ಬೆಂಗಳೂರು | ಸಹಜೀವನ ನಡೆಸುತ್ತಿದ್ದ ಪ್ರೇಮಿಗಳು ಆತ್ಮಹತ್ಯೆ

Date:

ಪ್ರಿಯತಮನ ಜತೆಗೆ ಸಹಜೀವನ ನಡೆಸುತ್ತಿದ್ದ ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಎಂಬುವವರು ಫ್ಲ್ಯಾಟ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊತ್ತನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಸೌಮಿನಿ ದಾಸ್ ಹಾಗೂ ಕೇರಳದ ಅಬಿಲ್ ಮೃತಪಟ್ಟವರು. ಸೌಮಿನಿ ದಾಸ್ ಈಗಾಗಲೇ ವಿವಾಹವಾಗಿದ್ದು, ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೃತ ಅಬಿಲ್ ನಗರದಲ್ಲಿ ಹೋಂ-ನರ್ಸಿಂಗ್ ಕೆಲಸ ಮಾಡುತ್ತಿದ್ದರು.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ, ಸೌಮಿನಿ ವಿವಾಹವಾಗಿದ್ದರು. ಬೆಂಗಳೂರಿಗೆ ನರ್ಸಿಂಗ್ ವಿಸ್ಯಾಭ್ಯಾಸ ಮಾಡಲು ಬಂದಿದ್ದರು. ನರ್ಸಿಂಗ್ ವಿದ್ಯಾಭ್ಯಾಸ ಮುಗಿಸಿದ್ದ ಅಬಿಲ್ ನಗರದಲ್ಲಿ  ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ, ಅಬಿಲ್ ಮತ್ತು ಸೌಮಿನಿ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಈ ಪರಿಚಯ ಪ್ರೀತಿಗೆ ತಿರುಗಿತ್ತು. ನಂತರ ಇಬ್ಬರು ಒಂದೇ ಫ್ಲ್ಯಾಟ್‌ನಲ್ಲಿ ಸಹಜೀವನ ನಡೆಸುತ್ತಿದ್ದರು.

ಇತ್ತಿಚೆಗೆ ಸೌಮಿನಿ ಪಶ್ವಿಮ ಬಂಗಾಳಕ್ಕೆ ಹೋಗಿದ್ದರು. ಈ ವೇಳೆ, ಬೆಂಗಳೂರಿಗೆ ವಾಪಸ್ ಬರುವಾಗ ಆಕೆಯ ಪತಿಗೆ ಮದುವೆಯಾದಾಗಿನಿಂದಲೂ ನೀನು ನನಗೆ ಕಿರುಕುಳ ನೀಡುತ್ತಿದ್ದೀಯಾ. ನಿನ್ನ ಜೊತೆ ನಾನು ಇನ್ನು ಮುಂದೆ ಇರುವುದಿಲ್ಲ. ಇಲ್ಲಿಗೆ ಮತ್ತೆ ನಾನು ವಾಪಸ್ ಬರುವುದಿಲ್ಲ ಎಂದು ಹೇಳಿದ್ದಾಳೆ.

ಇದರಿಂದ ಅನುಮಾನಗೊಂಡ ಪತಿ ಆಕೆಯ ಬಗ್ಗೆ ಸಂಬಂಧಿಸಿದವರಿಗೆ ಕೇಳಿದಾಗ ಸೌಮಿನಿ ಸಹಜೀವನ ನಡೆಸುತ್ತಿರುವುದು ಗೊತ್ತಾಗಿದೆ. ಬಳಿಕ ಪತಿ ಸೌಮಿನಿಯನ್ನು ಈ ಬಗ್ಗೆ ಪತಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಟ್ಟು ಬಿಡದೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಬಳಿಕ, ಅವರಿಬ್ಬರ ಪ್ರೀತಿ ವಿಚಾರ ಎಲ್ಲರಿಗೂ ತಿಳಿದಿದೆ. ಇನ್ನು ಅವರನ್ನು ಯಾರೂ ಸುಮ್ಮನೆ ಬಿಡುವುದಿಲ್ಲ ಎಂದು ತಿಳಿದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಬೆಂಕಿ ಹಚ್ಚಿಕೊಂಡಿದ್ದ ಸಂದರ್ಭದಲ್ಲಿ ಇಬ್ಬರೂ ಕೂಗಾಡಿದ್ದರು. ಫ್ಲ್ಯಾಟ್‌ನಿಂದ ಕಿರುಚಾಟ ಕೇಳಿ ಸ್ಥಳೀಯರು ಸಹಾಯಕ್ಕೆ ತೆರಳಿದ್ದರು. ಆದರೆ, ಅಷ್ಟರಲ್ಲಾಗಲೇ, ಸೌಮಿನಿ ದಾಸ್ ಅವರು ಸಂಪೂರ್ಣ ಸುಟ್ಟು ಹೋಗಿದ್ದರು. ಅಬಿಲ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿವೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...