ಬೆಂಗಳೂರು | ಶರಣ ನುಲಿಯ ಚಂದಯ್ಯನವರ ಜಯಂತಿ ಆಚರಿಸಲು ಕರೆ: ಎಂ.ವೆಂಕಟೇಶ್

Date:

ದಾಸೋಹ ಜ್ಞಾನಿ ಶ್ರೀ ಶರಣ ನುಲಿಯ ಚಂದಯ್ಯನವರ 915ನೇ ಜಯಂತಿಯನ್ನು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡುವಂತೆ ಶರಣ ನುಲಿಯ ಚಂದಯ್ಯ ಜಯಂತಿ ಆಚರಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟೇಶ್ ಕರೆ ನೀಡಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನುಲಿಯನ್ನು ನೂಲುವ ವೃತ್ತಿಯನ್ನು ಮಾಡುತ್ತಿದ್ದ ವಚನಕಾರ ಚಂದಯ್ಯನನ್ನು ರಾಜ್ಯದಲ್ಲಿ ನೆಲೆಸಿದ ಕುಳುವ ಸಮುದಾಯ ತನ್ನ ಮೂಲಪುರುಷನೆಂದು ಗುರುತಿಸಿಕೊಂಡಿದೆ. ಚಂದಯ್ಯನು ಕಲ್ಯಾಣದಲ್ಲಿ ಮೆದೆಹುಲ್ಲಿನಿಂದ ಮಾಡಿದ ನುಲಿಯನ್ನು ಹೊಸೆದು ಹಗ್ಗ ಕಣ್ಣಿ ಮಾಡಿ ಮಾರಿ ಬದುಕುವ ಕಾಯಕ ಜೀವಿಯಾಗಿದ್ದ ಎಂದರು.

ಚಂದಯ್ಯ ಬಸವಣ್ಣರ ಸಮಕಾಲೀನರು. ಚಂದಯ್ಯ ಕಟ್ಟಿಕೊಂಡಿದ್ದ ಲಿಂಗವು ಆತ ಒಮ್ಮೆ ಹುಲ್ಲು ಕೊಯ್ಯುವಾಗ ನೀರಲ್ಲಿ ಬೀಳುತ್ತದೆ. ಆದರೂ ಅವನು ಅದನ್ನು ಎತ್ತಿಕೊಳ್ಳದೆ ಹುಲ್ಲಿನ ಹೊರೆ ಹೊತ್ತು ನಡೆದುಬಿಡುತ್ತಾನೆ. ಕಾಯಕದಲ್ಲಿ ದೇವರನ್ನು ಕಾಣುವ ಚಂದಯ್ಯನಿಗೆ ತಾನು ಕಟ್ಟಿಕೊಂಡಿದ್ದ ಲಿಂಗ ಸಂಕೇತವಷ್ಟೆ. ಯುದ್ಧಕ್ಕೆ ಹೊರಟ ಸೈನಿಕ ಮನೆಯ ಹಂಗು ತೊರೆದಂತೆ, ದೇವರ ಮೇಲೆ ಭಕ್ತಿ ಇಟ್ಟವ ವ್ಯಕ್ತಿಗತ ಸುಖ, ಸಂಪತ್ತನ್ನು ತೊರೆಯಬೇಕು. ಹೀಗೆ ತೊರೆಯದವರನ್ನು ‘ಚಂದೇಶ್ವರ’ ಮೆಚ್ಚಲಾರ ಎಂದು ಚಂದಯ್ಯ ವಚನ ಕಟ್ಟಿದ್ದಾನೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಯಕದಿಂದ ಬಂದುದು ಮಾತ್ರ ಲಿಂಗ ಜಂಗಮಕ್ಕೆ ಅರ್ಪಿತವಾಗಬೇಕು. ಈ ಕಾಯಕ ಗುರು, ಲಿಂಗ ಜಂಗಮರೆಲ್ಲರಿಗೂ ಕಡ್ಡಾಯವೆಂದು ಸಾರಿದ್ದಾರೆ. ಕಾಯಕ, ದಾಸೋಹ ಮತ್ತು ಸತ್ಯನಿಷ್ಠೆಯ ಮೂಲಕ ವಿಶ್ವ ಮಾನವ ಕೋಟಿಗೆ ಅರಿವಿನ ಬೆಳಕನ್ನು ನೀಡಿದ ಶರಣರ ಪೈಕಿ ನುಲಿಯ ಚಂದಯ್ಯನವರು ಪ್ರಮುಖರಾಗಿದ್ದಾರೆ. ಆದುದರಿಂದ ಸೆಪ್ಟಂಬರ್ 16ರಂದು ರಾಜ್ಯದ ಕುಳುವ, ಕೊರಮ ಹಾಗೂ ಕೊರಚ ಸಮುದಾಯದವರು ನುಲಿಯ ಚಂದಯ್ಯನ ಜನ್ಮದಿನಾಚರಣೆಯನ್ನು ಎಲ್ಲ ಜಿಲ್ಲೆಗಳಲ್ಲಿ ಅರ್ಥಪೂರ್ಣವಾಗಿ ಆಚರಿಸಿ, ಸಮಾಜಕ್ಕೆ ಅವರ ಸಂದೇಶಗಳನ್ನು ಸಾರಬೇಕು ಎಂದು ವೆಂಕಟೇಶ್ ಕರೆ ನೀಡಿದರು.

ಇದನ್ನು ಓದಿದ್ದೀರಾ? ‘ಮನೆ-ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವರಿಂದ ಚಾಲನೆ: ಏನಿದು ಯೋಜನೆ?

ಸುದ್ದಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ, ಮಾಜಿ ಶಾಸಕ ಜಿ.ಚಂದ್ರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...