ಮಂಚದಡಿ ₹42 ಕೋಟಿ ನಗದು ಪತ್ತೆ; ಅಂಬಿಕಾಪತಿ ದಂಪತಿ ಬಂಧನ ಸಾಧ್ಯತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೆರಿಗೆ ವಂಚನೆ ಹಿನ್ನಲೆ, ಕಳೆದ ಹಲವು ದಿನಗಳಿಂದ ಐಟಿ ಅಧಿಕಾರಿಗಳು ಏಕಕಾಲಕ್ಕೆ ಆಭರಣ ಅಂಗಡಿ, ಮಾಲೀಕರು, ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿ, ಕೋಟ್ಯಂತರ ಹಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಹಿಂದೆ ನಡೆಸಿದ ದಾಳಿ ವೇಳೆ ದೊರೆತ ಕೆಲವು ದಾಖಲೆಗಳ ಆಧಾರದ ಮೇಲೆ ಆಭರಣ, ವ್ಯಾಪಾರಿ ಹಾಗೂ ಗುತ್ತಿಗೆದಾರರ ಮನೆ ಮೇಲೆ ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಪದೇ ಪದೇ ಐಟಿ ದಾಳಿ ನಡೆಯುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಈ ದಾಳಿಗೆ ಪಂಚ ರಾಜ್ಯಗಳ ಚುನಾವಣೆ ನಂಟು ಇದೆ ಎಂಬ ಅನುಮಾನವಿದೆ.

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ, ಅಲರ್ಟ್‌ ಆಗಿರುವ ಐಟಿ ಅಧಿಕಾರಿಗಳು ಸುಳಿವು ಆಧರಿಸಿ, ತಕ್ಷಣವೇ ತೆರಿಗೆ ವಂಚನೆ ಮಾಡುವವರ ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಚದಡಿ ಕಂತೆ ಕಂತೆ ನೋಟು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರಿನಲ್ಲಿ ಹಣ ಸಾಗಾಟ ಮಾಡುವ ಸುಳಿವು ಪಡೆದ ಐಟಿ ಅಧಿಕಾರಿಗಳು ಅ.12ರ ಸಾಯಂಕಾಲ 6ರ ಸುಮಾರಿಗೆ ಕಾಂಗ್ರೆಸ್ ಮಾಜಿ ಕಾರ್ಪೋರೇಟರ್‌ ಅಶ್ವಥಮ್ಮ ಮತ್ತು ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ದಾಳಿ ನಡೆಸಿ ಬರೋಬ್ಬರಿ ₹42 ಕೋಟಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ.

ಆತ್ಮಾನಂದ ಕಾಲೋನಿಯ ಫ್ಲಾಟ್​ನಲ್ಲಿ ಬರೊಬ್ಬರಿ 23 ಬಾಕ್ಸ್​ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಯಾರು ಈ ಅಂಬಿಕಾಪತಿ?

ಅಂಬಿಕಾಪತಿ ಇವರು ಗುತ್ತಿಗೆದಾರ. ಇವರ ಪತ್ನಿ ಅಶ್ವಥಮ್ಮ. ಇವರು 2001ರಲ್ಲಿ ಕಾವಲ್ ಭೈರಸಂದ್ರ ವಾರ್ಡ್‌ನ ಕಾರ್ಪೋರೇಟರ್ ಆಗಿದ್ದರು. ಇವರು ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕ ಎನ್ನಲಾಗಿದೆ.

ಅಂಬಿಕಾಪತಿ ಅವರು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಶೇ.40 ಕಮಿಷನ್ ಆರೋಪ ಮಾಡಿದ್ದರು. ಹಾಗೇ ಬಿಬಿಎಂಪಿಯಲ್ಲಿ ಶೇ.50 ನೀಡಬೇಕು ಎಂದು ಆರೋಪಿಸಿದ್ದರು.

ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದರು. ಮುನಿರತ್ನ ಅವರು ಅಂಬಿಕಾಪತಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡಿದ್ದರು. ಈ ಪ್ರಕರಣದಲ್ಲಿ ಅಂಬಿಕಾಪತಿ ವೈಯ್ಯಾಲಿಕಾವಲ್ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು.

ಐಟಿ ಅಧಿಕಾರಿಗಳು ಅಂಬಿಕಾಪತಿ ಪತ್ನಿ ಆಶ್ವಥಮ್ಮ ಹೆಸರಲ್ಲಿರುವ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲಾಟ್ ಮೇಲೆ ದಾಳಿ ನಡೆಸಿದ್ದು, ಈ ಫ್ಲಾಟ್‌ನಲ್ಲಿ ಅಂಬಿಕಾಪತಿ ಪತ್ನಿಯ ಸಹೋದರ ಪ್ರದೀಪ್ ವಾಸ ಮಾಡುತ್ತಿದ್ದಾರೆ. ಈ ಮನೆಯ ಕೊಠಡಿಯಲ್ಲಿಯೇ ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ಮನೆಯಲ್ಲಿ ಪತ್ತೆಯಾಗಿದ್ದ ₹42 ಕೋಟಿ ಹಣ ಯಾರದು ಎಂದು ತಿಳಿದುಬಂದಿಲ್ಲ. ಈ ಹಣ ಸಂಗ್ರಹಿಸಿಟ್ಟ ರೂಮ್‌ ಅನ್ನು ಯಾರೂ ಬಳಕೆ ಮಾಡುತ್ತಿರಲಿಲ್ಲ. ಅಂಬಿಕಾಪತಿ ಮತ್ತು ಅಕ್ಕ ಅಶ್ವಥಮ್ಮ ಸೇರಿ ಪ್ರದೀಪ್‌ಗೆ ಮನೆ ಕೊಡಿಸಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುಂಡು ಹಾರಿಸಿ ಕೆಜಿ ಚಿನ್ನ ಕಳ್ಳತನ; ಹೈದರಾಬಾದ್‌ನತ್ತ ಪರಾರಿಯಾಗುತ್ತಿದ್ದ ಓರ್ವನ ಬಂಧನ

ಕಾವಲ್ ಭೈರಸಂಧ್ರ ಗಣೇಶ ಬ್ಲಾಕ್‌ನಲ್ಲಿರುವ ಅಂಬಿಕಾಪತಿ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ. ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿದೆ.

ಸದ್ಯ ಐಟಿ ಅಧಿಕಾರಿಗಳು ₹42 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಪಿಎಮ್‌ಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಇಡಿ ಪ್ರವೇಶವಾದರೆ, ಸಂಬಂಧಪಟ್ಟ ವ್ಯಕ್ತಿಗಳ ಬಂಧನ ಸಾಧ್ಯತೆ ಇದೆ.

ಕೋಟ್ಯಂತರ ಹಣ ಸಂಗ್ರಹವಾಗಿರುವ ಹಿನ್ನೆಲೆ, ಹವಾಲಾ ಆಗಿರುವ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಇಷ್ಟು ಹಣದ ಬಗ್ಗೆ ಸರಿಯಾದ ಮಾಹಿತಿ ನೀಡದಿದ್ದರೆ, ಅಂಬಿಕಾಪತಿ ದಂಪತಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...