯ ಇಲಾಖೆಯಿಂದ ರೈತರಿಗೆ ತೊಂದರೆ ದೂರು ದಾಖಲಿಸಲು ಎಸ್ಪಿಗೆ ಬೈರತಿ ಸುರೇಶ್ ಸೂಚನೆ

Date:

ಕೋಲಾರ: ಕಳೆದ ಕೆಡಿಪಿ ಸಭೆಯ ತೀರ್ಮಾನದಂತೆ ಜಂಟಿ ಸರ್ವೆ ಮುಗಿದು ವರದಿ ಬರುವ ತನಕ ಅರಣ್ಯ ಇಲಾಖೆಯು ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡಬಾರದು ಎಂಬ ಆದೇಶವಿದೆ ತೊಂದರೆ ಕೊಟ್ಟವರ ವಿರುದ್ದ ಹಾಗೂ ಮುಳಬಾಗಿಲಿನಲ್ಲಿ ಮನೆಯನ್ನು ಕೆಡವಿ ಹಾಕಿದ ಅರಣ್ಯ ಅಧಿಕಾರಿಗಳ ವಿರುದ್ಧ ಕೂಡಲೇ ಎಫ್ ಐ ಆರ್ ದಾಖಲಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಸೂಚನೆ ನೀಡಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಬಳಿ‌ ಶುಕ್ರವಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ರೈತ ಸಂಘಟನೆಗಳು ಹಾಗೂ ರೈತರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು ರೈತರಿಗೆ ವಿನಾಕಾರಣ ತೊಂದರೆ ಕೊಟ್ಟಿದ್ದಾರೆ ಜಿಲ್ಲಾಧಿಕಾರಿ ಆದೇಶಕ್ಕೂ ಬೆಲೆ ಇಲ್ಲವಾಗಿದೆ ಎಂದು ರೈತರು ವರದಿ ಮಾಡಿದರು ಕೂಡಲೇ ಜಿಲ್ಲೆಯ ರೈತರ ಮೇಲೆ ದಾಖಲಾಗಿರುವ ಎಫ್ಐಆರ್ ಅನ್ನು ಬಿ ರಿಪೋರ್ಟ ಹಾಕಿ ಮುಕ್ತಾಯ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈತರ ಸರ್ಕಾರಿ ಗೋಮಾಳ ಜಮೀನುಗಳಲ್ಲಿ ಅರಣ್ಯ ಇಲಾಖೆಯವರ ಕೆಲಸ ಏನು ಎಂದು ಉಸ್ತುವಾರಿ ಸಚಿವರನ್ನು ರೈತರು ಪ್ರಶ್ನೆ ಮಾಡಿದರು ಜಂಟಿ ಸರ್ವೆ ಸಮೀಕ್ಷೆ ಮುಗಿದು ವರದಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಅರಣ್ಯ ಇಲಾಖೆಯ ಒಂದು ಇಂಚು ಅರಣ್ಯ ಜಮೀನು ಬೇಡ ಆದರೆ ರೈತರ ಸರ್ಕಾರಿ ಗೋಮಾಳ ಜಮೀನು ಏಕೆ ಬೇಕು ಅನ್ನದಾತರ ಜಮೀನುಗಳನ್ನು ದೌರ್ಜನ್ಯದಿಂದ ಅವರ ಬೆಳೆಗಳನ್ನು ಏಕೆ ನಾಶಪಡಿಸುತ್ತಿದ್ದಾರೆ ಇವರ ಮೇಲೆ ಕಾನೂನು ಕ್ರಮ ಆಗಬೇಕು, ಇವರು ಯಾವುದೇ ಸರ್ಕಾರ ಆದೇಶಗಳನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಆದೇಶಗಳನ್ನು ಧಿಕ್ಕರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ..? ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಬೈರತಿ ಸುರೇಶ್ ಚಾಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ಸಿಪಿಎಂ ಗೋಪಾಲ್, ಆರ್.ಶ್ರೀನಿವಾಸನ್, ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ಹರಟಿ ಪ್ರಕಾಶ್, ಡಾ.ಗೋವಿಂದಪ್ಪ, ವೆಂಕಟರವಣಪ್ಪ, ಭಟ್ರಹಳ್ಳಿ ಮಂಜುನಾಥ್, ಚಲಪತಿ, ದರ್ಶನ್, ಹಾಗೂ ರೈತರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...