ಬೆಂಗಳೂರು | ಗುಂಡು ಹಾರಿಸಿ ವಿದ್ಯಾರ್ಥಿನಿಯನ್ನು ಕೊಂದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

Date:

ವಿದ್ಯಾರ್ಥಿನಿ ಮೇಲೆ ಕಂಟ್ರಿಮೇಡ್ ಪಿಸ್ತೂಲ್​ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಅಪರಾಧಿಗೆ ಬೆಂಗಳೂರು ನಗರದ ಮ್ಯಾಜಿಸ್ಟ್ಟೇಟ್ ನ್ಯಾಯಾಲಯವು ಜೀವಾವಧಿ ಶಿಕ್ಷೆಯ ತೀರ್ಪು ನೀಡಿದೆ.

ಭಾರತೀಯ ನ್ಯಾಯ ಸಂಹಿತೆ(ಐಪಿಸಿ) ಕೊಲೆ, ಕೊಲೆಯತ್ನ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್ ಅಡಿ ಬಂಧಿತನಾಗಿದ್ದ ಅಪರಾಧಿ ಮಹೇಶ್ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಮೀನಾಕುಮಾರಿ ಎಸ್ ರಾಜವಂಶಿ ವಾದ ಮಂಡಿಸಿದ್ದರು. ನ್ಯಾಯಧೀಶೆ ಗೀತಾ ಕೆ ಬಿ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆಯ ತೀರ್ಪು ನೀಡಿದ್ದಾರೆ.

ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದೋಷಿಯೆಂದು ತೀರ್ಪು ನೀಡಿದ್ದು, ಅಪರಾಧಿಗೆ ಒಟ್ಟು ₹3.50 ಲಕ್ಷ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ ಕಠಿಣ ಕಾರಾಗೃಹ ಶಿಕ್ಷೆ, ವಸೂಲಿಯಾದ ದಂಡ ಮೊತ್ತದಲ್ಲಿ ಹತ್ಯೆಯಾದ ವಿದ್ಯಾರ್ಥಿನಿ ಗೌತಮಿ ಕುಟುಂಬಕ್ಕೆ ₹2 ಲಕ್ಷ ಹಾಗೂ ಗುಂಡೇಟು ತಿಂದಿದ್ದ ಶಿರೀಷಾಳಿಗೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹2 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ಪಿಯು ಕಾಲೇಜಿನಲ್ಲಿ ಮಹೇಶ್‌ ಎಂಬಾತ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಕಾಲೇಜು ಆವರಣದಲ್ಲಿರುವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿಯೂ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ಗುಂಡೇಟು ತಿಂದಿದ್ದ ದ್ವಿತೀಯ ಪಿಯು ಗೌತಮಿ ಹಾಗೂ ಪ್ರಥಮ ಪಿಯು ಓದುತ್ತಿದ್ದ ಶಿರೀಷಾ ಈ ಹಾಸ್ಟೆಲ್​ನಲ್ಲಿ ತಂಗಿದ್ದರು. 2015ರ ಮಾರ್ಚ್ 31ರಂದು ರಾತ್ರಿ 10ರ ಸುಮಾರಿಗೆ ಹಾಸ್ಟೆಲ್​ಗೆ ನುಗ್ಗಿದ ಮಹೇಶ್, ಪಿಸ್ತೂಲ್​ನಿಂದ ಗೌತಮಿ ತಲೆಗೆ ಹಾಗೂ ಶಿರಿಷಾ ಮುಖದ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ.

ದುರ್ಘಟನೆಯಲ್ಲಿ ಗೌತಮಿ ಸಾವನ್ನಪ್ಪಿದ್ದರೆ, ಶಿರೀಷಾ ಗಂಭೀರವಾಗಿ ಗಾಯಗೊಂಡಿದ್ದಳು. ಕೊಲೆ-ಕೊಲೆಯತ್ನ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಕಾಡುಗೋಡಿ ಠಾಣೆಯ ಇನ್‌ಸ್ಪೆಕ್ಟರ್​ ಎಂ ಎಂ ಪ್ರಶಾಂತ್(ಪ್ರಸ್ತುತ ಸಿಐಡಿ ಸೈಬರ್ ವಿಭಾಗದ ಡಿವೈಎಸ್‌ಪಿ) ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಹತ್ಯೆಗೆ ಕಾರಣ : “ಹಾಸ್ಟೆಲ್​ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುವಾಗ ಮಹೇಶ್ ಅಕ್ರಮವಾಗಿ ವಿದ್ಯಾರ್ಥಿನಿಯರ ವಸತಿನಿಲಯದ ಮುಂದೆ ಓಡಾಡುತ್ತಿದ್ದ. ಇದಕ್ಕೆ ಗೌತಮಿ ಆಕ್ಷೇಪಿಸಿ ಬೈದು ವಾಪಸ್ ಕಳುಹಿಸಿದ್ದರು. ಅಲ್ಲದೇ ಕೃತ್ಯ ಎಸಗುವ ಒಂದು ತಿಂಗಳ ಹಿಂದೆ ಸಿಇಟಿ ಪರೀಕ್ಷೆಗಾಗಿ ಗೌತಮಿ ಕಾಲೇಜು ಆವರಣದಲ್ಲಿ ಅರ್ಜಿ ಭರ್ತಿ ಮಾಡುವಾಗ ಅಪರಾಧಿ ಅರ್ಜಿ ಭರ್ತಿ ಮಾಡಿಕೊಡಲೇ ಎಂದು ಕೇಳಿದ್ದ. ಇದಕ್ಕೆ ಗೌತಮಿಯು ನೀನು ಕಾಲೇಜು ಅಟೆಂಡರ್ ಆಗಿದ್ದು, ನೀನೇನು ಅರ್ಜಿ ಭರ್ತಿ ಮಾಡಿಕೊಡುತ್ತೀಯಾ? ನಿನ್ನ ಕೆಲಸ ನೋಡು ಎಂದು ಹೇಳಿದ್ದಳು. ಎರಡು ಬಾರಿ ತನ್ನನ್ನು ಹೀಯಾಳಿಸಿರುವುದಾಗಿ ಭಾವಿಸಿದ ಆರೋಪಿ ಸಂಚು ರೂಪಿಸಿ ತನ್ನ ಬಳಿಯಿದ್ದ ಪಿಸ್ತೂಲ್​ನಿಂದ ಶೂಟ್ ಮಾಡಿ ಹತ್ಯೆ ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿತ್ತು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜನರಿಗೆ ವಿಜ್ಞಾನದ ಆವಿಷ್ಕಾರ ಬೇಕು ಆದರೆ, ವೈಜ್ಞಾನಿಕ ಚಿಂತನೆ ಬೇಡವಾಗಿದೆ: ಪ್ರೊ. ನರೇಂದ್ರ ನಾಯಕ್

ದ್ವಿತೀಯ ಪಿಯುಸಿವರೆಗೂ ವ್ಯಾಸಂಗ ಮಾಡಿದ್ದ ಮಹೇಶ್, ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವ ಪ್ರವೃತ್ತಿ ಬೆಳೆಸಿಕೊಂಡಿದ್ದ. ಖಾಸಗಿ ಆಂಗ್ಲ ಪತ್ರಿಕೆಯೊಂದರಲ್ಲಿ ದೆಹಲಿ ಪೊಲೀಸರು ಬಿಹಾರದಲ್ಲಿ ನಡೆಯುತ್ತಿದ್ದ ಅಕ್ರಮವಾಗಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲದಲ್ಲಿ ತೊಡಗಿದ್ದ ಆರೋಪಿಗಳ ಬಂಧನದ ಬಗ್ಗೆ ಸುದ್ದಿ ಓದಿ, ಪಿಸ್ತೂಲ್ ಖರೀದಿ ವ್ಯಾಮೋಹ ಬೆಳೆಸಿಕೊಂಡಿದ್ದ. ಪಿಸ್ತೂಲ್ ಖರೀದಿಗಾಗಿಯೇ ಬೆಂಗಳೂರಿನಿಂದ ಬಿಹಾರದ ಮುನ್ಗರ್ ಎಂಬ ಪ್ರದೇಶಕ್ಕೆ ತೆರಳಿದ್ದ. ಅಕ್ರಮ ಪಿಸ್ತೂಲ್ ಮಾರಾಟಗಾರರನ್ನು ಸಂಪರ್ಕಿಸಿ ₹15,000ದ ಪಿಸ್ತೂಲ್ ಖರೀದಿಸಿ ನಗರಕ್ಕೆ ವಾಪಸ್ ಆಗಿದ್ದ. ಕಾಲೇಜಿನಲ್ಲಿ ವಿದ್ಯಾರ್ಥಿನಿಯು ಎರಡು ಬಾರಿ ಅವಮಾನ ಮಾಡಿರುವುದನ್ನು ಸಹಿಸದೇ ಸಂಚು ರೂಪಿಸಿ ಪಿಸ್ತೂಲ್​ನಿಂದ ಗುಂಡು ಹಾರಿಸಿ ಸಾಯಿಸಿದ್ದ” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...