ಬೆಂಗಳೂರು | ವಿಧಾನಸಭಾ ಉಪಚುನಾವಣೆ; ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಸೋಲಿಸಲು ಸಿಪಿಐಎಂ ಕರೆ

Date:

ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ನಿರ್ಣಾಯಕವಾಗಿ ಸೋಲಿಸುವಂತೆ ಸಿಪಿಐಎಂ ಕರೆ ನೀಡಿದೆ.

ಬೆಂಗಳೂರಿನಲ್ಲಿ ಶನಿವಾರದಂದು ಪತ್ರಿಕೆ ಹೇಳಿಕೆ ನೀಡಿರುವ ಅವರು, “ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಮತಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸ್ಥಳೀಯ ಮತದಾರರು ಪ್ರಜಾಪ್ರಭುತ್ವ ವಿರೋಧಿ ಪಕ್ಷಗಳನ್ನು ಹೀನಾಯವಾಗಿ ಸೋಲಿಸಬೇಕು” ಎಂದು ಭಾರತ ಕಮ್ಯುನಿಸ್ಟ್ ಪಕ್ಷದ(ಮಾರ್ಕ್ಸವಾದಿ) ರಾಜ್ಯ ಸಮಿತಿಯು ಕರೆ ನೀಡಿದೆ” ಎಂದು ಪಕ್ಷದ ಕಾರ್ಯದರ್ಶಿ ಯು ಬಸವರಾಜು ತಿಳಿಸಿದ್ದಾರೆ.

“ಈ ಪಕ್ಷಗಳು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ದುಡಿಯುವ ಜನರು ಹಾಗೂ ಎಲ್ಲ ನಾಗರಿಕರನ್ನು ತೀವ್ರ ಸಂಕಷ್ಠಕ್ಕೀಡು ಮಾಡುವ ಲೂಟಿಕೋರ ಕಾರ್ಪೋರೇಟ್ ಸಂಸ್ಥೆಗಳ ಪರವಾದ ಹಣಕಾಸು ನೀತಿಗಳನ್ನು ಅನುಸರಿಸುತ್ತಿವೆ. ಸದರಿ ಲೂಟಿಕೋರರ ಲೂಟಿಗೆ ವಿರುದ್ಧವಾದ ಹೋರಾಟವನ್ನು ಮಟ್ಟ ಹಾಕಲು ಹಾಗೂ ಪ್ರತಿರೋಧದ ಸ್ಥಿತಿ ಹತ್ತಿಕ್ಕಲು ಇವು ಒಂದೆಡೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಮತ್ತು ಜನತೆ ಒಗ್ಗೂಡದಂತೆ ತಡೆಯಲು, ಪರಸ್ಪರರು ಹೊಡೆದಾಡಿಕೊಳ್ಳುವಂತಹ ವಿಭಜನಕಾರಿ ಕೋಮುವಾದಿ ದ್ವೇಷಕ್ಕೆ ನೆರವಾಗುತ್ತಿದ್ದು, ಮೌನ ಬೆಂಬಲ ನೀಡುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಸಂವಿಧಾನ ವಿರೋಧಿಯಾದ ಇಂತಹ ನಡೆಗಳನ್ನು ತಡೆಯುವುದು ತುರ್ತು ಅಗತ್ಯವಾಗಿದೆ. ಹೀಗಾಗಿ, ಇವುಗಳ ಬೆಳವಣಿಗೆಯನ್ನು ತಡೆಯಲು ಇವುಗಳನ್ನು ಸೋಲಿಸುವುದು ಅಗತ್ಯವಾಗಿದೆ. ಇವುಗಳನ್ನು ಸೋಲಿಸಲು ಶಕ್ತವಾದ ಕಾಂಗ್ರೆಸ್ ಪಕ್ಷ ಬಿಟ್ಟರೆ ಅನ್ಯರಿಲ್ಲದ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಈ ಮೂರು ಕ್ಷೇತ್ರಗಳಲ್ಲಿ ಮತ ನೀಡಬೇಕು” ಎಂದು ಸಿಪಿಐಎಂ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ವಿದ್ಯುತ್‌ ಸ್ಪರ್ಷದಿಂದ ಬಾಲಕ ಸಾವು

“ಕಾಂಗ್ರೆಸ್ ಪಕ್ಷವೂ ಕೂಡಾ ಲೂಟಿಕೋರ ಕಾರ್ಪೋರೇಟ್ ಸಂಸ್ಥೆಗಳ ಪರವಾದ, ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿರುವುದು ಅನುಭವವೇದ್ಯವಾಗಿದೆ. ಅದು ಅನುಭವದಿಂದ ಪಾಠ ಕಲಿಯುತ್ತಿಲ್ಲ. ಹೀಗಾಗಿ, ಕಾಂಗ್ರೆಸ್ ಪಕ್ಷದ ಈ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಜನತೆ, ಪ್ರಜಾಪ್ರಭುತ್ವ ಹಾಗೂ ಸೌಹಾರ್ದತೆಯ ರಕ್ಷಣೆಗಾಗಿಯೂ ಜನ ಚಳುವಳಿಯಲ್ಲಿ ತೊಡಗಿ ಬಲಗೊಳಿಸಬೇಕು” ಎಂದು ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...