ಬನವಾಸಿ | ಗುಡ್ನಾಪುರ ಬಂಗಾರೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳುವು; ಪ್ರಕರಣ ದಾಖಲು

Date:

ಬನವಾಸಿ: ಗುಡ್ನಾಪುರದಲ್ಲಿರುವ ಶ್ರೀ ಬಂಗಾರೇಶ್ವರ ದೇವಸ್ಥಾನದಲ್ಲಿ ದೇವರ ಮುಂದೆ ಇಟ್ಟಿದ್ದ ಎರಡು ಕಾಣಿಕೆ ಹುಂಡಿಗಳನ್ನು ಮೀಟಿ ತೆಗೆದು, ಅದರಲ್ಲಿದ್ದ ಅಂದಾಜು ₹10,000 ಹಣವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಈ ಸಂಬಂಧ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳು ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆಯ ವಿವರ: ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳು ದೂರಿನಲ್ಲಿ ತಿಳಿಸಿರುವಂತೆ, ಅವರು ದಿನಾಂಕ 02-12-2025 ರಂದು ರಾತ್ರಿ 7:00 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಬೀಗ ಹಾಕಿ ಮನೆಗೆ ತೆರಳಿದ್ದರು. ಆ ಸಮಯದಲ್ಲಿ ಕಾಣಿಕೆ ಹುಂಡಿಗಳು ಸರಿಯಾದ ಸ್ಥಿತಿಯಲ್ಲಿಯೇ ಇದ್ದವು. ಮರುದಿನ, ಅಂದರೆ ದಿನಾಂಕ 03-12-2025 ರಂದು ಬೆಳಿಗ್ಗೆ 8:00 ಗಂಟೆ ಸುಮಾರಿಗೆ, ದೇವಸ್ಥಾನದ ಪೂಜಾರಿಯವರಾದ ಗಣಪತಿ ಎಮ್ ಶೇಟ್ ಅವರು ಬಂದು ನೋಡಿದಾಗ ಕಾಣಿಕೆ ಡಬ್ಬಿಗಳು ಒಡೆದ ಸ್ಥಿತಿಯಲ್ಲಿ ಇದ್ದಿದ್ದನ್ನು ನೋಡಿ ಪ್ರಧಾನ ಕಾರ್ಯದರ್ಶಿಗಳಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ,.

ತಕ್ಷಣವೇ ಕಾರ್ಯದರ್ಶಿಗಳು ಉಳಿದ ಸಮಿತಿಯವರಿಗೆ ತಿಳಿಸಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ, ಎರಡು ಕಾಣಿಕೆ ಹುಂಡಿಗಳ ಬೀಗಗಳನ್ನು ಒಡೆದು ಹಣ ಕಳವು ಮಾಡಿರುವುದು ದೃಢಪಟ್ಟಿದೆ. ಆ ಎರಡು ಕಾಣಿಕೆ ಹುಂಡಿಗಳಲ್ಲಿ ಸುಮಾರು ₹10,000 (ಹತ್ತು ಸಾವಿರ ರೂಪಾಯಿ) ಇರುತ್ತಿತ್ತು ಎಂದು ದೇವಸ್ಥಾನದ ಸಮಿತಿಯವರು ಅಂದಾಜಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳಾ ಸಿಬ್ಬಂದಿಗೆ ಜಾತಿ ನಿಂದನೆ; ಪ್ರಕರಣ ದಾಖಲು

ಕಳ್ಳರು ಈ ಕೃತ್ಯವನ್ನು ದಿನಾಂಕ 02-12-2025 ರ ರಾತ್ರಿ 7:00 ಗಂಟೆಯಿಂದ ದಿನಾಂಕ 03-12-2025 ರ ಬೆಳಿಗ್ಗೆ 8:00 ಗಂಟೆಯ ನಡುವಿನ ಅವಧಿಯಲ್ಲಿ ಎಸಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ವಿನಂತಿಸಿದ್ದಾರೆ. ದೂರು ಆಧರಿಸಿ ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...