ಬಂಡೀಪುರ | ಗಾಯಗೊಂಡ ಸ್ಥಿತಿಯಲ್ಲಿ ಹುಲಿ ಪತ್ತೆ; ರಕ್ಷಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Date:

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿ ಹುಲಿಯೊಂದು ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕುಂಧಕೆರೆ ಅರಣ್ಯ ವಲಯದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಯೆಲ್ಚೆಟ್ಟಿ ಎಂಬ ಗ್ರಾಮದ ನಿವಾಸಿ ಮಹದೇವ ಎಂಬುವವರ ಜಮೀನಿನಲ್ಲಿ ಸುಮಾರು 11 ರಿಂದ 12 ವರ್ಷ ಪ್ರಾಯವಿರುವ ಹುಲಿಯೊಂದು ಗಾಯಗೊಂಡು ನರಳಾಡುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಆ ಬಳಿಕ ತಜ್ಞರೊಂದಿಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅರಿವಳಿಕೆ ಮದ್ದು ನೀಡಿ, ರಕ್ಷಿಸಿದ್ದಾರೆ. ಇನ್ನೊಂದು ಹುಲಿಯೊಂದಿಗೆ ಜಗಳವಾಡಿದ ನಂತರ ಗಾಯಗೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
bandipur tiger

ಸದ್ಯ ಗಾಯಗೊಂಡಿದ್ದ ಹುಲಿಗೆ ಸೂಕ್ತ ಚಿಕಿತ್ಸೆ ನೀಡಲು ಮೈಸೂರು ಬಳಿಯ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಅಧಿಕಾರಿಗಳು ಕಳುಹಿಸಿರುವುದಾಗಿ ತಿಳಿದುಬಂದಿದೆ. ಗಾಯಗೊಂಡಿದ್ದ ಹುಲಿಯೊಂದಿಗೆ ಜಗಳವಾಡಿದ್ದ ಇನ್ನೊಂದು ಹುಲಿಯನ್ನು ಪತ್ತೆ ಹಚ್ಚಿ, ಮತ್ತೆ ಕಾಡಿಗೆ ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಶಿಬಿರದ ಎರಡು ಆನೆಗಳನ್ನು ಬಳಸಿಕೊಂಡಿರುವುದಾಗಿ ತಿಳಿದುಬಂದಿದೆ.

ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಎಸಿಎಫ್ ಸುರೇಶ್ ಹಾಗೂ ಕುಂದಕೆರೆ ಆರ್‌ಎಫ್‌ಒ ನಾಗೇಂದ್ರ ನಾಯಕ್‌ ಸ್ಥಳಕ್ಕೆ ಭೇಟಿ ನೀಡಿದ್ದರು. ವೈದ್ಯ ಡಾ.ವಾಸೀಂ ಮಿರ್ಜಾ ಅರಿವಳಿಕೆ ಲಸಿಕೆ ನೀಡಿದ್ದು, ಬಳಿಕ ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದರು.

ಇದನ್ನು ಓದಿದ್ದೀರಾ? ಬೀದರ್‌ | ಈದಿನ ಫಲಶೃತಿ: ವಿಕಲಚೇತನ ಸಹೋದರಿಯರ ಮನೆಗೆ ದೌಡಾಯಿಸಿದ ಅಧಿಕಾರಿಗಳು; ಮಾಸಾಶನದ ಭರವಸೆ

“ಹುಲಿಯೊಂದಿಗೆ ಕಾದಾಡಿದ್ದ ಹುಲಿ ಸೆರೆ ಹಿಡಿಯಬೇಕು. ಅಲ್ಲಿಯವರೆಗೂ ಗಾಯಾಳು ಹುಲಿ ಸಾಗಿಸಬಾರದು” ಎಂದು ರೈತರು ಪಟ್ಟು ಹಿಡಿದಿದ್ದರು. ಅಧಿಕಾರಿಗಳು ಭರವಸೆ ನೀಡಿದ ಬಳಿಕ ಅವಕಾಶ ನೀಡಿದರು. ಇನ್ನೊಂದು ಹುಲಿಯನ್ನು ಸೆರೆ ಹಿಡಿಯಲು ಕುನ್ನಮುಟ್ಟಿ ಗುಡ್ಡದಲ್ಲಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...