ಬೆಂಗಳೂರು | ಕೆರೆ/ಉದ್ಯಾನವನದ ನಿರ್ವಹಣೆಗೆ ಸ್ವಯಂ ಸೇವಕರಾಗಲು ನಾಗರಿಕರಿಗೆ ಕರೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆರೆ ಅಥವಾ ಉದ್ಯಾನವನದ ನಿರ್ವಹಣೆಯ ಮೇಲ್ವಿಚಾರಣೆಗೆ ಸ್ವಯಂ ಸೇವಕರಾಗಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಗರಿಕರಿಗೆ ಅವಕಾಶ ಕಲ್ಪಿಸಿದೆ.

ಪಾಲಿಕೆಯು ತನ್ನ ವೆಬ್‌ಸೈಟ್‌ನಲ್ಲಿ ‘ಕೆರೆ’ ಮತ್ತು ‘ಹಸಿರು ಮಿತ್ರ’ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸಲು ನಾಗರಿಕರನ್ನು ಆಹ್ವಾನಿಸಿದೆ. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಸೀಮಿತ ಮಂದಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಬಿಬಿಎಂಪಿ ಪ್ರಾರಂಭಿಸಿರುವ ಈ ಹೊಸ ಕಾರ್ಯಕ್ರಮಕ್ಕೆ ನಾಗರಿಕರು ನೋಂದಾಯಿಸಿಕೊಳ್ಳುವ ಮೂಲಕ ಈ ಕಾರ್ಯದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದೆ.

ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಅವರು ಈ ತಿಂಗಳ ಆರಂಭದಲ್ಲಿ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನದ ಅಡಿಯಲ್ಲಿ ಹೊಸ ಕಾರ್ಯಕ್ರಮವನ್ನು ಘೋಷಿಸಿದರು. ಅಧಿಕಾರಗಳಿಗೆ ನೇರ ಪ್ರವೇಶ ಹೊಂದಿರುವ ಪಕ್ಷದ ಕಾರ್ಯಕರ್ತರನ್ನು ಹೊರತುಪಡಿಸಿ, ಕಾರ್ಯಕ್ರಮವು ಸಾಮಾನ್ಯ ನಾಗರಿಕರಿಗೆ ಮಾತ್ರ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಒದಗಿಸಲಾದ ನೋಂದಣಿ ನಮೂನೆಯುಲ್ಲಿ ಆಸಕ್ತ ಸ್ವಯಂಸೇವಕರು ಹೆಸರು, ಫೋನ್ ಸಂಖ್ಯೆ, ಇಮೇಲ್ ಐಡಿ, ವಸತಿ ವಿಳಾಸ, ಮತದಾರರ ಗುರುತಿನ ಪ್ರತಿ, ವಾರ್ಡ್‌ನ ಹೆಸರು ಮತ್ತು ಆದ್ಯತೆಯ ಕೆರೆ ಅಥವಾ ಉದ್ಯಾನದಂತಹ ವಿವರಗಳನ್ನು ನೀಡಬೇಕು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಡಿಯಲ್ಲಿ ಬರುವುದರಿಂದ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳು ಪಟ್ಟಿಯಲ್ಲಿಲ್ಲ.

ಬಿಬಿಎಂಪಿಯ ಉದ್ಯಾನಗಳು ಮತ್ತು ಕೆರೆಗಳ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಮಾತನಾಡಿ, “ಕಾರ್ಯಕ್ರಮವು 1,200ಕ್ಕೂ ಹೆಚ್ಚು ಉದ್ಯಾನವನಗಳು ಮತ್ತು 200 ಕೆರೆಗಳನ್ನು ಒಳಗೊಂಡಿದೆ. ಇದು ಸಂಪೂರ್ಣವಾಗಿ ಸ್ವಯಂಸೇವಕ ಸೇವೆಯಾಗಿದೆ”ಎಂದು ಹೇಳಿದರು.

ನಾಗರಿಕರು ಕೆರೆಗಳು ಮತ್ತು ಉದ್ಯಾನವನಗಳಲ್ಲಿನ ನಿರ್ವಹಣಾ ಚಟುವಟಿಕೆಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬಹುದು. ಇದರಿಂದಾಗಿ ಪಾಲಿಕೆಯು ಉತ್ತಮ ಸೇವೆಗಳನ್ನು ಒದಗಿಸಲು ಮತ್ತು ನಾಗರಿಕರ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಕೆರೆ ಮತ್ತು ಉದ್ಯಾನವನ ನಿರ್ವಹಣೆಗೆ ಪಾಲಿಕೆಯು ಉದಾರವಾಗಿ ಖರ್ಚು ಮಾಡುತ್ತದೆ. ಆದರೆ, ಎಂಜಿನಿಯರ್‌ಗಳನ್ನು ಹೊರತುಪಡಿಸಿ ಎರಡನೇ ಹಂತದ ಪರಿಶೀಲನೆ ನಡೆದಿಲ್ಲ.

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಎಲ್ಲ ಕೆರೆಗಳು ಮತ್ತು ಉದ್ಯಾನವನಗಳನ್ನು ಪ್ರದರ್ಶಿಸಿಲ್ಲ. ಡ್ರಾಪ್-ಡೌನ್ ಮೆನುವಿನಲ್ಲಿ ಕೆಲವು ವಾರ್ಡ್‌ಗಳ ಹೆಸರು ಇಲ್ಲ ಎಂದು ಎಂದು ಕೆಲವರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಸಿಬಿ ಪೊಲೀಸರು ಸೋಗೆಯಲ್ಲಿ ವ್ಯಕ್ತಿಯ ಅಪಹರಣ; ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

ಸಾರಕ್ಕಿ ಕೆರೆ ಸುಧಾರಣಾ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಪ್ರೊ.ಕೆ.ಎಸ್.ಭಟ್ ಮಾತನಾಡಿ, “ಇದೇ ರೀತಿಯ ಕೆರೆ ವಾರ್ಡನ್ ಎಂಬ ಪರಿಕಲ್ಪನೆಯು ಐದು ವರ್ಷಗಳ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ, ಬಿಬಿಎಂಪಿ ಅವರ ಅವಲೋಕನಗಳನ್ನು ಗಣನೆಗೆ ತೆಗೆದುಕೊಂಡಿಲ್ಲ” ಎಂದು ದೂರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...