ಬೆಂಗಳೂರು | ‘ಅವಳ ಹೆಜ್ಜೆ’ ಮಹಿಳಾ ಕನ್ನಡ ಕಿರುಚಿತ್ರೋತ್ಸವ: ಕವಿತಾ ಅವರ ‘ಅನ್ ಹರ್ಡ್ ಎಕೋಸ್’ಗೆ ಪ್ರಶಸ್ತಿ

Date:

ಬೆಂಗಳೂರಿನ ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿದ್ದ ‘ಅವಳ ಹೆಜ್ಜೆ’ ಮಹಿಳಾ ಕನ್ನಡ ಕಿರುಚಿತ್ರೋತ್ಸವದಲ್ಲಿ ನಿರ್ದೇಶಕಿ ಕವಿತಾ ಬಿ ನಾಯಕ್ ಅವರ ‘ಅನ್ ಹರ್ಡ್ ಎಕೋಸ್” ಎಂಬ ಕನ್ನಡ ಕಿರುಚಿತ್ರವು ಪ್ರತಿಷ್ಠಿತ ಪ್ರಶಸ್ತಿಯ ಜೊತೆಗೆ ₹1 ಲಕ್ಷ ನಗದು ಬಹುಮಾನವನ್ನು ಗೆದ್ದಿದೆ.

ಎಂಟು ಆಕರ್ಷಕ ಕಿರುಚಿತ್ರಗಳನ್ನು ಪ್ರದರ್ಶಿಸಿದ ಈ ಉತ್ಸವವು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿತ್ತು. ಎಂಟು ನಿರ್ದೇಶಕಿಯರೊಂದಿಗಿನ ಪ್ರಶ್ನೋತ್ತರದಲ್ಲಿ ಪ್ರೇಕ್ಷಕರು ಉತ್ಸಾಹಭರಿತ, ಚಿಂತನಶೀಲ ಪ್ರಶ್ನೆಗಳನ್ನು ಅವರ ಮುಂದಿಟ್ಟರು.

ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಕವಿತಾ ಬಿ ನಾಯಕ್ ರಂಗಭೂಮಿ ಕಲಾವಿದೆ ಮತ್ತು ನಿರ್ದೇಶಕಿ. ಬದುಕು ಕಮ್ಯೂನಿಟಿ ಕಾಲೇಜಿನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಗಳಲ್ಲಿ ಡಿಪ್ಲೋಮಾ ಪಡೆದು ‘ಹದಿನೇಳೆಂಟು’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ಮಾಧ್ಯಮದ ಮೂಲಕ ಮಹಿಳೆಯರ ಸಮಸ್ಯೆಗಳನ್ನು ಪ್ರೇಕ್ಷಕರಿಗೆ ತಲುಪಿಸಬೇಕೆಂಬ ಅವರ ಬದ್ಧತೆ, “ಅನ್‌ಹರ್ಡ್ ಎಕೋಸ್” ನ ಮೂಲಕ ಮುಂದುವರೆಸಿದ್ದಾರೆ. ಈ ಚಿತ್ರವು ಪ್ರೇಕ್ಷಕರ ಆಯ್ಕೆ ಬಹುಮಾನವನ್ನು ಸಹ ಪಡೆದುಕೊಂಡಿದ್ದು, ಅದರ ಬಲವಾದ ಭಾವನಾತ್ಮಕ ಸಂಪರ್ಕಕ್ಕೆ ಸಾಕ್ಷಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷಮಾ ಅಂಬೆಕಲ್ಲು ಅವರ ಕಿರುಚಿತ್ರ “ಪುಷ್ಪ”, ವಿದ್ಯಾರ್ಥಿನಿ ನಿರ್ದೇಶಕಿ ಎಂಬ ವಿಶೇಷ ವರ್ಗದಲ್ಲಿ ನಗದು ಬಹುಮಾನ ಪಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಕ್ಷಮಾ, ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದಲ್ಲಿ ದೃಶ್ಯ ಸಂವಹನದಲ್ಲಿ ಬಿ.ಎಸ್ಸಿ. ಪದವಿ ಪಡೆಯುತ್ತಿದ್ದಾರೆ.

ಚೊಚ್ಚಲ ನಿರ್ದೇಶನದ ಇತರ ಮೂರು ಕಿರುಚಿತ್ರಗಳು ಸಹ ನಗದು ಬಹುಮಾನಗಳನ್ನು ಪಡೆದಿವೆ: ಮಂದಾರ ಬಟ್ಟಲಹಳ್ಳಿ ನಿರ್ದೇಶನದ ‘ದಿ ಲಾಸ್ಟ್ ಹ್ಯಾಪಿ ಕಸ್ಟಮರ್’ (2024), ಸಿಂಚನಾ ಶೈಲೇಶ್ ನಿರ್ದೇಶನದ ‘ಕೇಕ್‌ವಾಕ್'(2025) ಮತ್ತು ಸತ್ಯ ಪ್ರಮೋದ ಎಂ.ಎಸ್ ನಿರ್ದೇಶನದ ‘ಆನ್‌ಲೈನ್'(2025), ಹಾವೇರಿ ಜಿಲ್ಲೆಯ ರೈತ ಮಹಿಳೆ ರೇಣುಕಾ ಯಲ್ಲಪ್ಪ ಮಲ್ಲಿಗಾರ್ ನಿರ್ಮಿಸಿದ ‘ನೀರೆಲ್ಲವೂ ತೀರ್ಥ'(2025) ಎಂಬ ಕಿರುಚಿತ್ರವನ್ನು ಸ್ಪರ್ಧಾತ್ಮಕವಲ್ಲದ ವಿಭಾಗದಲ್ಲಿ ಪ್ರದರ್ಶಿಸಲಾಯಿತು.

ಚಿತ್ರೋತ್ಸವದ ಪ್ರಮುಖ ಆಕರ್ಷಣೆ, ಪತ್ರಕರ್ತೆ ಸುನಯನ ಸುರೇಶ್ ನಿರ್ವಹಿಸಿದ ಚರ್ಚಾಗೋಷ್ಠಿಯಲ್ಲಿ ‘ಕನ್ನಡ ಸಿನಿಮಾದಲ್ಲಿ ಮಹಿಳಾ ಧ್ವನಿ ‘ಯಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕಿ ರೂಪಾ ರಾವ್ (ಗಂಟು ಮೂಟೆ), ಟೆಂಟ್ ಸಿನೆಮಾ ಶಾಲೆಯ ಸ್ಥಾಪಕ ನಿರ್ದೇಶಕಿ ಶೋಭಾ ಸಿ.ಎಸ್. ಮತ್ತು ಮುಖ್ಯ ಅತಿಥಿ ಡಿ. ಸುಮನಾ ಕಿತ್ತೂರು ಭಾಗವಹಿಸಿದ್ದರು.

makers

ತಮ್ಮ ಜಾತಕಗಳು ಹೊಂದಿಕೆಯಾಗಲಿಲ್ಲ ಎಂಬ ಕಾರಣಕ್ಕೆ ತನ್ನ ಚಿತ್ರಕ್ಕೆ ಹಣಕಾಸು ಒದಗಿಸಲು ನಿರಾಕರಿಸಿದ ನಿರ್ಮಾಪಕರ ಬಗ್ಗೆ ಸುಮನ್ ಕಿತ್ತೂರು ಒಂದು ಸ್ವಾರಸ್ಯಕರ ಅನುಭವವನ್ನು ಹಂಚಿಕೊಂಡರು.

ರೂಪಾ ರಾವ್ ಅವರು ಚಲನಚಿತ್ರೋದ್ಯಮದಲ್ಲಿ ಎದುರಿಸಿದ ಲಿಂಗ ತಾರತಮ್ಯದ ಬಗ್ಗೆ ಮುಕ್ತವಾಗಿ ಮಾತನಾಡಿ, “ನಿರ್ಮಾಪಕರು ಮತ್ತು ವಿತರಕರು ನನ್ನನ್ನು ನೇರವಾಗಿ ಉದ್ದೇಶಿಸಿ ಮಾತನಾಡುವ ಬದಲು ನನ್ನ ಪುರುಷ ಸಹಾಯಕರೊಂದಿಗೆ ಮಾತನಾಡುತ್ತಿದ್ದರು. ಹಲವು ನಿರಾಕರಣೆಗಳು ಮತ್ತು ಆರ್ಥಿಕ ಸಂಕಷ್ಟಗಳ ನಡುವೆಯೂ ‘ಹುಚ್ಚು ಮತ್ತು ಉತ್ಸಾಹ’ ಇದ್ದರೆ ಮಾತ್ರ ಚಲನಚಿತ್ರ ನಿರ್ದೇಶಕರು ಮುಂದುವರೆಯಲು ಸಾಧ್ಯ” ಎಂದರು.

ಇದನ್ನು ಓದಿದ್ದೀರಾ? ಕಾಲ್ತುಳಿತದ ಹಿಂದೆ ಬಿಜೆಪಿ ಷಡ್ಯಂತ್ರ: ನ್ಯಾ.ಜಾನ್ ಮೈಕೆಲ್ ಕುನ್ಹಾ ಆಯೋಗಕ್ಕೆ ಕಾಂಗ್ರೆಸ್‌ ನಿಯೋಗದಿಂದ ದೂರು

‘ಇದು ಕೇವಲ ಕಿರುಚಿತ್ರ ಪ್ರದರ್ಶನವಲ್ಲ . ಮಹಿಳೆಯರ ಅನುಭವ, ದೃಷ್ಟಿಕೋನಗಳಿಗೆ ವೇದಿಕೆ ನೀಡುವ, ಲಿಂಗ ಸಮಾನತೆಯ ಚಿಂತನೆಗೆ ಉತ್ತೇಜನ ನೀಡುವ ಒಂದು ಚಳುವಳಿ’ ಎಂದು ಗುಬ್ಬಿವಾಣಿಯ ಸ್ಥಾಪಕ ಟ್ರಸ್ಟಿ ಮಾಲವಿಕಾ ತಿಳಿಸಿದರು.

‘ಈ ಉತ್ಸವದ ಮೊದಲ ಆವೃತ್ತಿಯ ಯಶಸ್ಸಿನಿಂದ ನಮಗೆ ತುಂಬಾ ಪ್ರೋತ್ಸಾಹ ಸಿಕ್ಕಿದೆ. ಮುಂದಿನ ವರ್ಷದಲ್ಲಿ ಕರ್ನಾಟಕದಾದ್ಯಂತ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ಚಿತ್ರೋತ್ಸವದ ನಿರ್ದೇಶಕಿ ಶಾಂತಲಾ ದಾಮ್ಲೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...