ಬೆಂಗಳೂರು | ಅ.31ರಂದು ಮಲೆನಾಡು-ಕರಾವಳಿ ಸಮಸ್ಯೆಗಳ ಸಮಾಲೋಚನೆ ಸಭೆ

Date:

ಮಲೆನಾಡು-ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಜನರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ಕುರಿತು ಸಮಾಲೋಚಿಸಿ ಪರಿಹಾರ ಹುಡುಕಲು ಮತ್ತು ವಿವಿಧ ಹಕ್ಕುಗಳ ಹಕ್ಕೊತ್ತಾಯವನ್ನು ಸರ್ಕಾರದ ಮುಂದಿಡಲು ಮಲೆನಾಡು ಕರಾವಳಿ ಜನಪರ ಒಕ್ಕೂಟ ತೀರ್ಮಾನಿಸಿದೆ. ಅಕ್ಟೋಬರ್‌ 31ರ ಬೆಳಗ್ಗೆ 10ಗಂಟೆಗೆ ಬೆಂಗಳೂರಿನ ಆದಿಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸುವುದಾಗಿ ತಿಳಿಸಿದೆ.

ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಒಕ್ಕೂಟದ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ, “ಮಲೆನಾಡು-ಕರಾವಳಿ ಜನಪರ ಒಕ್ಕೂಟ ಅನೇಕ ವರ್ಷಗಳಿಂದ ಏಳು ಜಿಲ್ಲೆಗಳ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತುಕೊಟ್ಟು ಹೋರಾಟ ಮಾಡುತ್ತಾ ಬಂದಿದೆ. ಸ್ಥಳೀಯ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ಪರಿಹಾರಗಳನ್ನು ಹುಡುಕಿಕೊಳ್ಳುವಲ್ಲಿ ಶ್ರಮಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಕರಾವಳಿ-ಮಲೆನಾಡು ಭಾಗದಲ್ಲಿ ರೈತಾಪಿ ವರ್ಗ, ಮೀನುಗಾರರು ಸೇರಿದಂತೆ ಅನೇಕರು ಕಟ್ಟಿಕೊಂಡಿದ್ದಾರೆ. ಕರಾವಳಿ ಮತ್ತು ಕಾಡು ಇಲ್ಲಿನ ಜನರಿಗೆ ಹೆಚ್ಚು ಉದ್ಯೋಗವನ್ನು ಒದಗಿಸಿ ಕೊಟ್ಟಿದ್ದು, ಸರ್ಕಾರಗಳಿಂದ ಸೂಕ್ತ ಮಾನ್ಯತೆ ಸಿಕ್ಕಿಲ್ಲ. ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಜನಪರ ಕಾಯ್ದೆಗಳು ಇಲ್ಲದಿರುವುದು ಇಲ್ಲಿನ ಸಾಮಾನ್ಯ ಜನರಿಗೆ ಅನಾನುಕೂಲವಾಗಿದೆ. ಈ ಭಾಗದಿಂದ ಸಂಸ್ಕೃತಿ, ಭಾಷೆ, ರಾಜಕೀಯ, ಸಾಹಿತ್ಯ, ಕಲೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಅಪಾರವಾದ ಕೊಡುಗೆ ಇದ್ದರೂ, ಈ ಭಾಗದ ಜನ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಮಸ್ಯೆ, ಮೀನುಗಾರರ ಸಮಸ್ಯೆಗಳನ್ನು ಪರಿಹರಿಸಬೇಕು. ಅರಣ್ಯ ಹೊತ್ತುವರಿ ಪರಿಹಾರ, ಕಸ್ತೂರಿ ರಂಗನ್ ವರದಿಗಾಗಿ ಹೊಸ ಸೂತ್ರ ರಚನೆ, ಹೊಸ ತಾಲೂಕುಗಳ ಅಭಿವೃದ್ಧಿ, ಉಡುಪಿ ಆಗುಂಬೆ ಹೆದ್ದಾರಿ ನವೀಕರಣ, ನದಿ ಮೂಲಗಳ ರಕ್ಷಣೆ ಪ್ರಕೃತಿ ಸಹಜ ನದಿ ಜೋಡಣೆಗೆ ಮಹತ್ವ, ಚಿಕ್ಕಮಗಳೂರು ಮಡಿಕೇರಿ ಹಾಗೂ ಸೂಕ್ತ ಪ್ರದೇಶಕ್ಕೆ ರೈಲ್ವೆ ಪಥ ವಿಸ್ತರಣೆಯ ಕಡೆಗೆ ಸರಕಾರ ಗಮನ ಹರಿಸಬೇಕು” ಎಂದು ಅವರು ಒತ್ತಾಯಿಸಿದರು.

ಮಲೆನಾಡು-ಕರಾವಳಿ ಭಾಗಕ್ಕೆ ಮೆಡಿಕಲ್ ಕಾಲೇಜು, ಐಐಟಿ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆಗಳನ್ನು ರೂಪಿಸಬೇಕು. ಜಾತಿ, ಮತ, ಭೇದ ಇಲ್ಲದೆ ಅಸ್ಪೃಶ್ಯತೆ ವಿರುದ್ಧ ಸಂಘಟನೆ ಮಾಡುತ್ತಾ ಶೋಷಿತರ ಕೂಗಾಗಿದ್ದ ಕ್ರಾಂತಿಕಾರಿ ಸಾಮಾಜಿಕ ಸಮಾನತೆಯ ಹರಿಕಾರ ನಾರಾಯಣ ಗುರುಗಳ ಹೆಸರಲ್ಲಿ ವಿಶ್ವವಿದ್ಯಾನಿಲಯ ನಿರ್ಮಾಣ ಆಗಬೇಕು ಎಂಬ ಇನ್ನಿತರ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

ಮಲೆನಾಡು-ಕರಾವಳಿ ಜನಪರ ಒಕ್ಕೂಟ ಸಂಚಾಲಕ ಅನಿಲ್ ಹೊಸಕೊಪ್ಪ ಮಾತನಾಡಿ, ಜನಪರ ಒಕ್ಕೂಟದ ಮೂಲಕ ಏಳು ಜಿಲ್ಲೆಗಳನ್ನು ಒಳಗೊಂಡ ಮಲೆನಾಡು ಕರಾವಳಿ ಪ್ರದೇಶದ ಸಮಸ್ಯೆಗಳನ್ನು ಹೋರಾಟಗಳ ಮೂಲಕ ಸರ್ಕಾರಕ್ಕೆ ತಿಳಿಸುವುದು ನಮ್ಮ ಮುಖ್ಯ ಉದ್ದೇಶ. ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದಲ್ಲಿ ರೈತರು ಸಾರ್ವಜನಿಕರು ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮತ್ತಷ್ಟು ಸದೃಢರಾಗಬೇಕಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಕಣ್ಣು ತೆರೆಸುಲು ನಾವು ಶ್ರಮಿಸುತ್ತಿದ್ದೇವೆ ಎಂದರು.

ಈವೇಳೆ ತೇಜ್ ಶೆಟ್ಟಿ, ಮಹೇಶ್ ಶಿರಸಿ, ಸಂತೋಷ್ ಶೆಟ್ಟಿ, ಅಬ್ಬಾಸ್ ಕೆಗ್ಗ, ಅಬ್ಬಾಸ್ ಧರ್ಮಸ್ಥಳ, ನವೀನ್ ಮಾವಿನಕಟ್ಟೆ, ಕಿರಣ್ ಮಲ್ನಾಡ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...