ಬೆಂಗಳೂರು | ಮೆಟ್ರೋ ರೈಲಿನಲ್ಲಿ ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿದ ಬಿಎಂಆರ್‌ಸಿಎಲ್‌

Date:

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕಳೆದ ಕೆಲವು ದಿನಗಳಿಂದ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ ವಿದೇಶಿ ಯುಟ್ಯೂಬರ್‌ವೊಬ್ಬರು ನಮ್ಮ ಮೆಟ್ರೋ ರೈಲಿನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುವುದು ಹೇಗೆ? ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಘಟನೆ ನಂತರ ಓರ್ವ ವ್ಯಕ್ತಿ ರೈಲಿನಲ್ಲಿ ಕುಳಿತು ಗೋಬಿ ಮಂಚೂರಿ ತಿನ್ನುತ್ತಿದ್ದು ಸುದ್ದಿ ಆಗಿತ್ತು. ಇದೀಗ ಮೆಟ್ರೋ ರೈಲಿನ ಹ್ಯಾಂಡಲ್ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಯೋರ್ವನಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ದಂಡ ವಿಧಿಸಿದೆ.

ನಮ್ಮ ಮೆಟ್ರೋದಲ್ಲಿ ನಿತ್ಯ 7 ಲಕ್ಷ ಜನ ಪ್ರಯಾಣಿಸುತ್ತಾರೆ. ನಮ್ಮ ಮೆಟ್ರೋ ಸ್ವಚ್ಛತೆಗೆ ಸಾಕ್ಷಿಯಾಗಿದ್ದು, ಅದನ್ನು ಕಾಪಾಡಿಕೊಳ್ಳಲು ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಕೆಲವು ನಿಯಮಗಳನ್ನು ರೂಪಿಸಿದೆ. ನಿಯಮಗಳನ್ನು ಉಲ್ಲಂಘನೆ ಮಾಡಿ ಉದ್ಧಟತನ ತೋರುವ ಜನರಿಗೆ ದಂಡ ಕೂಡ ವಿಧಿಸುತ್ತಿದೆ.

ಇದೀಗ ರೈಲಿನ ಹ್ಯಾಂಡಲ್‌ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ₹500 ದಂಡ ವಿಧಿಸಿ ಜತೆಗೆ ಮುಂದೆ ಈ ರೀತಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೈಗೆ ಕೋಳ ಹಾಕಿದ್ದರೂ ಪೊಲೀಸರ ಮುಂದೆ ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿಶೀಟರ್

ಏನಿದು ಘಟನೆ?

ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಸೇರಿ ಕಳೆದ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ದಾಸರಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿ ಯಲಚೇನಹಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಜೆಪಿ ನಗರ ಮೆಟ್ರೋ ನಿಲ್ದಾಣ ದಾಟಿದ ಬಳಿಕ ಮೂವರ ಪೈಕಿ ಓರ್ವ ವಿದ್ಯಾರ್ಥಿ, ರೈಲಿನಲ್ಲಿ ನಿಂತ ಪ್ರಯಾಣಿಕರು ಹಿಡಿದುಕೊಳ್ಳುವ ಹ್ಯಾಂಡಲ್‌ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ್ದಾನೆ.

ಈ ವೇಳೆ, ಆತನ ಉಳಿದ ಸ್ನೇಹಿತರು ವಿಡಿಯೋ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಹುಚ್ಚಾಟ ಪ್ರಯಾಣಿಕರಿಗೆ ಕಿರಿಕಿರಿ ಮತ್ತು ಕೋಪ ತರಿಸಿದೆ. ಪ್ರಯಾಣಿಕರು ವಿಡಿಯೋ ಮಾಡಿ ಬಿಎಂಆರ್‌ಸಿಎಲ್‌ ಸಿಬ್ಬಂದಿಗೆ ರವಾನೆ ಮಾಡಿದ್ದಾರೆ.

ಸಿಬ್ಬಂದಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿ ಮೆಟ್ರೋಯಿಂದ ಹೊರ ಹೋಗುವ ವೇಳೆ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...