ಬೆಂಗಳೂರು | ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಸಿಎಂ ಭೇಟಿ; 27 ಅಂಶಗಳ ಕಾರ್ಯಸೂಚಿ ಹಸ್ತಾಂತರ

Date:

ರಾಜ್ಯದಲ್ಲಿ ಕೋಮು ಸಾಮರಸ್ಯ ಪರಿಣಾಮಕಾರಿಯಾಗಿ ಸ್ಥಾಪನೆಯಾಗಲು ಸರ್ಕಾರ ಅನುಸರಿಸಬೇಕಾದ 27 ಅಂಶಗಳ ಕಾರ್ಯಸೂಚಿಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಿ ಅನುಷ್ಠಾನಿಸುವ ಮಾರ್ಗವನ್ನು ಮನವರಿಕೆ ಮಾಡಿಸಿತು.

ಸಮುದಾಯಗಳ ನಡುವೆ ಸಮಸ್ಯೆ ಏರ್ಪಡಿಸುವುದೇ ನಿಜವಾದ ದೇಶದ್ರೋಹ. ಇಂತಹ ದೇಶದ್ರೋಹದ ಕೃತ್ಯದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಭಾಗಿಯಾಗುವವರ ಕುರಿತು ಸರ್ಕಾರ ಶೂನ್ಯ ಸಹನೆಯನ್ನು ಹೊಂದಬೇಕು. ಸಮುದಾಯಗಳ ನಡುವೆ ರಾಜಕೀಯ ಸಾಮಾಜಿಕ ಧಾರ್ಮಿಕ ಕಾರಣಗಳನ್ನು ಮುಂದೊಡ್ಡಿಕೊಂಡು ಗಲಭೆ ಸೃಷ್ಟಿಸುವವರನ್ನು ಜಾತಿ ಧರ್ಮ ಭಾಷೆಗಳ ತಾರತಮ್ಯ ಮಾಡದೆ ಕಠಿಣವಾಗಿ ಶಿಕ್ಷಿಸುವ ನೀತಿಗಳನ್ನು ರೂಪಿಸಬೇಕೆಂದು ವೇದಿಕೆ ಆಗ್ರಹಿಸಿತು.

ನಿತ್ಯ ನಿರಂತರ ಸೌಹಾರ್ದ ಸಮಾಜಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡುತ್ತಿರುವ ವೇದಿಕೆಯ ಕಾರ್ಯಕ್ರಮಗಳ ವಿವರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಕಾರ್ಯಸೂಚಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ತಾಯಿ ಪ್ರೀತಿಗೆ ಅಗ್ನಿಪರೀಕ್ಷೆ ತಂದೊಡ್ಡುವ ʼಸುಣ್ಣದ ಸುತ್ತುʼ; ಇದೇ ಮಾ.06ಕ್ಕೆ ಪ್ರದರ್ಶನ

ವೇದಿಕೆ ನಿಯೋಗದಲ್ಲಿ ಗೌರವಾಧ್ಯಕ್ಷ ಕೋಟ ಇಬ್ರಾಹಿಂ ಸಾಹೇಬ್, ಅಧ್ಯಕ್ಷ ಸುಹೇಲ್ ಅಹಮದ್ ಮರೂರ್, ಕಾರ್ಯದರ್ಶಿ ಡಾ. ಹಕೀಮ್ ತೀರ್ಥಹಳ್ಳಿ, ವಕ್ತಾರ ಮುಷ್ತಾಕ್ ಹೆನ್ನಾಬೈಲ್, ಮಾಜಿ ಅಧ್ಯಕ್ಷ ಅನೀಸ್ ಪಾಶ ದಾವಣಗೆರೆ, ಮುಝಫ್ಫರ್ ಹುಸೇನ್ ಪಿರಿಯಾಪಟ್ಟ ಜಾಕಿರ್ ಹುಸೇನ್ ಮಂಗಳೂರು, ಅಬ್ದುಲ್ ರೆಹಮಾನ್ ಬಿದರಕುಂದಿ, ಡಾ. ಶಫಿ ಮುಲ್ಲಾ ವಿಜಯಪುರ, ಚಮನ್ ಶರೀಫ್ ಹಿರಿಯೂರು, ರಫೀಕ್ ನಾಗೂರ್, ನಜೀರ್ ಬೆಳುವಾಯಿ, ಎಸ್ ಕೆ ಇಬ್ರಾಹಿಂ, ಮುಹಮ್ಮದ್ ರಿಯಾಜ್ ಕಾರ್ಕಳ, ರಫೀಕ್ ಅಹಮದ್ ಹುಲಿಯಾಳ, ದಸ್ತಗೀರ್ ಕಲಹಳ್ಳಿ ತುಮಕೂರು, ರೆಹ್ಮತ್ ದಾವಣಗೆರೆ, ಸಯ್ಯದ್ ಘನಿ ಖಾನ್ ಮಂಡ್ಯ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...