ಬೆಂಗಳೂರು | ಮಲ್ಟಿಪ್ಲೆಕ್ಸ್ ಗೋಲ್ಡ್‌ ಕಾರ್ಡ್‌ ಆಸೆಗೆ ಬಿದ್ದು ₹1 ಲಕ್ಷ ಕಳೆದುಕೊಂಡ ವ್ಯಕ್ತಿ

Date:

ಮಲ್ಟಿಪ್ಲೆಕ್ಸ್ ಗೋಲ್ಡ್ ಕಾರ್ಡ್ ಚಂದಾದಾರಿಕೆ ಆಸೆಗೆ ಬಿದ್ದು, ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಗೆ ಒಳಗಾಗಿ ₹1 ಲಕ್ಷ ಕಳೆದುಕೊಂಡಿದ್ದಾರೆ. ವಂಚಕರು ತಮಗೆ ಮಲ್ಟಿಪ್ಲೆಕ್ಸ್‌ನಲ್ಲಿ ಗೋಲ್ಡ್ ಕಾರ್ಡ್ ಲಭ್ಯವಿದೆ. ನಿಮ್ಮ ವಿಳಾಸವನ್ನು ಪರಿಶೀಲಿಸಲು ತಮ್ಮ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ಹಾಗೂ ಒಟಿಪಿ ನೀಡಬೇಕೆಂದು ಹೇಳಿ, ಅಗತ್ಯ ಮಾಹಿತಿಗಳನ್ನು ಪಡೆದುಕೊಂಡು ₹1,18,000 ವಂಚಿಸಿದ್ದಾರೆ.

ನಾಗರಭಾವಿಯಲ್ಲಿ ಗಾರ್ಮೆಂಟ್ ವ್ಯಾಪಾರ ನಡೆಸುತ್ತಿರುವ ಚಂದ್ರಾ ಲೇಔಟ್ ನಿವಾಸಿ ಚಂದ್ರು (ಹೆಸರು ಬದಲಿಸಲಾಗಿದೆ) ಅಕ್ಟೋಬರ್ 14 ರಂದು ಮೈಸೂರು ರಸ್ತೆಯ ಮಾಲ್‌ಗೆ ಸಿನಿಮಾ ನೋಡಲು ಹೋಗಿದ್ದರು. ಅಲ್ಲಿ ವಾರಾಂತ್ಯದಲ್ಲಿ ವಿಶೇಷವಾಗಿ ಕಾಂಪ್ಲಿಮೆಂಟರಿ ಮಲ್ಟಿಪ್ಲೆಕ್ಸ್ ಗೋಲ್ಡ್ ಕಾರ್ಡ್ ಅನ್ನು ಅವರಿಗೆ ನೀಡಲಾಗಿದೆ. ಆಫರ್‌ನಿಂದ ಆಕರ್ಷಿತರಾದ ಅವರು ತಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ನೀಡಲು ಸಮ್ಮತಿಸಿದ್ದು, ಒಟಿಪಿಯನ್ನೂ ಹಂಚಿಕೊಂಡಿದ್ದಾರೆ.

“ಅಕ್ಟೋಬರ್ 15 ರಂದು, ನಾನು ಆನ್‌ಲೈನ್ ಬ್ಯಾಂಕ್ ಪೋರ್ಟಲ್ ಅನ್ನು ಪರಿಶೀಲಿಸಿದಾಗ, ನನ್ನ ಬ್ಯಾಂಕ್ ಬ್ಯಾಲೆನ್ಸ್ ₹1,18,200 ನಿಂದ ₹200 ಕಡಿತವಾಗಿತ್ತು. ಆದರೆ ಬ್ಯಾಂಕ್‌ನಿಂದ ಯಾವುದೇ ಡೆಬಿಟ್ ಸಂದೇಶ ನನಗೆ ಬಂದಿಲ್ಲ. ನನ್ನ ಬ್ಯಾಂಕ್ ಅನ್ನು ಸಂಪರ್ಕಿಸಿದಾಗ, ನಾನು ಒಟಿಪಿ ಹಂಚಿಕೊಂಡಿದ್ದರಿಂದ ಹಣ ಕಡಿತವಾಗಿದೆ ಎಂದು ತಿಳಿಸಿದರು. ನನ್ನ ಖಾತೆಯಿಂದ ನಾಲ್ಕು ಬಾರಿ ಹಣ ಕಡಿತವಾಗಿದ್ದು, (₹99,999, ₹1, ₹15,000 ಮತ್ತು ₹3,000) ಒಟ್ಟು ₹1,18,000 ವರ್ಗಾವಣೆಯಾಗಿರುವುದಾಗಿ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ಚಂದ್ರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದ ಸಂಘಟನೆಗಳು

“ತಮ್ಮ ಅಧಿಕೃತ ದಾಖಲೆಗಳಿಗೆ ಲಿಂಕ್ ಮಾಡಿದ ಯಾವುದೇ ಖಾತೆಗೆ ಹಣ ವರ್ಗಾವಣೆಯಾಗಿಲ್ಲ. ಅಂತಹ ಯಾವುದೇ ರುಜುವಾತುಗಳನ್ನು ನಾವು ವಿನಂತಿಸುವುದಿಲ್ಲ ಎಂದು ಮಲ್ಟಿಪ್ಲೆಕ್ಸ್ ನಮಗೆ ತಿಳಿಸಿದೆ. ಸಂತ್ರಸ್ತ ವ್ಯಕ್ತಿಯು ಮಲ್ಟಿಪ್ಲೆಕ್ಸ್‌ನಿಂದ ವಂಚನೆಗೆ ಒಳಗಾಗಿದ್ದರೆ ಅಥವಾ ಆತನ ಪ್ರಕರಣವು ಆಧಾರ್ ಸಕ್ರಿಯಗೊಳಿಸಿದ ಪಾವತಿ ವ್ಯವಸ್ಥೆಗೆ (AEPS) ಸಂಬಂಧಿಸಿದ್ದೇ ಎಂಬುದನ್ನು ನಾವು ಇನ್ನೂ ಖಚಿತಪಡಿಸಿಕೊಳ್ಳಬೇಕಾಗಿದೆ. ಐಟಿ ಕಾಯ್ದೆಯಡಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...