ಬೆಂಗಳೂರು | ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 42 ನೇಕಾರರು ಆತ್ಮಹತ್ಯೆ

Date:

ಕಚ್ಚಾ ವಸ್ತುಗಳ ಬೆಲೆ ಏರಿಕೆ, ಅನಿಶ್ಚಿತ ಮಾರುಕಟ್ಟೆ, ಆರ್ಥಿಕ ಸಂಕಷ್ಟ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 42 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜವಳಿ ಇಲಾಖೆ ಮಾಹಿತಿ ನೀಡಿದೆ.

ಬೆಳಗಾವಿ ಜಿಲ್ಲೆಯಲ್ಲಿ 24, ಬಾಗಲಕೋಟೆ 5, ಬೆಂಗಳೂರು ಗ್ರಾಮಾಂತರ 4, ರಾಮನಗರ 3, ತುಮಕೂರು 2, ಬೆಂಗಳೂರು ನಗರ, ಧಾರವಾಡ, ಚಿಕ್ಕಬಳ್ಳಾಪುರ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಇನ್ನೆರಡು ಪ್ರಕರಣಗಳ ಕುರಿತು ಇನ್ನೂ ಎಫ್‌ಐಆರ್‌ ದಾಖಲಾಗಿಲ್ಲ.

ಆತ್ಮಹತ್ಯೆ ಮಾಡಿಕೊಂಡ 25 ನೇಕಾರರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ.  ಪ್ರಧಾನಮಂತ್ರಿ ಜೀವನ್‌ ಜ್ಯೋತಿ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದ ನಾಲ್ವರಿಗೆ ಯೋಜನೆಯಡಿ ಪರಿಹಾರ ಪಡೆಯಲು ಸೂಚಿಸಲಾಗಿದೆ. ಆರು ಪ್ರಸ್ತಾವಗಳಿಗೆ ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆ ಮಾಡಲಾಗುವುದು. ಉಳಿದ ಏಳು ಪ್ರಕರಣಗಳಲ್ಲಿ ಸೂಕ್ತ ದಾಖಲೆ ಸಲ್ಲಿಸದ ಕಾರಣ ಪ್ರಸ್ತಾವ ಕೈ ಬಿಡಲಾಗಿದೆ ಎಂದು ಜವಳಿ ಇಲಾಖೆ ಮಾಧ್ಯಮಗಳಿಗೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದಡಿ ಗುಂಪು ವಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದ 68ನೇಕಾರರ ಕುಟುಂಬದ ಸದಸ್ಯರಿಗೆ ತಲಾ 2 ಲಕ್ಷ ರೂ.ದಂತೆ ಪರಿಹಾರ ಐದು ವರ್ಷಗಳಿಂದ ಬಂದಿಲ್ಲ ಎಂಬ ಆರೋಪವಿದೆ.

ಕಚ್ಚಾ ನೂಲಿನ ಬೆಲೆ, ರೇಷ್ಮೆ ಬೆಲೆ ದುಪ್ಪಟ್ಟಾಗಿದೆ. ಆದರೆ, ಅದಕ್ಕೆ ತಕ್ಕಂತೆ ಸೀರೆಗಳ ಬೆಲೆಯಲ್ಲಿ ಏರಿಕೆಯಾಗಿಲ್ಲ. ಮಧ್ಯವರ್ತಿಗಳಿಂದ ಏಕಾಏಕಿ ಬೆಲೆ ಏರಿಳಿತದ ಪರಿಣಾಮ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಮಾಧ್ಯಮದವರಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...