ಬೆಂಗಳೂರು | ಮಲೆನಾಡಿನ ಜನವಿರೋಧಿ ಅರಣ್ಯ ಕಾಯ್ದೆ ಕೈಬಿಡುವಂತೆ ನಿಯೋಗ; ಸಮಸ್ಯೆ ಪರಿಹಾರಕ್ಕೆ ಸಚಿವ ಕೃಷ್ಣಬೈರೇಗೌಡ ಭರವಸೆ

Date:

ಮಲೆನಾಡಿನ ಜನವಿರೋಧಿ ಅರಣ್ಯ ಕಾಯ್ದೆಯನ್ನು ಕೈಬಿಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ, ಮಲೆನಾಡಿನ ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿಯ ನಿಯೋಗ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ ಸಲ್ಲಿಸಿತು.

ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ನೀಡಿದ್ದು, “ಮಲೆನಾಡಿನಲ್ಲಿ ಬದುಕುತ್ತಿರುವ ಜನರ ಪರಿಸ್ಥಿತಿ ಹದಗೆಟ್ಟಿದೆ. ಪರಿಸರ ಸಂರಕ್ಷಣೆ ಹೆಸರಿನಲ್ಲಿ ಸಾವಿರಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ಕಸ್ತೂರಿ ರಂಗನ್, ಮಾಧವ ಗಾಡ್ಗೀಳ್ ವರದಿ ಮುಂದಿಟ್ಟುಕೊಂಡು ಕಂದಾಯ ಭೂಮಿಯನ್ನು ಅರಣ್ಯ ಭೂಮಿಯೆಂದು ಘೋಷಿಸಿರುವುದು ಸರಿಯಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ಡೀಮ್ಡ್ ಫಾರೆಸ್ಟ್, ರಿಸರ್ವ್ ಫಾರೆಸ್ಟ್ ಮಾಡಿರುವುದನ್ನು ಸೂಕ್ಷ್ಮವಾಗಿ ಮತ್ತೆ ಪರಿಶೀಲನೆ ಮಾಡಬೇಕು. ಇಲ್ಲಿ ವಾಸ್ತವವಾಗಿ ಅನುಭವಿಸುತ್ತಿರುವುದನ್ನು ಸರ್ಕಾರ ಗಮನಿಸಬೇಕು. ಸೂಕ್ತವಾದ ರೀತಿಯಲ್ಲಿ ಅರಣ್ಯ ಕಾಯ್ದೆ ತಿದ್ದುಪಡಿ ಮಾಡಬೇಕು.‌ ರಾಜ್ಯದಲ್ಲಿ ಈ ಸಮಸ್ಯೆಗೆ ಒಂದು ಸಮಿತಿ ರಚನೆ ಮಾಡಿ ಮಲೆನಾಡಿನ ಜನರ ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸ್ವೀಕರಿಸಿದ ಸಚಿವರು ಮಾತನಾಡಿ, “ನಾವು ಮಲೆನಾಡಿನ ಸಮಸ್ಯೆಯನ್ನು ಆಲಿಸಿದ್ದೇವೆ. ಸರ್ಕಾರ ಜಾರಿ ಮಾಡಿರುವ ವರದಿಯನ್ನು ನಮ್ಮಲ್ಲಿ ತೆಗೆದು ಹಾಕಲು ಸಾಧ್ಯವಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಮಾತ್ರ ಸಾಧ್ಯ. ನಿಮ್ಮ ಕ್ಷೇತ್ರದ ಲೋಕಸಭಾ ಸದಸ್ಯರು ಗಮನವಹಿಸಿ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ, ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಸಚಿವ ಹೆಚ್‌ ಸಿ ಮಹದೇವಪ್ಪ

“ನೀವು ಕೇಳಿದಂತೆ ರಾಜ್ಯದಲ್ಲಿ ಕೂಡಲೇ ಒಂದು ಸಮಿತಿ ರಚನೆ ಮಾಡಲು ಸಾಧ್ಯವಿಲ್ಲ. ಮೊದಲು ಕೇಂದ್ರದಿಂದ ಅರಣ್ಯ ಕಾಯ್ದೆ ವರದಿಗಳನ್ನು ಅಲ್ಲಿ ಸರಿಪಡಿಸಿದ ನಂತರ ನಾವು ಸಮಿತಿ ರಚನೆ ಮಾಡಲು ಸಾಧ್ಯವಾಗುತ್ತದೆ. ಈ ಕುರಿತು ನಾವು ಸಾಧ್ಯವಾದಷ್ಟು ಸರ್ಕಾರದ ಗಮನಕ್ಕೆ ತರುತ್ತೇವೆ. ಎಲ್ಲೆಲ್ಲಿ ಈ ಸಮಸ್ಯೆಯಿದೆ ಎಂಬುದನ್ನು ಪರಿಶೀಲಿಸಿ ಬಗೆಹರಿಸಲು ಕ್ರಮವಹಿಸುತ್ತೇವೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...