ಕೈಗೆ ಕೋಳ ಹಾಕಿದ್ದರೂ ಪೊಲೀಸರ ಮುಂದೆ ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿಶೀಟರ್

Date:

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಲು ಉತ್ಸಾಹಿಗಳಾಗಿದ್ದಾರೆ. ಇಂದಿನ ದಿನಗಳಲ್ಲಿ ಜೈಲು ಎಂಬುವುದು ಗೂಂಡಾಗಳಿಗೆ, ಕಳ್ಳರಿಗೆ, ಕೊಲೆಗಡುಕರಿಗೆ ಮನಃಪರಿವರ್ತನೆಯ ತಾಣವಾಗಿರುವ ಬದಲು ಮೋಜು ಮಸ್ತಿ ಜತೆಗೆ ರೀಲ್ಸ್‌ ಮಾಡುವ ತಾಣವಾಗಿದೆಯೇ ಎಂಬ ಅನುಮಾನ ಮೂಡಿಸುತ್ತಿದೆ. ಹಿಂದಿನ ದಿನಗಳಲ್ಲಿ ಪೊಲೀಸರನ್ನು ಕಂಡರೆ ಭಯ ಪಡುತ್ತಿದ್ದ ಗೂಂಡಾಗಳು ಇದೀಗ ಪೊಲೀಸರ ಎದುರಿಗೆ ಅಂದರೆ ಬಂಧನವಾದಾಗಲೂ ಅವರ ಮುಂದೆ ನಿಂತು ಸಿಗರೇಟ್ ಸೇದುವುದು, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು. ಇಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಸಿದ್ದಾಪುರ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ ಎಂಬ ರೌಡಿಶೀಟರ್ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದನು. ತಾಕತ್ ಇದ್ದರೆ, ನನ್ನನ್ನು ಹಿಡಿಯಿರಿ ಎಂದು ಪೊಲೀಸರಿಗೆ ಅವಾಜ್ ಹಾಕಿ ವಿಡಿಯೋ ಮಾಡಿದ್ದನು. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿ, ಕೆಲ ಪುಂಡು ಪೋಕರಿ ಹುಡುಗರಿಗೆ ಸ್ಟಾರ್ ಆಗಿದ್ದನು. ಇದೀಗ, ಮತ್ತೆ ಅಂತಹದೆ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾನೆ.

ಪೊಲೀಸರ ಎದುರಲ್ಲೆ ಕೈಗೆ ಕೋಳ ಹಾಕಿದ್ದರೂ, ನಾಲ್ಕೈದು ಸಿಗರೇಟ್ ಸೇದಿದ್ದಾನೆ. ಈ ವೇಳೆ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಇದನ್ನು ಕಂಡ ಈತನ ಸಹಚರರು ‘ಹೆಂಗೆ ನಮ್ಮಣ್ಣ’ ಎಂದು ಬಿಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿ ಹೊರ ಕರೆತರುವಾಗಲೂ ಸಹ ರೀಲ್ಸ್ ಮಾಡಿದ್ದಾನೆ. ಪೊಲೀಸರ ಎದುರಲ್ಲೇ ಸಿಗರೇಟ್ ಸೇದಿ ವಿಡಿಯೋ ಮಾಡಿಸಿ ‘ನಾನ್ ಕಸ್ಟಡಿಯಲ್ಲಿದ್ದರೂ ರಾಜನೇ, ಪೊಲೀಸರು ನನಗೇನು ಮಾಡಲಾರರು’ ಎಂಬ ಸಂದೇಶವನ್ನು ರವಾನಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದುರುಳ ತಂದೆಗೆ 20 ವರ್ಷ ಜೈಲು ಶಿಕ್ಷೆ

ಕುಳ್ಳು ರಿಜ್ವಾನ್ ಅತ್ಯಾಪ್ತ ಸಹಚರರಲ್ಲಿ ಒಬ್ಬನಾಗಿದ್ದ ಸ್ಟಾರ್ ರಾಹುಲ್ ಮೇಲೆ ನಗರದ ನಾನಾ ಪೊಲೀಸ್ ಠಾಣೆಗಳಲ್ಲಿ 960ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...