ಬೆಂಗಳೂರು | ಉದ್ಧಟತನ ತೋರಿದ ಜಿ. ಪಲ್ಲವಿಯವರ ಆಪ್ತ ಕಾರ್ಯದರ್ಶಿ ವರ್ಗ, ನಮ್ಮ ಹೋರಾಟಕ್ಕೆ ಜಯ: ಲೋಹಿತಾಕ್ಷ ಬಿ ಆರ್

Date:

ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರಿಗೆ ಅನಧಿಕೃತವಾಗಿ ನಿಯೋಜನೆಯಾಗಿದ್ದ ಆಪ್ತ ಕಾರ್ಯದರ್ಶಿ ಬಿ ಎಸ್ ಆನಂದಕುಮಾರ್(ಆನಂದ ಏಕಲವ್ಯ) ಉದ್ಧಟತನ ಮೆರೆದಿದ್ದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯವರು ಕೊನೆಗೂ ಅವರ ಮಾತೃ ಇಲಾಖೆಯಾದ ಇಂಧನ ಇಲಾಖೆಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. ಇದು ನಮಗೆ ಸಿಕ್ಕ ಮೊದಲ ಜಯವೆಂದು 49 ನೈಜ ಅಲೆಮಾರಿ ಸಮುದಾಯಗಳ ಒಕ್ಕೂಟದ ನಾಯಕ ಲೋಹಿತಾಕ್ಷ ಬಿ ಆರ್ ತಿಳಿಸಿದರು.

“ಸುಳ್ಳು ಆರೋಪ ಹೊರಿಸಿ ಜಿ ಪಲ್ಲವಿ ಮತ್ತು ಇತರರು ಸಣ್ಣ ಮತ್ತು ಸೂಕ್ಷ್ಮ ಸಮುದಾಯಗಳ ಏಳು ಮಂದಿ ನಾಯಕರ ವಿರುದ್ಧ ಕೇಸು ಹಾಕಿಸಿದರು. ಆ ಆರೋಪ ಸಂಪೂರ್ಣ ಆಧಾರರಹಿತವಾಗಿದ್ದು, ಅವರು ಸೃಷ್ಟಿಸಿದ ಸುಳ್ಳು ಕಥೆಗಳನ್ನೂ ಕೂಡ ಯಾರೂ ನಂಬಲಾಗದಂತಿತ್ತು. ನಮ್ಮ ಅಂತಃಕರಣದ ಮಾಜಿ ಸಚಿವ ಎಚ್ ಆಂಜನೇಯ ನಮ್ಮೊಂದಿಗೆ ಇರದಿದ್ದರೆ ಕಷ್ಟವಾಗುತ್ತಿತ್ತು. ಅವರಿಗೂ ಮತ್ತು ನ್ಯಾಯಕ್ಕಾಗಿ ಹೋರಾಡಿದ ಎಲ್ಲ ಮುಖಂಡರಿಗೂ ಧನ್ಯವಾದಗಳು. ಇಂದು ಆನಂದ ಏಕಲವ್ಯ ಅವರನ್ನು ನಮ್ಮ ನಿಗಮದಿಂದ ತೆಗೆದುಹಾಕುವ ಮೂಲಕ ಮೊದಲ ಜಯವನ್ನು ಸಾಧಿಸಿಕೊಂಡಿದ್ದೇವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಜಿ.ಪಲ್ಲವಿ ಅವರನ್ನೂ ಕೂಡ ನಿಗಮದಿಂದ ತೆಗೆದು ಹಾಕಲು ಮತ್ತು ನಮ್ಮ ಮೇಲೆ ಸುಳ್ಳು ಆರೋಪ ಹೊರಿಸಿದವರಿಗೆ ಕಾನೂನಿನ ಚೌಕಟ್ಟಿನಡಿಯಲ್ಲಿಯೇ ತಕ್ಕ ಉತ್ತರ ಕೊಡಲು ಹೋರಾಟ ಮುಂದುವರೆಯುತ್ತದೆ. ಇದಕ್ಕೆಲ್ಲ ಸಹಕರಿಸಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. 49 ಸಣ್ಣ ಮತ್ತು ಸೂಕ್ಷ್ಮ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಒಳಮೀಸಲಾತಿ ಪಾಲು ಪಡೆಯಲು ನಮ್ಮ ಹೋರಾಟ ಮುಂದುವರೆದಿದೆ. ಸರ್ಕಾರ ಆಸ್ಥೆಯಿಂದ ಕೇಳಿಸಿಕೊಂಡು ಸ್ಪಂದಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರು, ಮಾಜಿ ಸಚಿವರೂ ಆದ ಹೆಚ್ ಆಂಜನೇಯ ನೇತೃತ್ವದಲ್ಲಿ ಜೂನ್ 05ರಂದು ನಡೆದ ಪರಿಶಿಷ್ಟ ಜಾತಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿ ದಕ್ಕಲಿಗ, ಸುಡುಗಾಡು ಸಿದ್ಧ, ಸಿಳ್ಳೇಕ್ಯಾತ, ಮಾಂಗ್ ಗಾರುಡಿಗ, ಹಂದಿಜೋಗಿ, ಬುಡ್ಗಜಂಗಮ, ಗಂಟಿಚೋರ್, ದೊಂಬರು, ಮುಕ್ತಿ, ಚನ್ನದಾಸರ್, ಗೋಸಂಗಿ ಸೇರಿದಂತೆ 49 ಜಾತಿಗಳ ಸಭೆಯನ್ನು ಮಾತ್ರ ಕರೆಯಲಾಗಿತ್ತು. ಆ ಸಭೆಯಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಆನಂದ ಏಕಲವ್ಯ ಸುಡುಗಾಡು ಸಿದ್ದ ಜನಾಂಗದ ಮುಖಂಡ ಲೋಹಿತಾಕ್ಷ ಹಾಗೂ ಇತರೆ ಅಲೆಮಾರಿ ಮುಖಂಡರಿಗೆ ಅವಾಚ್ಯ ಶಬ್ದಗಳಿಂದ(ಅವನ್ಯಾವನೋ ಸೂ…ಮಗಾ) ನಿಂದಿಸಿ, ದುರ್ವರ್ತನೆ ಎಸಗಿ ಅಹಿತಕರ ಘಟನೆಗೆ ಕಾರಣರಾಗಿರುತ್ತಾರೆಂದು ಇಲಾಖೆಗೆ ಆಂಜನೇಯ ದೂರು ನೀಡಿದ್ದರು.

ಅದಕ್ಕೆ ಸ್ಪಂದಿಸಿ‌ದ ಇಲಾಖೆ, ಆನಂದ ಅವರಿಗೆ ಜುಲೈ 09ರಂದು ಸರ್ಕಾರದಿಂದ ನೋಟಿಸ್ ಜಾರಿ ಮಾಡಿತು. ಆ ನೋಟಿಸ್‌ಗೆ ಪ್ರತಿಕ್ರಿಯಿಸಿದ ಆನಂದ ಅವರು, “ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಎಂಬ ಸೌಜನ್ಯವಿಲ್ಲದೆ, ದೌರ್ಜನ್ಯ ಎಸಗಿದ ಸಂದರ್ಭದಲ್ಲಿ ಅಧ್ಯಕ್ಷರ ರಕ್ಷಣೆಗೆ ಮುಂದಾಗಿರುತ್ತೇನೆ. ಹಾಗಾಗಿ ಆ ಅಹಿತಕರ ಘಟನೆಗೆ ನಾನು ಕಾರಣನಾಗಿರುವುದಿಲ್ಲ” ವೆಂದು ಜುಲೈ 14ರಂದು ಸಮಜಾಯಿಷಿ ನೀಡಿದ್ದರು. ಇದೆಲ್ಲವನ್ನೂ ಪರಿಶೀಲಿಸಿದ ಸರ್ಕಾರ ಮೂಲತಃ ಇಂಧನ ಇಲಾಖೆಯ ಬೆವಿಕಂ ಕಾರ್ಯ ಮತ್ತು ಪಾಲನ ಘಟಕದ ಸಹಾಯಕ ಎಂಜಿನಿಯರ್(ವಿ) ಆಗಿದ್ದ ಆನಂದಕುಮಾರ ಸಲ್ಲಿಸಿರುವ ಸಮಜಾಯಿಷಿಯನ್ನು ಒಪ್ಪದೇ ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆಗೊಳಿಸಿ ತನ್ನ ಮಾತೃ ಇಲಾಖೆಗೆ ಮರಳಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕೆಂದು ಸೂಚಿಸಿ ಆದೇಶಿಸಿದೆ.‌

ಇದನ್ನೂ ಓದಿದ್ದೀರಾ? ಹುಲುಸಾಗಿ ಬಂದ ಈರುಳ್ಳಿ ಇಳುವರಿ: ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು

49 ಅಲೆಮಾರಿ ಸಮುದಾಯದ ಮುಖಂಡರು ಒಕ್ಕೊರಲಿನಿಂದ ಪ್ರತಿಕ್ರಿಯಿಸುತ್ತ, “ಜೈ ಅಲೆಮಾರಿ, ಒಗ್ಗಟ್ಟಿನಲ್ಲಿ ಬಲವಿದೆ. ಸತ್ಯಕ್ಕೆ ಸಂದ ಜಯ; ಇದು ನಮ್ಮ ಮೊದಲ ಜಯವಾಗಿದ್ದು, 2ನೇ ಜಯ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿರುವ ನಮ್ಮ ಏಳು ಮುಖಂಡರ ವಿರುದ್ಧ ಸುಳ್ಳು ದೂರನ್ನು ನೀಡಿ ಮಾಜಿ ಸಚಿವ ಹೆಚ್ ಆಂಜನೇಯ ಅವರ ಹೆಸರಿಗೂ ಮಸಿ ಬಳಿಯುವಂತಹ‌ ಆಧಾರರಹಿತ ಆರೋಪ ಮಾಡಿದ್ದನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡು ಅಧ್ಯಕ್ಷೆ ಜಿ ಪಲ್ಲವಿ ಅವರ ರಾಜೀನಾಮೆಯನ್ನೂ ಕೂಡ ಸರ್ಕಾರ ಪಡೆದುಕೊಳ್ಳಲು ಕೂಡಲೇ ಮುಂದಾಗಬೇಕು. ಇಲ್ಲದಿದ್ದರೆ ಈ ಅನ್ಯಾಯದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಲಿದೆ” ಎಂದು ಸರ್ಕಾರಕ್ಕೆ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...