ಬೆಂಗಳೂರು | ಕಾರು ತೊಳೆಯಲು ಕಾವೇರಿ ನೀರು ಬಳಕೆ; ಮೂವರಿಗೆ ತಲಾ ₹5,000 ದಂಡ

Date:

ಕಾರನ್ನು ತೊಳೆಯಲು ಕಾವೇರಿ ನೀರನ್ನು ಬಳಸಿದ ಮೂವರಿಗೆ ಜಲಮಂಡಳಿಯ ಅಧಿಕಾರಿಗಳು ತಲಾ ₹5,000 ದಂಡ ವಿಧಿಸಿರುವ ಸಂಗರಿ ಬೆಳಕಿಗೆ ಬಂದಿದೆ.

ಸದಾಶಿವನಗರದಲ್ಲಿ ಕಾವೇರಿ ನೀರಿನಿಂದ ಕಾರನ್ನು ತೊಳೆಯುತ್ತಿದ್ದ ಮಹಿಳೆಯೊಬ್ಬರಿಗೆ ₹5,000 ದಂಡ ವಿಧಿಸಿರುವ ಜಲಮಂಡಳಿ ಸ್ಥಳದಲ್ಲೇ ದಂಡವನ್ನು ಕಟ್ಟಿಸಿಕೊಂಡಿದೆ. ಇದೇ ರೀತಿ ಮಹದೇವಪುರ ಮತ್ತು ಡಾಲರ್ಸ್ ಕಾಲೋನಿಯಲ್ಲೂ ಇಬ್ಬರಿಗೆ ದಂಡ ವಿಧಿಸಿರುವುದಾಗಿ ಜಲಮಂಡಳಿ ತಿಳಿಸಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನೀರಿಲ್ಲದೆ ಪರಿತಪಿಸುತ್ತಿರುವಾಗ ವಾಹನಗಳನ್ನು ತೊಳೆಯಲು ಕಾವೇರಿ ನೀರು ಬಳಸಿ ವ್ಯರ್ಥ ಮಾಡಬೇಡಿ ಎಂದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪರಿಪರಿಯಾಗಿ ಬೇಡಿಕೊಂಡಿತ್ತು. ಜತೆಗೆ ನೀರನ್ನು ಪೋಲು ಮಾಡಿದರೆ ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಿತ್ತು. ಆದರೆ ನೀರಿನ ಮಹತ್ವವನ್ನು ಅರಿಯದವರು ತಮ್ಮ ವಾಹನಗಳನ್ನು ಸ್ವಚ್ಚಗೊಳಿಸಲು ಕಾವೇರಿ ನೀರನ್ನು ಬಳಸುತ್ತಿರುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಲೇ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು; ತ್ವರಿತವಾಗಿ ಕಾಮಗಾರಿ ಮುಗಿಸಿದ ಜಲಮಂಡಳಿ

ನೀರಿನ ಸದ್ಬಳಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದೆ. ಜಲಮಂಡಳಿ ನೀರನ್ನು ಕಾರು ತೊಳೆಯುವುದು, ಕೈತೋಟ, ಮನರಂಜನೆಗಾಗಿ, ಕಾರಂಜಿ ನಿರ್ಮಾಣ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಸಿನಿಮಾ ಹಾಗೂ ಮಾಲ್‌ಗಳಲ್ಲಿ ಕುಡಿಯುವ ನೀರಿನ ಹೊರತುಪಡಿಸಿ ಇನ್ನಿತರ ಬಳಕೆಗೆ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಒಂದು ವೇಳೆ ಯಾರಾದರೂ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಕಂಡರೆ 1916 ನಂಬರಿಗೆ ಕರೆ ಮಾಡುವಂತೆಯೂ ಜಲ ಮಂಡಳಿ ಕೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...