ಬಂಡೀಪುರ ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ದಿನಾಚರಣೆ

Date:

ಅರಣ್ಯ ಇಲಾಖೆಯ ಸಿಬ್ಬಂದಿಯು ಅರಣ್ಯ ರಕ್ಷಣೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಿರ್ಜಾ ವಾಸಿಮ್ ಅವರಿಗೆ ಗಜಗೌರವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಹಾಗೂ ದೇಶದಲ್ಲಿ ಉತ್ತಮ ಅರಣ್ಯ ರಕ್ಷಕ ಎಂದು ಗಾರ್ಡ್ ಆನಂದ್ ಅವರಿಗೆ ಪ್ರಶಸ್ತಿ ದೊರಕಿರುವುದು ಹೆಮ್ಮೆ ಎನಿಸಿದೆ ಎಂದು ಹುಲಿ ಸಂರಕ್ಷಣಾಧಿಕಾರಿ ಡಾ. ರಮೇಶ್ ಕುಮಾರ್ ಶ್ಲಾಘಿಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಬಂಡೀಪುರದ ಮೇಲು ಕಾಮನ ಹಳ್ಳಿಯ ಸಫಾರಿ ಕೇಂದ್ರದಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಮುಂಚೂಣಿ ಸಿಬ್ಬಂದಿ ದಿನಾಚರಣೆಯಲ್ಲಿ ಮಾತನಾಡಿದರು.

“ಬಂಡೀಪುರ ಇಡೀ ದೇಶದಲ್ಲಿಯೇ ಎರಡನೇ ಅತ್ಯುತ್ತಮ ಹುಲಿ ಪ್ರದೇಶವೆಂದು ಖ್ಯಾತಿ ಪಡೆದಿರುವುದು ಹಮ್ಮೆಯ ಸಂಗತಿ. ಈವರೆಗೆ ನಿರ್ವಹಣೆಯಲ್ಲಿ ಶೇ.70 ರಿಂದ ಶೇ.80ರಷ್ಟು ಅಂಕಗಳಿಸುತ್ತಿದ್ದ ಬಂಡೀಪುರ ಇದೀಗ ಶೇ.95 ಅಂಕ ಪಡೆದಿದ್ದು, ಅತ್ಯುತ್ತಮ ಹುಲಿ ಸಂರಕ್ಷಿತ ಪ್ರದೇಶವೆಂದು ಗುರುತಿಸಿಕೊಂಡಿದೆ. ಇದಕ್ಕೆ ಮುಂಚೂಣಿ ಸಿಬ್ಬಂದಿಗಳು ಮುಖ್ಯ ಕಾರಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಡೀಪುರಕ್ಕೆ ಇಷ್ಟು ಹೆಸರು ಬರಲು ಕಾರಣ ಮುಂಚೂಣಿ ಸಿಬ್ಬಂದಿಗಳಾದ ವಾಚರ್ ಗಾರ್ಡ್ ಮತ್ತು ರೇಂಜರ್ ಸೇರಿದಂತೆ ಕೆಳಮಟ್ಟದ ಅಧಿಕಾರಿಗಳು ಮತ್ತು ಪ್ರತಿಯೊಬ್ಬರು ಶ್ರಮಿಸಿದ್ದಾರೆ. ಆನೆಗಣತಿಯಲ್ಲಿ ದೇಶದಲ್ಲಿ ಮೊದಲನೇ ಸ್ಥಾನ ಪಡೆದಿದೆ. ಹುಲಿ ಗಣತಿಯಲ್ಲಿ ಎರಡನೇ ಸ್ಥಾನ ಮತ್ತು ರಾಜ್ಯದಲ್ಲಿ ಮೊದಲನೇ ಸ್ಥಾನ ಪಡೆದಿದ್ದು, ನಮ್ಮ ಬಂಡೀಪುರದಲ್ಲಿ 200 ಚಿರತೆಗಳು ಇವೆ. ಇದಕ್ಕೆ ಕಾರಣಕರ್ತರಾಗಿರುವ ಮುಂಚೂಣಿ ಸಿಬ್ಬಂದಿಗಳು ಮತ್ತು ಅವರ ಕುಟುಂಬದವರನ್ನು ಗೌರವಿಸುವ ಸಲುವಾಗಿ ಇದೇ ಮೊದಲ ಬಾರಿಗೆ ಮುಂಚೂಣಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ಬಂಡೀಪುರದಲ್ಲಿ ಅರಣ್ಯ ಪ್ರದೇಶದಲ್ಲಿ ನೈಸರ್ಗಿಕವಾಗಿ ಕಾಡಿನ ಪ್ರಾಣಿಗಳು ಸಾವನ್ನಪ್ಪುವ ಸಂಖ್ಯೆ ಇಲ್ಲದೆ ಇರುವುದು ಸಂತೋಷದಾಯಕವಾಗಿದೆ. ಸಿಬ್ಬಂದಿಗಳು ಬಂಡೀಪುರ ಅರಣ್ಯ ಪ್ರದೇಶದಲ್ಲಿ ಉತ್ತಮವಾಗಿ ಕೆಲಸ‌ ಮಾಡುತ್ತಿದ್ದು, ಅರಣ್ಯವನ್ನು ರಕ್ಷಣೆ ಮಾಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎಳ್ಳು, ತೊಗರಿ ಸಂಪೂರ್ಣ ನೆಲಸಮ ಮಾಡಿದ ಕಿಡಿಗೇಡಿಗಳು

ಇದೇ ಸಂದರ್ಭದಲ್ಲಿ ಹಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಉಪಾಧ್ಯಕ್ಷ ನಾಗರಾಜು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ನವೀನ್, ರವೀಂದ್ರ, ಬಂಡೀಪುರ ಅರಣ್ಯ ಇಲಾಖೆಯ ಕಚೇರಿ ಅಧೀಕ್ಷಕ ಶೇಷ ಪ್ರಸಾದ್, ವಲಯ ಅರಣ್ಯ ಅಧಿಕಾರಿ ನವೀನ್ ಕುಮಾರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...