ಬೆಂಗಳೂರು | ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ: 14 ಜನರ ಬಂಧನ

Date:

ಕಳೆದ ಒಂದು ತಿಂಗಳಿನಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು ರಾಜಧಾನಿ ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ 14 ಆರೋಪಿಗಳನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಅ.31 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ನೀಡಿದರು.

ಬಂಧಿತರಿಂದ 4 ದ್ವಿಚಕ್ರ ವಾಹನ, 1 ಕಾರು, 40 ಮೊಬೈಲ್ ಫೋನ್‌ಗಳು, 2 ಲ್ಯಾಪ್‌ಟಾಪ್‌ಗಳು, 3 ವಿವಿಧ ಕಂಪನಿಯ ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾದೇಶ ಮೂಲದ ನಾಲ್ವರು, ಪಶ್ಚಿಮ ಬಂಗಾಳದ ಹನ್ನೊಂದು, ಕರ್ನಾಟಕದ ಮೂವರು, ತೆಲಂಗಾಣ ಹಾಗೂ ಉತ್ತರಾಖಂಡ್ ಮೂಲದ ತಲಾ ಓರ್ವ ಮಹಿಳೆಯರು ಸೇರಿದಂತೆ ಈ ಕಾರ್ಯಾಚರಣೆಯ ಸಮಯದಲ್ಲಿ ನೊಂದ 20 ಮಹಿಳೆಯರನ್ನು ರಕ್ಷಿಸಲಾಗಿದೆ.

“ಬಾಗಲಗುಂಟೆ, ವರ್ತೂರು, ಕೆ.ಆರ್.ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಸತತ ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

“ಬಯೋಮೆಟ್ರಿಕ್ ಸ್ಕ್ಯಾನ್ ಬಳಸಿ ಗ್ರಾಹಕರ ಗಮನಕ್ಕೆ ಬಾರದೆ ವಂಚಕರು ಖಾತೆಯಲ್ಲಿದ್ದ ಹಣವನ್ನು ಕದಿಯುತ್ತಿದ್ದರು. ಸದ್ಯ ವಂಚಕರನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಸಲಕರಣೆ ಜಪ್ತಿ ಮಾಡಲಾಗಿದೆ” ಎಂದು ಪೊಲೀಸ್ ಕಮಿಷನರ್​​ ದಯಾನಂದ್ ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಾರ್ಟ್‌ಮೆಂಟ್‌ನಲ್ಲಿ ಅಡಗಿರುವ ಚಿರತೆ ಸೆರೆಹಿಡಿಯಲು ಬೋನ್ ಇಟ್ಟ ಅರಣ್ಯ ಇಲಾಖೆ ಅಧಿಕಾರಿಗಳು

“ಆಧಾರ್​​​, ಬಯೋಮೆಟ್ರಿಕ್ ಆಧಾರದಲ್ಲಿ ಹಣ ಡ್ರಾ ಮಾಡಬಹುದು. ಇದೇ ತಂತ್ರಜ್ಞಾನವನ್ನ ಬಳಸಿ ಖಾತೆಗಳಲ್ಲಿ ಹಣ ದೋಚುತ್ತಿದ್ದ ತಂಡ ಪತ್ತೆಯಾಗಿದೆ. ವಂಚಕರು ಸರ್ಕಾರದ ಈ ತಂತ್ರಜ್ಞಾನ ಕದ್ದು ಅಚ್ಚು ತಯಾರಿಸಿದ್ದರು. ಮೈಕ್ರೋ ಎಟಿಎಂ ಮೂಲಕ ಅಕ್ರಮವಾಗಿ ಹಣ ಡ್ರಾ ಮಾಡಿದ್ದರು” ಎಂದು ಹೇಳಿದ್ದಾರೆ.

“ಕಾವೇರಿ ವೆಬ್​​​​ಸೈಟ್ ಮೂಲಕ ಎಇಪಿಎಸ್ ಸಾಧನ ಬಳಸಿ ವಂಚನೆ ಮಾಡುತ್ತಿದ್ದರು. ಸದ್ಯ ವಂಚಕರನ್ನು ಬಂಧಿಸಿ, ಅವರಿಂದ ಕೃತ್ಯಕ್ಕೆ ಬಳಸಿದ್ದ ಸಲಕರಣೆ ಜಪ್ತಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...