ಬೆಂಗಳೂರು | ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ ಮಡಗಾಸ್ಕರ್‌ ದ್ವೀಪದ ವ್ಯಕ್ತಿ; ಶಸ್ತ್ರ ಚಿಕಿತ್ಸೆ ಯಶಸ್ವಿ

Date:

ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ ಮಡಗಾಸ್ಕರ್‌ ದ್ವೀಪದ 64 ವರ್ಷದ ವ್ಯಕ್ತಿಗೆ ಬೆಂಗಳೂರಿನಲ್ಲಿ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೈಬ್ರಿಡ್ ಶಸ್ತ್ರಚಿಕಿತ್ಸೆ ನಡೆಸಿದೆ.

ಈಸ್ಟ್‌ ಆಫ್ರಿಕಾ ಮಡಗಾಸ್ಕರ್‌ ದ್ವೀಪ ದೇಶದ 64 ವರ್ಷದ ವ್ಯಕ್ತಿ ಹೃದಯದ ಟ್ರಿಪಲ್‌ ವೆಸೆಲ್‌ ಕೊರೊನರಿ(ಮೂರು ಪ್ರಮುಖ ಅಪಧಮನಿಗಳ ಬ್ಲಾಕೇಜ್‌) ಕಾಯಿಲೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋ ಥೋರಾಸಿಕ್ ವಾಸ್ಕಲರ್‌ ಸರ್ಜರಿ ಹಿರಿಯ ಸಮಾಲೋಚಕ ಡಾ. ಸುದರ್ಶನ್‌ ಜಿ ಟಿ, ಇಂಟರ್‌ವೆನ್ಷನಲ್‌ ಕಾರ್ಡಿಯಾಲಜಿಸ್ಟ್‌ ಡಾ. ಶ್ರೀನಿವಾಸ್‌ ಪ್ರಸಾದ್‌, ಯೂರೋ ಆಂಕಾಲಜಿ ಯುರೋ-ಗೈನಕಾಲಜಿ, ಆಂಡ್ರಾಲಜಿ, ಕಸಿ ಮತ್ತು ರೋಬೋಟಿಕ್ ಸರ್ಜರಿಯ ಹಿರಿಯ ನಿರ್ದೇಶಕ ಡಾ. ಮೋಹನ್‌ ಕೇಶವ್‌ಮೂರ್ತಿ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಸುದರ್ಶನ್‌ ಜಿ ಟಿ ಮಾತನಾಡಿ, “ಮಡಗಾಸ್ಕರ್‌ ದ್ವೀಪ ದೇಶದ 64 ವರ್ಷದ ವ್ಯಕ್ತಿಯ ಆರೋಗ್ಯದ ಹಿನ್ನೆಲೆ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿತ್ತು. ಮಧುಮೇಹ, ಮೂತ್ರಪಿಂಡ ವೈಫಲ್ಯ, ಪ್ರಾಸ್ಟೆಟ್‌ ಗ್ರಂಥಿಯ ಸಮಸ್ಯೆ, ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಮಧುಮೇಹದ ಕಾರಣದಿಂದ ಕೆಲವು ವರ್ಷಗಳ ಹಿಂದೆಯೇ ತನ್ನೆರಡೂ ಕಾಲುಗಳನ್ನು ಕಳೆದುಕೊಂಡು ಅಂಗವೈಕಲ್ಯಕ್ಕೂ ತುತ್ತಾಗಿದ್ದರು. ಇದರ ಮಧ್ಯೆ ಇವರಿಗೆ ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಯಿಂದ ಹೃದಯದ ನೋವು ಕಾಣಿಸಿಕೊಂಡಿದೆ. ಮಡಗಾಸ್ಕರ್‌ ದ್ವೀಪದಲ್ಲಿ ಹೃದಯ ಸಂಬಂಧಿ ಚಿಕಿತ್ಸೆಗೆ ಸುಧಾರಿತ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಅವರು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು” ಎಂದು ತಿಳಿಸಿದ್ದಾರೆ.

“ಈಗಾಗಲೇ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಅವರಿಗೆ ತೆರೆದ ಬೈಪಾಸ್‌ ಸರ್ಜರಿ ಅಸಾಧ್ಯವಾಗಿತ್ತು. ಹಾಗಾಗಿ ಅವರಿಗೆ ರೋಬೋಟ್‌ ನೆರವಿನ “ರೋಬೋಟ್ ಅಸಿಸ್ಟೆಡ್ ಮಿನಿಮಲಿ ಇನ್ವೇಸಿವ್ ಡೈರೆಕ್ಟ್ ಕರೋನರಿ ಆರ್ಟರಿ ಬೈಪಾಸ್ (ಎಂಐಡಿಸಿಎಬಿ) ಎಂಬ ಕನಿಷ್ಠ ಆಕ್ರಮಣಕಾರಿ ವಿಧಾನದ ಹೈಬ್ರಿಡ್‌ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದೊಂದು ನೂತನ ಚಿಕಿತ್ಸೆಯಾಗಿದ್ದು, ಇದು ನೇರ ಪರಿಧಮನಿಯ ಬೈಪಾಸ್‌ ಸರ್ಜರಿ ಮಾಡುವ ಮೂಲಕ ಕಿರಿದಾದ ಅಪಧಮಿಗಳ ರಕ್ತದ ಹರಿವನ್ನು ಸುಧಾರಿಸಬಹುದು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಆ.18ರಂದು 7ನೇ ಕನ್ನಡ ಅಕ್ಷರ ಜಾತ್ರೆ ಕಾರ್ಯಕ್ರಮ

ಡಾ. ಮೋಹನ್ ಕೇಶವಮೂರ್ತಿ ಮಾತನಾಡಿ, “ಮೂತ್ರಪಿಂಡದ ವೈಫಲ್ಯ ಹಾಗೂ ಪ್ರಾಸ್ಟೇಟ್‌ ಗ್ರಂಥಿಯ ಸಮಸ್ಯೆ ಹೊಂದಿದ್ದ ಅವರಿಗೆ ಯೂರೋಲಿಫ್ಟ್‌ ಮೂಲಕ ಪ್ರಾಸ್ಟೇಟ್‌ ಗ್ರಂಥಿಯ ಸಮಸ್ಯೆಗೆ ಚಿಕಿತ್ಸೆ ನೀಡಿದೆವು. ಪ್ರಸ್ತುತ ರೋಗಿಯು ಚೇತರಿಕೆ ಕಾಣುತ್ತಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...