ಬೆಂಗಳೂರು | ಬನ್ನೇರುಘಟ್ಟ ಉದ್ಯಾನದಲ್ಲಿ 13 ಜಿಂಕೆಗಳು ನಿಗೂಢ ಸಾವು

Date:

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ 10 ದಿನಗಳಿಂದ 13 ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಜಿಂಕೆಗಳ ಪರಸ್ಪರ ಕಾದಾಟ ಮತ್ತು ಜಂತುಹುಳುಗಳ ಬಾಧೆಯಿಂದ ಕೆಲವು ಜಿಂಕೆಗಳು ಮೃತಪಟ್ಟಿವೆ. ಆದರೂ, ಇನ್ನೂ ಕೆಲವು ಜಿಂಕೆಗಳ ಸಾವಿಎ ಕಾರಣವೇನು ಎಂಬುದು ತಿಳಿದುಬಂದಿದೆ. ಮೃತಪಟ್ಟ ಕೆಲವು ಜಿಂಕೆಗಳ ಹೊಟ್ಟೆಯ ಭಾಗದಲ್ಲಿ ಊತ ಕಾಣಿಸಿಕೊಂಡಿತ್ತು ಎಂದು ಉದ್ಯಾನವನದ ಮೂಲಗಳು ತಿಳಿಸಿವೆ.

ಬೆಂಗಳೂರಿನ ಸೇಂಟ್‌ ಜಾನ್ಸ್ ಆಸ್ಪತ್ರೆಯ ಉದ್ಯಾನದಲ್ಲಿದ್ದ 37 ಜಿಂಕೆಗಳನ್ನು ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಬನ್ನೇರುಘಟ್ಟ ಉದ್ಯಾನವನಕ್ಕೆ ಆಗಸ್ಟ್‌ 17ರಂದು ಹಸ್ತಾಂತರಿಸಲಾಗಿತ್ತು. ಆ ಜಿಂಕೆಗಳನ್ನು 10 ದಿನ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಆ ಸಮಯದಲ್ಲೇ 9 ಜಿಂಕೆಗಳು ಸಾವನ್ನಪ್ಪಿದ್ದವು. ಸೋಮವಾರ ನಾಲ್ಕು ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಂಕೆಗಳು ಅತ್ಯಂತ ಸೂಕ್ಷ್ಮ ಪ್ರಾಣಿಗಳು. ಅವುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸಿದಾಗ, ಹೊಸ ಜಾಗಕ್ಕೆ ಹೊಂದಿಕೊಳ್ಳುವುದು ಕಷ್ಟ” ಎಂದು ಉದ್ಯಾನವನ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿರುವುದಾಗಿ ‘ಪಿವಿ’ ವರದಿ ಮಾಡಿದೆ.

“ಕ್ವಾರಂಟೈನ್‌ ಜಾಗದಲ್ಲಿ ಗಂಡು ಜಿಂಕೆಗಳೇ ಹೆಚ್ಚಾಗಿದ್ದವು. ಇದು ಜಿಂಕೆಗಳ ಮಿಲನದ ಸಮಯವಾದ್ದರಿಂದ ಹೆಣ್ಣು ಜಿಂಕೆಗಾಗಿ ಪರಸ್ಪರ ಕಾದಾಟದಿಂದಾಗಿ ಹೆಚ್ಚಿನ ಗಂಡು ಜಿಂಕೆಗಳು ಮೃತಪಟ್ಟಿವೆ.ಕೆಲವು ಜಿಂಕೆಗಳು ಜಂತುಹುಳು ಬಾಧೆಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಉದ್ಯಾನವನದಲ್ಲಿದ್ದ ಏಳು ಚಿರತೆ ಮರಿಗಳು ರಕ್ತಭೇದಿಯಿಂದ ಸಾವನ್ನಪ್ಪಿದ್ದವು. ಇದೀಗ, ಜಿಂಕೆಗಳ ಸರಣಿ ಸಾವು ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...