ಬೆಂಗಳೂರು | ಕೋರಮಂಗಲದ ಪಬ್‌ವೊಂದರಲ್ಲಿ ಬೆಂಕಿ ಅವಘಡ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸಿದ್ದು, ಇದೀಗ ನಗರದ ಕೋರಮಂಗಲದಲ್ಲಿರುವ ಪಬ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಕೋರಮಂಗಲದ ತಾವರೆಕರೆ ಮುಖ್ಯರಸ್ತೆಯಲ್ಲಿರುವ ಫೋರಂ ಮಾಲ್‌ ಎದುರಿಗಿರುವ ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿರುವ ಪಬ್‌ಗೆ ಬೆಂಕಿ ಹೊತ್ತಿದೆ. ಅಲ್ಲದೇ, ಪಬ್‌ನ ಪಕ್ಕದ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ. ನಾಲ್ಕರಿಂದ ಐದು ವಾಹನಗಳು ಸುಟ್ಟು ಕರಕಲಾಗಿವೆ.

ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿರುವ ಪಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಕೆಳ ಮಹಡಿಯಲ್ಲಿರುವ ನೆಕ್ಸಾ ಕಾರ್​ ಷೋ ರೂಂನಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಎರಡು ಮತ್ತು ಮೂರನೇ ಫ್ಲೋರ್​​ನಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಬೆಂಕಿ ವ್ಯಾಪಕವಾಗಿ ಹಬ್ಬಿದ ಹಿನ್ನೆಲೆ, ವ್ಯಕ್ತಿಯೋರ್ವ ಜೀವ ಉಳಿಸಿಕ್ಕೊಳ್ಳಲು ನಾಲ್ಕನೇ ಮಹಡಿಯಿಂದ ಹಾರಿ ಬಿದ್ದಿದ್ದಾರೆ. ಸದ್ಯ ವ್ಯಕ್ತಿಯನ್ನು ಆಟೋ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಅಗ್ನಿ ದುರಂತ | ಮತ್ತೋರ್ವ ಗಾಯಾಳು ಸಾವು; ಮೃತರ ಸಂಖ್ಯೆ 17ಕ್ಕೆ ಏರಿಕೆ

“ಬೆಳಗ್ಗೆ ಸುಮಾರು 11 ಗಂಟೆಗೆ ಪಬ್‌ನಲ್ಲಿ ಸ್ಪಾರ್ಕ್‌ ಕಾಣಿಸಿತು. ಆಗಲೇ ಎಚ್ಚೆತ್ತು ಎಲ್ಲ ಸಿಬ್ಬಂದಿಗಳನ್ನು ಹೊರಗೆ ಕರೆಸಿದೆವು. ಸ್ಪಾರ್ಕ್‌ ಆದ ತಕ್ಷಣ ಎರಡು ಸಿಲಿಂಡರ್ ಬ್ಲಾಸ್ಟ್‌ ಆಗಿವೆ” ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...