ಬೆಂಗಳೂರು | 214ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Date:

  • ಇಂದಿನಿಂದ ಆ.15 ರವರೆಗೆ ಲಾಲ್‌ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ
  • ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಪ್ರತಿಮೆ ಈ ಬಾರಿಯ ವಿಶೇಷ

76ನೇ ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಲಾಲ್‌ಬಾಗ್​ನಲ್ಲಿ ಆಯೋಜಿಸಲಾಗಿರುವ 214ನೇ ಫಲಪುಷ್ಪ ಪ್ರದರ್ಶನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಲಾಲ್‌ಬಾಗ್ ವಿಶ್ವದಲ್ಲೇ ಪ್ರಸಿದ್ಧವಾದಂತಹ ಒಂದು ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣ ಇರುವ ಉದ್ಯಾನವನ. ಎಲ್ಲ ರೀತಿಯ ಮರಗಿಡಗಳನ್ನು ಹೊಂದಿದೆ. ಬ್ರಿಟೀಷರ ಕಾಲದಿಂದಲೇ ಇದ್ದ ಐತಿಹಾಸಿಕ ಉದ್ಯಾನವನ. 140 ಎಕರೆ ಇದ್ದ ಪ್ರದೇಶವನ್ನು ಕೆಂಗಲ್ ಹನುಮಂತಯ್ಯನವರ ಕಾಲದಲ್ಲಿ 240 ಎಕರೆಯಾಗಿ ಮೇಲ್ದರ್ಜೆಗೇರಿಸಿ, ಅಭಿವೃದ್ಧಿಪಡಿಸಲಾಗಿದೆ. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಈ ಬಾರಿಯ ವಿಶೇಷ ಆಕರ್ಷಣೆ’ ಎಂದರು.

ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದು ರೇಣು, ಗೋವಿಂದರಾಜು, ಪರಿಷತ್ ಸದಸ್ಯ ಶರವಣ ಮತ್ತಿತರರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 15ರವರೆಗೆ ಪ್ರದರ್ಶನ

ಇಂದು ಉದ್ಘಾಟನೆಯಾಗಿರುವ ಫಲಪುಷ್ಪ ಪ್ರದರ್ಶನವು ಆ.15 ರವರೆಗೆ ನಡೆಯಲಿದೆ. ತೋಟಗಾರಿಕಾ ಇಲಾಖೆಯಿಂದ ಆಯೋಜನೆಯಾಗಿರುವ ಹನ್ನೆರಡು ದಿನಗಳ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಸುಮಾರು ಎಂಟರಿಂದ ಹತ್ತು ಲಕ್ಷ ಜನರ ಆಗಮನದ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ.

ವಿಶೇಷ ಆಕರ್ಷಣೆಯಾಗಿರಲಿದೆ ಕೆಂಗಲ್ ಹನುಮಂತಯ್ಯ ಪ್ರತಿಮೆ

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥವಾಗಿ ಈ ಬಾರಿಯ ಪ್ರದರ್ಶನವನ್ನು ಅರ್ಪಿಸಲಾಗಿದೆ. ಈ ಪ್ರದರ್ಶನ 214ನೇಯದ್ದಾಗಿದ್ದು ಕೆಂಗಲ್ ಹನುಮಂತಯ್ಯ ಅವರ ಹಿರಿಮೆ ಮತ್ತು ನಾಡಿಗೆ ಅವರು ನೀಡಿದ ಕೊಡುಗೆಗಳನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ.

ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪ್ರದರ್ಶನ ನಡೆಸಲಾಗುತ್ತಿದೆ. 4 ಅಡಿ ಎತ್ತರದ ಪೀಠದ ಮೇಲೆ 14 ಅಡಿ ಎತ್ತರದ ಬೃಹತ್ ಹೂವಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ವಿಶೇಷ ಆಕರ್ಷಣೆಯಾಗಿದೆ.

ಇನ್ನುಳಿದಂತೆ, ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಅವರು ನಿರ್ಮಿಸಿದ ವಿಧಾನಸೌಧದ ಮತ್ತು ಶಿವಪುರ ಸತ್ಯಾಗ್ರಹಸೌಧದ ಪುಷ್ಪ ಮಾದರಿ ಜನರನ್ನು ಆಕರ್ಷಿಸಲಿವೆ. ರೈಲ್ವೆ ಸಚಿವರಾಗಿ ಕೆಂಗಲ್ ಹನುಮಂತಯ್ಯ ಅವರ ಕೊಡುಗೆಗಳನ್ನು ನೆನಪಿಸುವ ಸಲುವಾಗಿ ವರ್ಟಿಕಲ್ ಗಾರ್ಡನ್ ಪರಿಕಲ್ಪನೆಯಲ್ಲಿ ಪುಷ್ಪಗಳಿಂದ ಸಜ್ಜಾದ ರೈಲು ಕೂಡ ಮುಖ್ಯ ಆಕರ್ಷಣೆಗಳಲ್ಲಿ ಒಂದಾಗಿದೆ.

ಲಕ್ಷಾಂತರ ಎಕ್ಕೋಟಿಕ್ ಆರ್ಕಿಡ್ ಬರ್ಡ್ ಆಫ್ ಪ್ಯಾರಡೈಸ್, ಬೋಮಿಲಿಯಾದ್ ಅಂದೂರಿಯಂ, ಹತ್ತಾರು ಬಗೆಯ ವಾರ್ಷಿಕ ಹೂಗಳು ವಿವಿಧ ಪೊಲೀಸ್ ಜಾತಿಯ ಗಿಡಗಳನ್ನು ಬಳಸಿ ಅಮೆರಿಕನ್ ಹೈಬ್ರಿಡ್ ಸೀಡ್ ಕಂಪನಿ ಕಿಂಗಲ್ ಹನುಮಂತಯ್ಯ ಪ್ರತಿಮೆ ವಿನ್ಯಾಸ ಮಾಡಲಾಗಿದೆ.

18 ಅಡಿ ಎತ್ತರದ ವಿಧಾನಸೌಧದ ಪುಷ್ಪ ಮಾದರಿಯನ್ನು ಕಬ್ಬಿಣ ಮೆಷ್ ಮೊದಲಾದ ವಸ್ತುಗಳನ್ನು ಬಳಸಿ ಕೆಂಪು, ಪೀಚ್, ಹಳದಿ, ರಗ್ಸ್ ಆರೇಂಜ್ ಮತ್ತು ಶ್ವೇತ ವರ್ಣದ ಡಚ್ ಗುಲಾಬಿ ಹೂಗಳು, ಪಿಂಚ್ ಕೆಂಪು ಗುಲಾಬಿ, ಶ್ವೇತ ವರ್ಣದ ಸೇವಂತಿಗೆ ಹೂಗಳನ್ನು ಬಳಸಿ ನಿರ್ಮಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...