ಬೆಂಗಳೂರು | ದರ್ಶನ್‌ಗೆ ರಕ್ತದೊತ್ತಡದಲ್ಲಿ ಏರುಪೇರು; ವಿಚಾರಣೆ ವೇಳೆ ಹೈಕೋರ್ಟ್‌ಗೆ ಮಾಹಿತಿ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರ ರಕ್ತದೊತ್ತಡದಲ್ಲಿ ಪದೇ ಪದೆ ಭಾರೀ ಏರುಪೇರು ಕಂಡುಬರುತ್ತಿದೆ ಎಂದು ಅವರ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, 2ನೇ ಆರೋಪಿ ದರ್ಶನ್‌, 6ನೇ ಆರೋಪಿ ಜಗದೀಶ್‌, 7ನೇ ಆರೋಪಿ ಅನುಕುಮಾರ್ ಅಲಿಯಾಸ್‌ ಅನು, 11ನೇ ಆರೋಪಿ ನಾಗರಾಜ್‌ ಮತ್ತು 12ನೇ ಆರೋಪಿ ಎಂ.ಲಕ್ಷ್ಮಣ್‌, ಪ್ರತ್ಯೇಕವಾಗಿ ಸಲ್ಲಿಸಿರುವ ನಿಯಮಿತ(ರೆಗ್ಯುಲರ್‌) ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ದರ್ಶನ್‌ ಪರ ಹಿರಿಯ ವಕೀಲ ಸಿ ವಿ ನಾಗೇಶ್‌ ತಮ್ಮ ವಾದ ಮುಂದುವರಿಸಿದ್ದು, “ದರ್ಶನ್‌, ತಮ್ಮ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆ ಪಡೆಯಲು ಪದೇ ಪದೆ ಏರಿಳಿತದ ರಕ್ತದೊತ್ತಡ ಅಡ್ಡಿ ಮಾಡುತ್ತಿದೆ. ಹಾಗಾಗಿ ವೈದ್ಯಕೀಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿರುವ ಅವರು ಹೆಚ್ಚಿನ ವಿವರಗಳನ್ನು ಈವರೆಗೆ ಹಂಚಿಕೊಂಡಿಲ್ಲ” ಎಂದು ನ್ಯಾಯಪೀಠದ ಪ್ರಶ್ನೆಯೊಂದಕ್ಕೆ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದರ್ಶನ್‌ಗೆ ಶಸ್ತ್ರಚಿಕಿತ್ಸೆ ನಡೆಸಲು ಯಾವುದೇ ಸಮಸ್ಯೆಯಿಲ್ಲವೆಂದು ವೈದ್ಯರೇ ನೀಡಿರುವ ಪ್ರಮಾಣ ಪತ್ರದಲ್ಲಿ ಇದೆಯಲ್ಲಾ” ಎಂದು ನ್ಯಾಯಪೀಠವು ಪ್ರಶ್ನಿಸಿದೆ.

ನ್ಯಾಯಪೀಠದ ಪ್ರಶ್ನೆಯನ್ನು ನಿರಾಕರಿಸಿದ ವಕೀಲ ನಾಗೇಶ್‌, “ದರ್ಶನ್‌ಗೆ ಎಂಆರ್‌ಐ ಮಾಡಿಸಲಾಗಿದೆ. ರಕ್ತದೊತ್ತಡದಲ್ಲಿ ಪದೇ ಪದೆ ಏರಿಳಿತ ಕಂಡುಬರುತ್ತಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿಲ್ಲ. ಯಾವಾಗ ಶಸ್ತ್ರಚಿಕಿತ್ಸೆ ಮಾಡಬೇಕೆಂಬುದನ್ನು ವೈದ್ಯರು ನಿರ್ಧರಿಸಬೇಕಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ದರ್ಶನ್‌ ಉತ್ತಮ ನಡತೆ ಹೊಂದಿದ ವ್ಯಕ್ತಿ ಎಂಬುದನ್ನು ಮಂಡಿಸಿದ ನಾಗೇಶ್‌, “ಒಂದು ವೇಳೆ ದರ್ಶನ್‌ಗೆ ರೇಣುಕಸ್ವಾಮಿಯನ್ನು ಕೊಲೆಮಾಡುವ ಉದ್ದೇಶವಿದ್ದಿದ್ದರೆ, ರೇಣುಕಸ್ವಾಮಿಗೆ ನೀರು ಕೊಡಿ, ಊಟ ತಂದು ಕೊಡಿ, ಆತನ ಚಿತ್ರ ಸೆರೆ ಹಿಡಿಯಿರಿ, ವಿಡಿಯೊ ಮಾಡಿ, ಅವನನ್ನು ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿ ಬಿಡಿ ಎಂದೆಲ್ಲಾ ಹೇಳುತ್ತಿದ್ದರೇ” ಎಂದು ಪ್ರಶ್ನಿಸಿದರು.

“ಘಟನೆಯ ಕುರಿತಂತೆ ಪ್ರಾಸಿಕ್ಯೂಷನ್‌ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯನ್ನು ತಡವಾಗಿ ದಾಖಲಿಸಿದೆ. ಅಲ್ಲದೆ, ಸಾಕ್ಷಿಗಳ ಹೇಳಿಕೆಗಳಲ್ಲಿ ಸಾಕಷ್ಟು ವಿರೋಧಾಭಾಸವಿದೆ. ಸುಳ್ಳು ಹೇಳುವುದಕ್ಕೂ ಒಂದು ಮಿತಿಯಿದೆ. ಆದರೆ, ಪ್ರಾಸಿಕ್ಯೂಷನ್‌ ಅರ್ಜಿದಾರರ ವಿರುದ್ಧ ಮಿತಿಮೀರಿದ ಸುಳ್ಳುಗಳನ್ನೊಳಗೊಂಡ ದೋಷಾರೋಪ ಪಟ್ಟಿ ಸಿದ್ಧಪಡಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಚಿವ ಜಮೀರ್, ಸಿಎಂ ಬಗ್ಗೆ ಅವಹೇಳನ; ಮೋಹಿತ್ ನರಸಿಂಹ ಮೂರ್ತಿ ಬಂಧನ

ಪ್ರಕರಣದ 11ನೇ ಆರೋಪಿ ದರ್ಶನ್‌ ಅವರ ವ್ಯವಸ್ಥಾಪಕ ಆರ್‌ ನಾಗರಾಜು ಪರ ಮತ್ತೊಬ್ಬ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, “ಯಾವ ಕಾರಣಕ್ಕಾಗಿ ಆರೋಪಿಯನ್ನು ಬಂಧಿಸಲಾಗಿದೆಯೆಂಬ ವಿಚಾರವನ್ನು ತನಿಖಾಧಿಕಾರಿಗಳು ತಮ್ಮ ರಿಮ್ಯಾಂಡ್‌ ಅರ್ಜಿಯಲ್ಲಿ ಉಲ್ಲೇಖ ಮಾಡಿಲ್ಲ. ಈ ಲೋಪವನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಲ್ಲ” ಎಂದು ಆಕ್ಷೇಪಿಸಿದರು. ದಿನದ ಕಲಾಪ ಮುಗಿದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...