ಬಳ್ಳಾರಿ | ಮತದಾರ ಪಟ್ಟಿಯಿಂದ ಸುಮಾರು 1.2 ಲಕ್ಷ ಹೆಸರುಗಳು ಡಿಲೀಟ್

Date:

ಬಳ್ಳಾರಿ ಜಿಲ್ಲೆಯಲ್ಲಿ 1.17 ಲಕ್ಷ ಮತದಾರರ ಹೆಸರುಗಳನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇವುಗಳಲ್ಲಿ ಹಲವು ಪುನಾರಾವರ್ತಿತ ಹೆಸರುಗಳು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

2022ರ ನವೆಂಬರ್‌ನಲ್ಲಿಯೂ ಮತದಾರರ ಹೆಸರುಗಳು ತೆಗೆದುಹಾಕಲಾಗಿತ್ತೆಂದು ಆಗ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಅದಾದ ಬಳಿಕ, ಇದೀಗ ಮತ್ತೆ ಜಿಲ್ಲೆಯ ಹಲವಾರು ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ.

ಜಿಲ್ಲೆಯಲ್ಲಿ 1.17 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅವುಗಳಲ್ಲಿ ಕಂಪ್ಲಿ ಮತ್ತು ಸಂಡೂರು ತಾಲೂಕುಗಳ ಮತದಾರರ ಹೆಸರುಗಳನ್ನು ಹೆಚ್ಚಿನವು. ಕನಿಷ್ಠ 50,000 ಹೆಸರುಗಳು ಎರಡು ಅಥವಾ ನಾಲ್ಕು ಬಾರಿ ಮತದಾರ ಪಟ್ಟಿಯಲ್ಲಿದ್ದವು. ಅಂತಹ ಹೆಸರುಗಳನ್ನು ತೆಗೆಯಲಾಗಿದೆ. ಅಲ್ಲದೆ, ಮರಣ ಹೊಂದಿದವರ 20,000 ಹೆಸರುಗಳನ್ನೂ ಕೈಬಿಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ನಮೂನೆ-7 ಸಲ್ಲಿಸಿದ ನಂತರ ಪುನರಾವರ್ತಿತ ಹೆಸರುಗಳನ್ನು ತೆಗೆದುಹಾಕಿದ್ದೇವೆ. ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಅಳಿಸುವ ಮತ್ತು ಸೇರಿಸುವ ಸಮಯದಲ್ಲಿ ಮಾರ್ಗಸೂಚಿಗಳನ್ನು ಅನುಸರಿಸಿದ್ದೇವೆ” ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಜಿಲ್ಲೆಯಾದ್ಯಂತ 33 ಸಾವಿರ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ” ಎಂದು ಆಯೋಗದ ಅಧಿಕಾರಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನೈತಿಕ ಪೊಲೀಸ್‌ಗಿರಿ ಹತ್ಯೆಗೆ ಸಿಎಂ ಹೊಣೆ; ಡಿಕೆಶಿ ಆಗ್ರಹ

ಕಳೆದ ಹಲವು ವರ್ಷಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

“ಜನರು ತಾವು ಸ್ಥಳಾಂತರಗೊಂಡ ಸ್ಥಳಗಳಲ್ಲಿ ತಮ್ಮ ಹೆಸರನ್ನು ಸೇರಿಸಿದ್ದಾರೆ. ಆದರೆ, ಹಿಂದಿನ ಕ್ಷೇತ್ರದಲ್ಲಿ ಅವರ ಹೆಸರನ್ನು ಅಳಿಸಿಲ್ಲ. ಇದರಿಂದಾಗಿ ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಒಬ್ಬರದ್ದೇ ಹೆಸರುಗಳು ಕಾಣಿಸಿಕೊಂಡಿವೆ. ನಾವು ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ನಮೂದಾಗಿದ್ದ ಹೆಸರುಗಳನ್ನು ತೆಗೆದು ಹಾಕಿದ್ದೇವೆ. ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಅಳಿಸಿಲ್ಲ. ಪಟ್ಟಿಯಿಂದ ಹೆಸರುಗಳನ್ನು ಅಳಿಸುವಾಗ ನಾವು ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದೇವೆ,” ಎಂದು ಪವನ್ ಕುಮಾರ್ ಮಾಲಪಾಟಿ ಹೇಳಿದ್ದಾರೆ.

“ಮೃತಪಟ್ಟವರ ಸುಮಾರು 20,000ಕ್ಕೂ ಹೆಚ್ಚು ಹೆಸರುಗಳು ಇನ್ನೂ ಪಟ್ಟಿಯಲ್ಲಿದ್ದವು. ಮೃತರ ಕುಟುಂಬದ ಸದಸ್ಯರಿಂದ ಅಧಿಕೃತ ಮಾಹಿತಿ ಪಡೆದು ಮೃತಪಟ್ಟವರ ಹೆಸರುಗಳನ್ನು ತೆಗೆದಿದ್ದೇವೆ” ಎಂದು ಮಾಲಪಾಟಿ ತಿಳಿಸಿದ್ದಾರೆ.

ಪುನರಾವರ್ತಿತ ಮತ್ತು ಮೃತಪಟ್ಟವರ ಹೆಸರುಗಳನ್ನು ತೆಗೆದು, ಹೊಸ ಮತದಾರರ ಹೆಸರನ್ನು ಸೇರಿಸುವುದರಲ್ಲಿ ಯಾವುದೇ ಎಂದು ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...