ಬೆಂಗಳೂರು | ಎಚ್ ಎಸ್ ದೊರೆಸ್ವಾಮಿ ಪ್ರತಿಷ್ಠಾನ ಸ್ಥಾಪಿಸಲು ಅಭಿಮಾನಿ-ಅನುಯಾಯಿಗಳ ತೀರ್ಮಾನ

Date:

ರಾಜ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿಯವರ ನೆನಪನ್ನು ಮುಂದಿನ ಪೀಳಿಗೆಗಳಿಗಾಗಿ ಉಳಿಸಿಕೊಳ್ಳುತ್ತ, ಅವರ ಕಾಳಜಿಗಳನ್ನೂ ಹೋರಾಟಗಳನ್ನೂ ಮುಂದಕ್ಕೆ ಸಾಗಿಸುವ ಉದ್ದೇಶದಿಂದ ʼಎಚ್.ಎಸ್. ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನʼ ಎಂಬ ಸಂಸ್ಥೆ ಸ್ಥಾಪಿಸಲು ದೊರೆಸ್ವಾಮಿಯವರ ಅಭಿಮಾನಿಗಳು-ಅನುಯಾಯಿಗಳು ನಿರ್ಧರಿಸಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ನಡೆದ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸೌಹಾರ್ದ-ಸಹಬಾಳ್ವೆ, ಅಂತ್ಯೋದಯ-ಸರ್ವೋದಯ, ಪರಿಸರ ಸಂರಕ್ಷಣೆ, ಸಂವಿಧಾನ-ಪ್ರಜಾಪ್ರಭುತ್ವದ ರಕ್ಷಣೆ, ಕೋಮುವಾದ-ಬಂಡವಾಳವಾದ-ಫ್ಯಾಸಿಸಂಗೆ ವಿರೋಧ ಮುಂತಾಗಿ ದೊರೆಸ್ವಾಮಿಯವರು ದಣಿವರಿಯದೆ ಹೋರಾಟ ನಡೆಸಿದ್ದಾರೆ. ಈ ವಿಚಾರಗಳನ್ನು, ಅಂತೆಯೇ ಸ್ವಾತಂತ್ರ್ಯ ಚಳವಳಿಯ ನೈಜ ಇತಿಹಾಸವನ್ನು ಶಾಲಾ-ಕಾಲೇಜುಗಳ ಮೂಲಕ ಯುವಜನತೆಗೆ ಪರಿಚಯಿಸಬೇಕೆಂದು ಕೂಡ ಸಭೆಯಲ್ಲಿ ಅಭಿಪ್ರಾಯಗಳು ವ್ಯಕ್ತವಾದವು.

ದೊರೆಸ್ವಾಮಿ

ಬೆಂಗಳೂರಿನ ಯಾವುದಾದರೊಂದು ಪ್ರಮುಖ ರಸ್ತೆ ಅಥವಾ ಮೆಟ್ರೊ ನಿಲ್ದಾಣಕ್ಕೆ ದೊರೆಸ್ವಾಮಿಯವರ ಹೆಸರಿಡಬೇಕು, ಸ್ವಾತಂತ್ರ್ಯ ಉದ್ಯಾನದಲ್ಲಿ ಅವರ ಹೆಸರಿನಲ್ಲಿ ವಿವಿಧೋದ್ದೇಶ ಕೇಂದ್ರವನ್ನು ಸ್ಥಾಪಿಸಬೇಕು, ಬೆಂಗಳೂರು ವಿ.ವಿ. ಗಾಂಧಿ ಅಧ್ಯಯನ ಕೇಂದ್ರದಲ್ಲಿ ಅವರ ಹೆಸರಲ್ಲಿ ದತ್ತಿ ಸ್ಥಾಪಿಸಬೇಕು, ಅವರ ಬರಹ-ಭಾಷಣಗಳನ್ನು ಪುಸ್ತಕಗಳಾಗಿ ಪ್ರಕಟಿಸುವ ಕೆಲಸ ಮಾಡಬೇಕು ಎಂದು ಸಭೆ ಸರ್ಕಾರವನ್ನು ಆಗ್ರಹಿಸಿತು. ಇದಕ್ಕಾಗಿ ಗಣ್ಯರ ನಿಯೋಗವೊಂದು ಶೀಘ್ರವೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಅವರಿಗೆ ಮನವರಿಕೆ ಮಾಡಬೇಕು ಎಂದು ನಿರ್ಣಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರ!

ಸಭೆಯಲ್ಲಿ ಹಿರಿಯ ಮಹಿಳಾ ಹೋರಾಟಗಾರ್ತಿಯರಾದ ಡಾ.ವಿಜಯಮ್ಮ, ಇಂದಿರಾ ಕೃಷ್ಣಪ್ಪ, ರೈತ ಚಳವಳಿಯ ವೀರಸಂಗಯ್ಯ ಮತ್ತು ಸಿದ್ದಗೌಡ ಮೋದಗಿ, ಗೊರೂರು ರಾಮಸ್ವಾಮಿಯವರ ಮಗಳು ಡಾ. ವಸಂತಿ ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಲ್ಲದೆ ರಾಜ್ಯಾದ್ಯಂತ ಹಲವಾರು ಗಣ್ಯರು, ಹೋರಾಟಗಾರರು ಈ ಕಾರ್ಯದಲ್ಲಿ ತಾವುಗಳೂ ಏನಾದರೊಂದು ಜವಾಬ್ದಾರಿ ನಿರ್ವಹಿಸುವ ಇಚ್ಛೆ ವ್ಯಕ್ತಪಡಿಸಿ ಸಂದೇಶಗಳನ್ನು ಕಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...