ಬೆಂಗಳೂರು | ಪ್ರಿಯತಮೆ ಖಾಸಗಿ ಫೋಟೋ ಹರಿಬಿಟ್ಟು, ಪೊಲೀಸರಿಗೆ ದೂರು ಕೊಟ್ಟಿದ್ದ ದುರುಳನ ಬಂಧನ

Date:

ಪ್ರಿಯತಮೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಅಪ್ಲೋಡ್ ಮಾಡಿ, ಬಳಿಕ ಯುವತಿಯ ಜತೆಗೆ ಪೊಲೀಸ್ ಠಾಣೆಗೆ ದೂರು ನೀಡಿ ಅಮಾಯಕನಂತೆ ನಾಟಕವಾಗಿದ್ದ ವಿಕೃತ ಮನಸ್ಸಿನ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಅಂಜಯ್ (26) ಬಂಧಿತ ಆರೋಪಿ. ಈತ ಮೂಲತಃ ತಮಿಳುನಾಡಿನ ವೆಲ್ಲೂರುನವನು. ಆಗ್ನೇಯ ವಿಭಾಗ ಸೆನ್ ಪೊಲೀಸರು ಈತನನ್ನು ಬಂಧಿಸಿದ್ದಾರೆ.

ಆರೋಪಿ ಅಂಜಯ್ ಮತ್ತು ಯುವತಿ ಇಬ್ಬರು ತಮಿಳುನಾಡಿನ ಒಂದೇ ಊರಿನವರು. 10ನೇ ತರಗತಿಯವರೆಗೂ ಒಂದೇ ತರಗತಿಯಲ್ಲಿ ಕಲಿತಿದ್ದಾರೆ. ಬಳಿಕ ಇಬ್ಬರು ಸೇರಿ ಬಿ.ಪ್ಲಾನಿಂಗ್ ಎಂಬ ಕೋರ್ಸ್‌ ಮುಗಿಸಿ, ನಗರಕ್ಕೆ ಬಂದು ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರು ಇಬ್ಬರು ಒಟ್ಟಿಗೆ ಇರುವ ವಿಚಾರ ಅವರ ಕುಟುಂಬಸ್ಥರಿಗೂ ತಿಳಿದಿತ್ತು. ಹಾಗಾಗಿ, ಇಬ್ಬರು ಮದುವೆ ಮಾಡಿಕೊಳ್ಳಬೇಕು ಎಂದು ಅಂದುಕೊಂಡಿದ್ದರು ಎನ್ನಲಾಗಿದೆ.

2021ರಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಯುವತಿಯ ಖಾಸಗಿ ಫೋಟೋ ಶೇರ್ ಆಗಿತ್ತು. ಆ ಸಮಯದಲ್ಲಿ ರಿಪೋರ್ಟ್‌ ಮಾಡಿ ಯುವತಿಯ ಫೋಟೋವನ್ನು ತೆಗೆಸಲಾಗಿತ್ತು. ಮತ್ತೆ 2023ರಲ್ಲಿ ಯುವತಿಯ ಖಾಸಗಿ ಫೋಟೋ ಶೇರ್ ಆಗಿತ್ತು. ಈ ಬಗ್ಗೆ ಯುವತಿ ಆರೋಪಿ ಅಂಜಯ್‌ಗೆ ತಿಳಿಸಿದ್ದಾಳೆ.

ಆರೋಪಿ ಅಂಜಯ್ ಆಗ್ನೇಯ ಪೊಲೀಸ್‌ ಠಾಣೆಗೆ ಬಂದು ಯುವತಿಯ ಖಾಸಗಿ ಫೋಟೋಗಳನ್ನು ಅಪ್‌ಲೋಡ್‌ ಮಾಡಿದವನನ್ನು ಕಂಡುಹಿಡಿದು ಫೋಟೋ ಡಿಲೀಟ್ ಮಾಡಿಸುವಂತೆ ಪರಿಪರಿಯಾಗಿ ಕೇಳಿಕೊಂಡಿದ್ದನು.

ಪೊಲೀಸ್‌ ತನಿಖೆಯಿಂದ ಬಯಲಾದ ಸತ್ಯ

ಪೊಲೀಸರ ಮುಂದೆ ಆರೋಪಿ ಅಂಜಯ್ ಅಂಗಲಾಚಿದ್ದನು ಕಂಡು ಯುವತಿ ಪ್ರಿಯಕರನಿಗೆ ತನ್ನ ಮೇಲೆ ಎಷ್ಟು ಪ್ರೀತಿ ಇದೆ ಎಂದು ಕಣ್ಣೀರು ಹಾಕಿದ್ದಳು. ಪೊಲೀಸ್ ತನಿಖೆಯ ಬಳಿಕ ಆರೋಪಿ ಅಂಜಯ್ ನಾಟಕ ಬಯಲಾಗಿದೆ.

ಎಫ್ಐಆರ್ ದಾಖಲಿಸಿ ತನಿಖೆಗೆ ಇಳಿದಿದ್ದ ಆಗ್ನೇಯ ವಿಭಾಗ ಸೆನ್ ಪೊಲೀಸರಿಗೆ ವಿಚಾರಣೆ ವೇಳೆ ಆರೋಪಿಯ ವಿಕೃತ ಕಾಮ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಂಜಯ್ ಜತೆಗೆ ಈತನ 12 ಜನ ಸ್ನೇಹಿತರು ಸೇರಿ ಟೆಲಿಗ್ರಾಮ್​ನಲ್ಲಿ d3vil-official ಮತ್ತು discord ಎಂಬ ಹೆಸರಿನ ಗ್ರೂಪ್ ಮಾಡಿಕೊಂಡಿದ್ದರು. ಆ ಗ್ರೂಪ್‌ಗಳಲ್ಲಿ ಯುವತಿಯರ ಖಾಸಗಿ ಫೋಟೋಗಳನ್ನು ಫೋಸ್ಟ್ ಮಾಡಿ, ಆ ಫೋಟೋಗಳಿಗೆ ಬರುವ ಕಮೆಂಟ್‌ಗಳಿಂದ ಸುಖ ಪಡುತ್ತಿದ್ದರೆಂದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ.

ಆ ಟೆಲಿಗ್ರಾಮ್ ಗ್ರೂಪಿನಲ್ಲಿರುವ ಎಲ್ಲರೂ ವಿಕೃತ ಮನಸ್ಸಿನ ವ್ಯಕ್ತಿಗಳು ಆ ಗ್ರೂಪ್​ನಲ್ಲಿ ತಮ್ಮ ತಮ್ಮ ಪ್ರಿಯತಮೆ, ಸ್ನೇಹಿತೆಯರ ನಗ್ನ ಫೋಟೋಗಳನ್ನು ಹಾಕುತ್ತಿದ್ದರು. ಈ ಗ್ರೂಪ್‌ನಲ್ಲಿ ಇದ್ದವರಲ್ಲಿ ನೂರಕ್ಕೂ ಹೆಚ್ಚು ಯುವತಿಯರ ನಗ್ನ ಫೋಟೋಗಳನ್ನು ಶೇರ್ ಮಾಡಿ, ಕೆಟ್ಟದಾಗಿ ಕಮೆಂಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

ಅಲ್ಲದೇ @thediyahouse, @denofd3vil, @houseofd3vil, @heavenbyd3vil2 ಹೆಸರಿನ ಇನ್‌ಸ್ಟಾಗ್ರಾಮ್ ಖಾತೆ ತೆಗೆದು ಅದರಲ್ಲೂ ಕೂಡ ಯುವತಿಯರ ಖಾಸಗಿ ಫೋಟೋಗಳನ್ನು ಅಪ್‌ಲೋಡ್‌ ಮಾಡಿದ್ದಾರೆ.

ಆರೋಪಿ ಅಂಜಯ್ ಫೋಟೋಗಳಿಗೆ ಬರುತ್ತಿದ್ದ ಅಸಹ್ಯ ಕಮೆಂಟ್​ಗಳನ್ನು ಓದಿ ಸುಖಿಸುತ್ತಿದ್ದನು. ಯಾರದ್ದೇ ಫೋಟೋ ಹಾಕಿದ್ದರೂ ಅವರು ಬೆತ್ತಲೆಯಾಗಿ ಕಾಣಿಸುವಂತಹ BOT ಅನ್ನುವ ಅಪ್ಲಿಕೇಶನ್ ಅನ್ನು ಡೆವಲಪ್ ಮಾಡ್ತಿದ್ದನು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...