ಬೆಂಗಳೂರು | ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು ನೀಡಿದ ಮಹಿಳೆ; ಆಕೆಯ ವಾಹನಗಳಿಗೆ ಬೆಂಕಿ ಹಚ್ಚಿದ ನಾಯಿಯ ಮಾಲೀಕ

Date:

ಸಾಕು ನಾಯಿಯೊಂದು ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಕೋಪಗೊಂಡ ಶ್ವಾನ ಮಾಲೀಕ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪುಷ್ಪ (43) ನಾಯಿಯಿಂದ ದಾಳಿಗೆ ಒಳಗಾದವರು. ನೆರೆಹೊರೆಯವರಾದ ಕೊತ್ತನೂರಿನಲ್ಲಿ ರೆಸ್ಟೋರೆಂಟ್ ನಡೆಸುತ್ತಿರುವ ಎಚ್‌ಎಂಟಿ ರಾಜಣ್ಣ ಅಲಿಯಾಸ್ ನಾಗರಾಜ್, ಅವರ ಪುತ್ರಿ ಗಾಯತ್ರಿ ಕಾವ್ಯ ಹಾಗೂ ಮಗ ಬಾಬು ಮಹಿಳೆಯ ವಾಹನಗಳಿಗೆ ಬೆಂಕಿ ಹಾಕಿದವರು ಎಂದು ಗುರುತಿಸಲಾಗಿದೆ.

ಜೂನ್ 13 ರಂದು ಮನೆಕೆಲಸದಾಕೆ ಪುಷ್ಪ ಅವರು ಕೆಲಸಕ್ಕೆ ಹೋಗುತ್ತಿದ್ದಾಗ ಸಾಕು ನಾಯಿ ಆಕೆಯ ಮೇಲೆ ಹಲವು ಬಾರಿ ದಾಳಿ ನಡೆಸಿದೆ. ಇದನ್ನು ಕಣ್ಣಾರೆ ಕಂಡ ಬಾಬು ಮತ್ತು ಗಾಯತ್ರಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ, ನಡೆದ ಘಟನೆ ಬಗ್ಗೆ ಪೊಲೀಸ್ ದೂರು ನೀಡದಂತೆ ಪುಷ್ಪ ಮತ್ತು ಆಕೆಯ ಮಗನಿಗೆ ಮನವಿ ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಗರಾಜ್ ಮತ್ತು ಅವರ ಪತ್ನಿ ಗೌರಮ್ಮ ಗಾಯಗೊಂಡಿರುವ ಪುಷ್ಪ ಅವರ ವೈದ್ಯಕೀಯ ವೆಚ್ಚವನ್ನು ಭರಿಸುವುದು ಜತೆಗೆ ಅವರು ಕೆಲಸ ಮಾಡಲು ಸಾಧ್ಯವಾಗುವವರೆಗೆ ಹಣವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅವರು ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ. ಒಂದು ತಿಂಗಳು ಕಳೆದರೂ ವೈದ್ಯಕೀಯ ವೆಚ್ಚ ಭರಿಸಲು ಕುಟುಂಬದಿಂದ ಹಣ ಬಂದಿಲ್ಲ” ಎಂದು ಪುಷ್ಪ ಹೇಳಿದ್ದಾರೆ.

“ಹಾಗಾಗಿ, ವೈದ್ಯಕೀಯ ವೆಚ್ಚಕ್ಕೆ ನನ್ನ ಬಳಿ ಯಾವುದೇ ಹಣವಿಲ್ಲದ ಕಾರಣ, ನಾನು ಚಿಟ್ ಫಂಡ್‌ನಿಂದ ಹಣವನ್ನು ಹಿಂತೆಗೆದುಕೊಂಡಿದ್ದೇನೆ. ಅದರಲ್ಲಿ ನಾಗರಾಜ್ ಅವರ ಕುಟುಂಬವೂ ಸೇರಿದೆ. ಚಿಟ್ ಫಂಡ್‌ ಹಣದಿಂದ ಚಿಕಿತ್ಸೆ ಮತ್ತು ಆಸ್ಪತ್ರೆಯ ಬಿಲ್​​ ಪಾವತಿ ಮಾಡಿದ್ದೇನೆ. ಕುಟುಂಬವು ವೈದ್ಯಕೀಯ ವೆಚ್ಚ ಪಾವತಿಸಲು ನಿರಾಕರಿಸಿದ್ದರಿಂದ ಜುಲೈನಲ್ಲಿ ಪೊಲೀಸ್ ದೂರು ದಾಖಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ಈ ಘಟನೆಯ ನಂತರ ಎಚ್‌ಎಂಟಿ ರಾಜಣ್ಣ ಅವರ ಮಗ ಬಾಬು ಅವರು ಸೋಮವಾರ ನನ್ನ ಮನೆ ಬಳಿ ಬಂದು ಚಿಟ್ ಫಂಡ್ ಹಣ ವಾಪಸ್ ಮಾಡುವಂತೆ ಕಿರುಕುಳ ನೀಡಿದ್ದಾರೆ. ಹಣ ಮರುಪಾವತಿ ಮಾಡಲು ಸ್ವಲ್ಪ ಸಮಯಬೇಕು ಎಂದು ಕೇಳಿದ್ದೇನೆ. ಆದರೆ, ಆತ ನನಗೆ ಮತ್ತು ನನ್ನ ಮಗನಿಗೆ ಬೆದರಿಕೆ ಹಾಕಿ, ಕೆಟ್ಟ ಮಾತಿನಿಂದ ನಿಂದಿಸಿದ್ದಾನೆ” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂವಿಧಾನವನ್ನು ಗೌರವಿಸುವುದಾದರೆ ಜಗದೀಶ್‌ ಗುಡಗಂಟಿಯನ್ನು ಪಕ್ಷದಿಂದ ಉಚ್ಚಾಟಿಸಿ: ಬಿಜೆಪಿಗೆ ಎಎಪಿ ಸವಾಲು

“ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಸೈರನ್ ಸದ್ದು ಕೇಳಿ ಎದ್ದೆವು. ಎರಡೂ ವಾಹನಗಳಿಗೆ ಬೆಂಕಿ ಹಚ್ಚಿರುವುದನ್ನು ಕಂಡು ನಾವು ಮೆಲಗಡೆ ಮನೆಯಿಂದ ಕೆಳಗೆ ಓಡಿ ಬಂದೆವು. ನಾವು ಇತರ ನೆರೆಹೊರೆಯವರೊಂದಿಗೆ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದೆವು. ಅಷ್ಟರಲ್ಲಿ ವಾಹನಗಳು ಸುಟ್ಟುಹೋಗಿವೆ” ಎಂದು ಪುಷ್ಪಾ ವಿವರಿಸಿದ್ದಾರೆ.

ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...