ಬೆಂಗಳೂರು | 1 ಕೆ.ಜಿ 262 ಗ್ರಾಂ ಚಿನ್ನದ ಆಭರಣ ಕದ್ದಿದ್ದ ಸೇಲ್ಸ್‌ ಮ್ಯಾನ್; ಬಂಧನ

Date:

ಚಿನ್ನದ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡು ಸುಮಾರು 1 ಕೆ.ಜಿ 262 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಬೆಂಗಳೂರಿನ ಹಲಸೂರು ಗೇಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿರುವ ಜುವೆಲ್ಲರಿ ಶಾಪ್ ಮಾಲೀಕ ಅಭಿಷೇಕ್ ಎಂಬುವರು ನೀಡಿದ ದೂರಿನ ಮೇರೆಗೆ ಇದೇ ಅಂಗಡಿಯಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಾಜಸ್ತಾನ ಮೂಲದ ಲಾಲ್ ಸಿಂಗ್ ಹಾಗೂ ಈತನಿಗೆ ಸಹಕರಿಸಿದ ಮತ್ತೋರ್ವ ಆರೋಪಿ ರಾಜ್ ಪಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 1.262 ಕೆ.ಜಿ. ಮೌಲ್ಯದ ಚಿನ್ನದೊಡವೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಏಳು ತಿಂಗಳಿಂದ ಅಭಿಷೇಕ್ ಜುವೆಲ್ಲರಿ ಶಾಪ್‌ನಲ್ಲಿ ಸೇಲ್ಸ್ ಮ್ಯಾನ್ ಆಗಿ ಲಾಲ್ ಸಿಂಗ್ ಕೆಲಸ ಮಾಡುತ್ತಿದ್ದನು. ಮಾಲೀಕರ ವಿಶ್ವಾಸಗಳಿಸಿಕೊಂಡಿದ್ದರಿಂದ ಕಳೆದ ತಿಂಗಳು 28ರಂದು ಆತನಿಗೆ ಜುವೆಲ್ಲರಿ ಮಾಲೀಕರು ಆಂಧ್ರದ ನಲ್ಲೂರಿನಲ್ಲಿರುವ ಮುಖೇಶ್ ಹಾಗೂ ಶುಭಂ ಗೋಲ್ಡ್ ಜುವೆಲ್ಲರಿ ಶಾಪ್‌ಗಳ ಮಾಲೀಕರಿಗೆ 1.262 ಕೆ.ಜಿ ಚಿನ್ನಾಭರಣ ಕೊಟ್ಟು ಬರುವಂತೆ ಹೇಳಿದ್ದರು.

ಚಿನ್ನಾಭರಣ ಬ್ಯಾಗ್ ಪಡೆಯುತ್ತಿದ್ದಂತೆ ಆರೋಪಿಯು ದುರಾಸೆಗೆ ಬಿದ್ದು, ಬೆಂಗಳೂರಿನಲ್ಲಿರುವ ಸಹಚರರಿಗೆ ವಿಷಯ ತಿಳಿಸಿ ಚಿನ್ನವನ್ನು ಕದಿಯುವ ಉಪಾಯ ಮಾಡಿದ್ದಾನೆ.

ಉಪಾಯದಂತೆ, ಆತ ನೆಲ್ಲೂರು ತಲುಪಿದ ನಂತರ ತನ್ನ ಮಾಲೀಕರಿಗೆ ಕರೆ ಮಾಡಿ, ನೆಲ್ಲೂರಿನಲ್ಲಿ ಅಪರಿಚಿತರು ತನಗೆ ಗನ್‌ಪಾಯಿಂಟ್ ಇಟ್ಟು, ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನವಿರುವ ಬ್ಯಾಗ್‌ ಅನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾನೆ.

ನಂತರ ಶಾಪ್ ಮಾಲೀಕ ಸೇಲ್ಸ್‌ ಮ್ಯಾನ್‌ನನ್ನು ನೆಲ್ಲೂರಿನಿಂದ ವಾಪಸ್ ಕರೆದುಕೊಂಡು ಬಂದಿದ್ದಾರೆ. ಅಕ್ಟೋಬರ್ 2ರಂದು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿ ತನಿಖೆ ಆರಂಭಿಸಿದ ಇನ್ಸ್‌ಪೆಕ್ಟರ್ ಹನುಮಂತ್ರ ಭಜಂತ್ರಿ, ಚಾಕುವಿನಿಂದ ಕೈಗಳ ಮೇಲೆ ಹಲ್ಲೆ ಮಾಡಿರುವುದಾಗಿ ನೀಡಿದ ಹೇಳಿಕೆಗೂ ಕೈ ಮೇಲೆ ಆಗಿರುವ ಗಾಯಕ್ಕೆ ಸಾಮ್ಯತೆ ಬರದ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಅಪರಾಧ ಕೃತ್ಯದ ಬಗ್ಗೆ ಸತ್ಯ ಬಾಯಿಬಿಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿಯಲ್ಲಿ ಮಾರ್ಷಲ್‌ ನೌಕರಿ ಕೊಡಿಸುವುದಾಗಿ ವಂಚಿಸಿದ್ದ ಆರೋಪಿಯ ಬಂಧನ

ಬಳಿಕ, ಕದ್ದ ಚಿನ್ನಾಭರಣಗಳನ್ನು ರಾಜಸ್ಥಾನಕ್ಕೆ ತನ್ನ ಸಹಚರರ ಮೂಲಕ ಕಳುಹಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸಹಚರ ರಾಜ್ ಆಲಿಯಾಸ್ ರಾಜಪಾಲ್ ವಶಕ್ಕೆ ಪಡೆದು ₹75 ಲಕ್ಷ ಮೌಲ್ಯದ 1.262 ಕೆ.ಜಿ.ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...