ಬೆಂಗಳೂರು | ಡಾ. ಸುನಿಲ್ ಕುಮಾರ್ ಹೆಬ್ಬಿ ಮೇಲೆ ಮಾರಣಾಂತಿಕ ಹಲ್ಲೆ; ಪೊಲೀಸ್ ರಕ್ಷಣೆಗೆ ಆಗ್ರಹ

Date:

ಯಲಹಂಕದ ಕೇಂದ್ರೀಯ ವಿಹಾರ ಬಹು ಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ವಾಸ ಮಾಡುತ್ತಿರುವ ಡಾ. ಸುನಿಲ್ ಕುಮಾರ್ ಹೆಬ್ಬಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆಯಿಂದ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಘಟನೆಗೆ ಸಂಬಂಧಿಸಿದಂತೆ ನೈಜ ಹೋರಾಟಗಾರರ ವೇದಿಕೆ ಯಲಹಂಕ ಪೊಲೀಸ್ ಠಾಣೆಗೆ ದೂರು ನೀಡಿದ್ದು, “ಡಾ. ಸುನಿಲ್ ಕುಮಾರ್ ಹೆಬ್ಬಿ ಅವರು ಬಡವರ, ದೀನ ದುರ್ಬಲರ ವೈದ್ಯಕೀಯ ಸೇವೆಯನ್ನು ಉಚಿತವಾಗಿ ಮಾಡುತ್ತಾ ಬಂದಿದ್ದಾರೆ. ಬಹಳ ಮುಖ್ಯವಾಗಿ ಕೋವಿಡ್-19 ಸಮಯದಲ್ಲಿ ಇಡೀ ದೇಶವೇ ತಲ್ಲಣವಾದ ಸಂದರ್ಭದಲ್ಲಿ ಮತ್ತು ಲಾಕ್‌ಡೌನ್ ಆದ ಸಂದರ್ಭದಲ್ಲಿ ಮೊಬೈಲ್ ಕ್ಲಿನಿಕ್ ಮುಖಾಂತರ ಸ್ಲಂಗಳಿಗೆ ತೆರಳಿ ಬಡವರಿಗೆ ಚಿಕಿತ್ಸೆ ನೀಡಿದ್ದರು. ಇವರು ಮೊಬೈಲ್ ಡಾಕ್ಟರ್ ಎಂದೇ ಖ್ಯಾತಿ ಪಡೆದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಡಾ. ಸುನಿಲ್ ಕುಮಾರ್ ಹೆಬ್ಬಿ ಅವರು ವಾಸವಿರುವ ಕೇಂದ್ರೀಯ ವಿಹಾರದ ಅಪಾರ್ಟ್‌ಮೆಂಟ್‌ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸೊಸೈಟಿ ಆಫ್ ರಿಜಿಸ್ಟರ್ ಅವರಿಗೆ ದೂರು ನೀಡಿದ್ದರು. ಹಾಗೆಯೇ ಅಲ್ಲಿನ ಅವ್ಯವಹಾರವನ್ನು ಮಾಹಿತಿ ಹಕ್ಕು ಕಾಯ್ದೆ ಮೂಲಕ ಬಯಲಿಗೆಳೆದು, ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್ ಮಾಡಿಸಿದ್ದರು ಹಾಗೂ ನೋಟಿಸ್ ಕೂಡ ಕೊಡಿಸಿದ್ದರೆಂದು ಹೇಳಲಾಗುತ್ತಿದೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕಾರಣಕ್ಕಾಗಿ ಅವರ ಮೇಲೆ ಕಾರ್ ಪಾರ್ಕಿಂಗ್ ವಿಷಯವನ್ನು ತೆಗೆದು ಸುನಿಲ್ ಯಾದವ್ ಮತ್ತು ಅವರ ಗುಂಪು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನಲ್ಲಿರುವ ಸಾಮಾಜಿಕ ಹೋರಾಟಗಾರರು ಮಲ್ಲೇಶ್ವರಂ ನಗರದ ಕೆ ಸಿ ಜನರಲ್ ಆಸ್ಪತ್ರೆಗೆ ಧಾವಿಸಿ ಅವರ ಆರೋಗ್ಯವನ್ನು ವಿಚಾರಿಸುವಂತೆ ನಮ್ಮ ಗಮನಕ್ಕೆ ತಂದಿದ್ದರು” ಎಂದಿದ್ದಾರೆ.

“ಬಡವರಿಗೆ ಉಚಿತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ಸುನಿಲ್ ಕುಮಾರ್ ಹೆಬ್ಬಿ ಅವರು ಮಾಹಿತಿ ಹಕ್ಕು ಕಾಯ್ದೆಯ ಅಡಿ ಕೆಲವು ಭ್ರಷ್ಟಾಚಾರವನ್ನು ಕೂಡ ಬಯಲು ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಾಕ್ಟರ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರಿನನ್ವಯ ಯಲಹಂಕ ಪೊಲೀಸ್ ಠಾಣೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಆದರೆ ಬಹಳ ಮುಖ್ಯವಾಗಿ ಕೊಲೆ ಪ್ರಯತ್ನವಾಗಿದ್ದರೂ ಸೆಕ್ಷನ್ 307ರ ಅಡಿ ಎಫ್‌ಐಆರ್ ದಾಖಲು ಮಾಡದೆ ಕರ್ತವ್ಯ ಲೋಪ ಮಾಡಿದ್ದಾರೆ. ಇದೊಂದು ಕೊಲೆ ಮಾಡುವ ಪ್ರಯತ್ನವೆಂದು ಸ್ಪಷ್ಟವಾಗಿ ಗೋಚರಿಸಿದರೂ ಕೂಡಾ ಪೊಲೀಸರು ಸೆಕ್ಷನ್ 307 ಹಾಕದಿರುವುದು ಅನುಮಾನಕ್ಕೆ ಎಡೆಮಾಡಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ: ಡಾ. ಆರತಿ ಕೃಷ್ಣ

“ಪೋಲಿಸ್ ಆಯುಕ್ತರಾದ ತಾವು ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಹಾಗೂ ಡಾಕ್ಟರ್ ಸುನಿಲ್ ಕುಮಾರ ಹೆಬ್ಬಿ ಅವರಿಗೆ ಕೂಡಲೇ ಪೊಲೀಸ್ ರಕ್ಷಣೆ ಒದಗಿಸಬೇಕು” ಎಂದು ನೈಜ ಹೋರಾಟಗಾರರ ವೇದಿಕೆಯು ಆಗ್ರಹಿಸಿದೆ.

ನೈಜ ಹೋರಾಟಗಾರರ ವೇದಿಕೆಯ ಪರವಾಗಿ ಎಚ್ ಎಂ ವೆಂಕಟೇಶ್, ಟಿ ನರಸಿಂಹಮೂರ್ತಿ, ಕುಣಿಗಲ್ ನರಸಿಂಹಮೂರ್ತಿ, ಎಲ್ ಎಸ್ ಮಲ್ಲಿಕಾರ್ಜುನ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...